AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL: ಅಪ್ಪಿತಪ್ಪಿಯೂ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಬರ್ಬೇಡಿ; ಸೆಕ್ಯುರಿಟಿ ಬಗ್ಗೆ ಕಮಿಷನರ್​ ಹೇಳಿದ್ದಿಷ್ಟು

IPL: ಅಪ್ಪಿತಪ್ಪಿಯೂ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಬರ್ಬೇಡಿ; ಸೆಕ್ಯುರಿಟಿ ಬಗ್ಗೆ ಕಮಿಷನರ್​ ಹೇಳಿದ್ದಿಷ್ಟು

Shivaraj
| Edited By: |

Updated on: Mar 27, 2026 | 7:54 PM

Share

ಚಿನ್ನಸ್ವಾಮಿ ಮೈದಾನದಲ್ಲಿ ನಾಳೆ IPL ಉದ್ಘಾಟನಾ ಪಂದ್ಯ ನಡೆಯಲಿದೆ. ಈ ಬಗ್ಗೆ ಬೆಂಗಳೂರು ಕಮಿಷನರ್ ಸೀಮಂತ್ ಕುಮಾರ್ ಮಾತನಾಡಿದ್ದು, ಟಿಕೆಟ್ ಇದ್ದವರು ಮಾತ್ರ ಆಗಮಿಸಬೇಕು, ರಸ್ತೆಯಲ್ಲಿ ನಿಲ್ಲುವಂತಿಲ್ಲ. ಪಾರ್ಕಿಂಗ್ ಅವಕಾಶವಿಲ್ಲ, ಮೂರು ಹಂತದ ಭದ್ರತೆ ಇರಲಿದೆ. ಆಫ್‌ಲೈನ್ ಟಿಕೆಟ್ ಸಿಗುವುದಿಲ್ಲ. ಟಿಕೆಟ್ ಇಲ್ಲದವರು ಮನೆಯಲ್ಲಿಯೇ ವೀಕ್ಷಿಸುವಂತೆ ಹೇಳಿದ್ದಾರೆ.

ಬೆಂಗಳೂರು, ಮಾರ್ಚ್​ 27: ಕ್ರಿಕೆಟ್ ಹಬ್ಬಕ್ಕೆ ಕ್ಷಣಗಣನೆ ಆರಂಭವಾಗಿದೆ. ಚಿನ್ನಸ್ವಾಮಿ ಮೈದಾನದಲ್ಲಿ ನಾಳೆ IPL ಉದ್ಘಾಟನಾ ಪಂದ್ಯ ನಡೆಯಲಿದೆ. ಸಕಲ ಭದ್ರತೆ ಕೂಡ ಕೈಗೊಳ್ಳಲಾಗಿದೆ. ಈ ಬಗ್ಗೆ ಬೆಂಗಳೂರು ಕಮಿಷನರ್​ ಸೀಮಂತ್ ಕುಮಾರ್​ ಪ್ರತಿಕ್ರಿಯಿಸಿದ್ದು, ಚಿನ್ನಸ್ವಾಮಿ ಸ್ಟೇಡಿಯಂ ಬಳಿ 3 ಹಂತದ ಸೆಕ್ಯುರಿಟಿ ಇರಲಿದೆ. ಆರ್​ಎಎಫ್​​ ಮತ್ತು ಗರುಡ ಟೀಂ, ಪಿಕಪ್ ಸ್ಕ್ವಾಡ್ ಇದೆ. ಭದ್ರತೆಗೆ 2,500 ಪೊಲೀಸ್​ ಸಿಬ್ಬಂದಿ ನಿಯೋಜಿಸಲಾಗಿದೆ. ಆಫ್​ಲೈನ್ ಟಿಕೆಟ್ ಸಿಗುತ್ತೆ ಎಂದು ಯಾರು ಬರಬಾರದು. ಮೈದಾನ ಬಳಿ ರಸ್ತೆಗೆ ಬಂದು ನಿಲ್ಲುವವರಿಗೆ ಅವಕಾಶ ನೀಡಲ್ಲ. ಟಿಕೆಟ್ ಇಲ್ಲದಿದ್ದರೆ ಮನೆಯಲ್ಲಿ ಕುಳಿತು ಪಂದ್ಯವನ್ನ ನೋಡಿ ಎಂದು ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us