RCB vs CSK: ಸಾವಿರ ರೂಪಾಯಿ ಟಿಕೆಟ್ 15000 ಕೊಟ್ಟರೂ ಸಿಗುತ್ತಿಲ್ಲ, ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಅಭಿಮಾನಿಗಳ ಅಳಲು

ಧೋನಿ ಮತ್ತು ಕೊಹ್ಲಿ ನಡುವಣ ಕದನ ನೋಡಲು ಉತ್ಸಾಹದಿಂದ ಬಂದಿದ್ದೇವೆ. ಆದರೆ, ಟಿಕೆಟ್​​ ಸಿಗುತ್ತಾ ಇಲ್ಲ. ಹೆಚ್ಚು ದುಡ್ಡು ಕೊಟ್ಟಾದರೂ ಟಿಕೆಟ್ ತೆಗೆದುಕೊಳ್ಳಲು ನಾವು ಸಿದ್ಧರಿದ್ದೇವೆ. ಆದರೆ, ಟಿಕೆಟ್ಟೇ ಸಿಗುತ್ತಿಲ್ಲ ಎಂದು ಅಭಿಮಾನಿಯೊಬ್ಬರು ಅಲವತ್ತುಕೊಂಡಿದ್ದಾರೆ.

RCB vs CSK: ಸಾವಿರ ರೂಪಾಯಿ ಟಿಕೆಟ್ 15000 ಕೊಟ್ಟರೂ ಸಿಗುತ್ತಿಲ್ಲ, ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಅಭಿಮಾನಿಗಳ ಅಳಲು
| Updated By: ಗಣಪತಿ ಶರ್ಮ

Updated on: May 18, 2024 | 4:47 PM

ಬೆಂಗಳೂರು, ಮೇ 18: ಐಪಿಎಲ್​​ (IPL 2024) ಟೂರ್ನಿಯ ಮಹತ್ವದ ಪಂದ್ಯಕ್ಕೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ (Chinnaswamy Stadium) ಕ್ಷಣಗಣನೆ ಆರಂಭವಾಗಿದೆ. ಆರ್​ಸಿಬಿ ಮತ್ತು ಸಿಎಸ್​​ಕೆ (RCB vs CSK) ಮಧ್ಯೆ ನಡೆಯುವ ಹಣಾಹಣಿ ವೀಕ್ಷಿಸಲು ಅಭಿಮಾನಿಗಳು ಸ್ಟೇಡಿಯಂನತ್ತ ಬರಲಾರಂಭಿಸಿದ್ದಾರೆ. ಸ್ಟೇಡಿಯಂ ಹೊರಭಾಗದಲ್ಲಿ ಮಧ್ಯಾಹ್ನದಿಂದಲೇ ಜನಸಂದಣಿ ಶುರುವಾಗಿದೆ. ಈ ಮಧ್ಯೆ, ಬ್ಲ್ಯಾಕ್​​​ನಲ್ಲಿ ಟಿಕೆಟ್ ಮಾರಾಟವಾಗುತ್ತಿರುವ ಬಗ್ಗೆ ಆರೋಪಗಳು ಕೇಳಿಬಂದಿವೆ. 1000 ರೂಪಾಯಿಯ ಟಿಕೆಟ್ 15000 ರೂ. ಕೊಟ್ಟರೂ ಸಿಗುತ್ತಿಲ್ಲ ಎಂದು ಅಭಿಮಾನಿಗಳು ‘ಟಿವಿ9’ ಬಳಿ ಅಳಲು ತೋಡಿಕೊಂಡಿದ್ದಾರೆ.

ಮತ್ತೊಂದು ಕಡೆ ವಿರಾಟ್ ಕೊಹ್ಲಿ ಹಾಗೂ ಎಂಎಸ್​​ ಧೋನಿ ಅಭಿಮಾನಿಗಳು ಮ್ಯಾಚ್ ನೋಡಲು ಕಾತುರರಾಗಿದ್ದು, ನೆಚ್ಚಿನ ಆಟಗಾರರ ಪರ ಘೋಷಣೆಗಳನ್ನು ಕೂಗುತ್ತಾ ಮೈದಾನದತ್ತ ದಾಂಗುಡಿ ಇಟ್ಟಿದ್ದಾರೆ. ಚಿನ್ನಸ್ವಾಮಿ ಸ್ಟೇಡಿಯಂ ಹೊರಭಾಗದಲ್ಲಿ ಎಲ್ಲಿ ನೋಡಿದರೂ ಆರ್​​ಸಿಬಿ ಹಾಗೂ ಸಿಎಸ್​​ಕೆ ಜೆರ್ಸಿಗಳೇ ಕಾಣಿಸುತ್ತಿವೆ.

ಐಪಿಎಲ್​ ಪ್ಲೇ ಆಫ್ ಹಂತ ಪ್ರವೇಶಿಸಲು ಉಭಯ ತಂಡಗಳಿಗೆ ಈ ಪಂದ್ಯದಲ್ಲಿ ಗೆಲ್ಲುವುದು ಅನಿವಾರ್ಯವಾಗಿದೆ. ಹೀಗಾಗಿ ಇತ್ತಂಡಗಳ ಅಭಿಮಾನಿಗಳ ಎದೆಯಲ್ಲಿ ಢವಢವ ಶುರುವಾಗಿದೆ.

ಇದನ್ನೂ ಓದಿ: IPL 2024: ಚಿನ್ನಸ್ವಾಮಿಯಲ್ಲಿ ಆರ್​ಸಿಬಿ- ಸಿಎಸ್​ಕೆ ಪ್ರದರ್ಶನ ಹೇಗಿದೆ? ಇಲ್ಲಿದೆ ಪೂರ್ಣ ಅಂಕಿಅಂಶ

ಧೋನಿ ಮತ್ತು ಕೊಹ್ಲಿ ನಡುವಣ ಕದನ ನೋಡಲು ಉತ್ಸಾಹದಿಂದ ಬಂದಿದ್ದೇವೆ. ಆದರೆ, ಟಿಕೆಟ್​​ ಸಿಗುತ್ತಾ ಇಲ್ಲ. ಹೆಚ್ಚು ದುಡ್ಡು ಕೊಟ್ಟಾದರೂ ಟಿಕೆಟ್ ತೆಗೆದುಕೊಳ್ಳಲು ನಾವು ಸಿದ್ಧರಿದ್ದೇವೆ. ಆದರೆ, ಟಿಕೆಟ್ಟೇ ಸಿಗುತ್ತಿಲ್ಲ ಎಂದು ಅಭಿಮಾನಿಯೊಬ್ಬರು ಅಲವತ್ತುಕೊಂಡಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow us
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
ವಿದ್ಯಾರ್ಥಿಗಳ ನಡುವೆಯೂ  ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಕಷ್ಟು ಜನಪ್ರಿಯರು
ವಿದ್ಯಾರ್ಥಿಗಳ ನಡುವೆಯೂ  ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಕಷ್ಟು ಜನಪ್ರಿಯರು
 ದುಡ್ಡಿನ ವಿಷಯದಲ್ಲಿ ದರ್ಶನ್ ಕಡ್ಡಿ ಮುರಿದಂತೆ ಮಾತಾಡುತ್ತಿದ್ದರು: ಕೆ ಮಂಜು
 ದುಡ್ಡಿನ ವಿಷಯದಲ್ಲಿ ದರ್ಶನ್ ಕಡ್ಡಿ ಮುರಿದಂತೆ ಮಾತಾಡುತ್ತಿದ್ದರು: ಕೆ ಮಂಜು
ಲೂಟಿ ಹೋಡೆಯೋಕೆ ಸರ್ಕಾರ ಸಿದ್ಧತೆ ಮಾಡ್ತಿದೆ -ಆರ್.ಅಶೋಕ್
ಲೂಟಿ ಹೋಡೆಯೋಕೆ ಸರ್ಕಾರ ಸಿದ್ಧತೆ ಮಾಡ್ತಿದೆ -ಆರ್.ಅಶೋಕ್