ಅವಹೇಳನಕಾರಿ ಪೋಸ್ಟ್; ರೋಹಿಣಿ ಸಿಂಧೂರಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ ಡಿ ರೂಪಾ

Updated on: Dec 18, 2024 | 2:53 PM

ರೋಹಿಣಿ ಮಾಡಿದ ಅವಹೇಳನಕಾರಿ ಪೋಸ್ಟನ್ನು ಸುಮಾರು ಎರಡು ಲಕ್ಷ ಜನ ವೀಕ್ಷಿಸಿದ್ದು ಅದರ ನಂತರವೇ ತನ್ನನ್ನು ಟ್ರಾನ್ಸ್​ಫರ್ ಮಾಡಲಾಯಿತು ಮತ್ತು ಆರು ತಿಂಗಳು ಕಾಲ ಹುದ್ದೆ ಮತ್ತು ಸಂಬಳ ನೀಡದೆ ಅಲೆದಾಡುವ ಪರಿಸ್ಥಿತಿ ನಿರ್ಮಾಣಗೊಂಡಿತ್ತು ಎಂದು ಡಿ ರೂಪಾ ತಮ್ಮ ದೂರಿನಲ್ಲಿ ದಾಖಲಿಸಿದ್ದಾರೆ. ರೋಹಿಣಿ ತಮ್ಮ ಹೇಳಿಕೆಯನ್ನು ಪೋಸ್ಟ್ ಮಾಡಿ ಹೆಚ್ಚುಕಡಿಮೆ 2ವರ್ಷಗಳಾಗುತ್ತಾ ಬಂದಿದೆ.

ಬೆಂಗಳೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ಡಿ ರೂಪಾ ನಡುವಿನ ಜಗಳ ಹೊಸದೇನಲ್ಲ. ಅದರ ಮುಂದುವರಿದ ಭಾಗವಾಗಿ ರೂಪಾ ಅವರು ರೋಹಿಣಿ ವಿರುದ್ಧ ನಗರದ 7 ನೇ ಎಸಿಎಂಎಂ ಕೋರ್ಟಲ್ಲಿ ಮಾನನಷ್ಟ ಮೊಕದ್ದಮೆಯೊಂದನ್ನು ಹೂಡಿದ್ದು ಅವರ ಖಾಸಗಿ ದೂರಿನ ನಂತರ ಕೋರ್ಟ್ ರೋಹಿಣಿ ಅವರಿಗೆ ನೋಟೀಸ್ ಜಾರಿಮಾಡಿದೆ. ದೂರಿನ ಪ್ರಕಾರ ರೋಹಿಣಿ, ಫೆಬ್ರುವರಿ 19, 2023 ರಂದು ರೂಪಾ ವಿರುದ್ಧ ಅವಹೇಳನಕಾರಿ ಹೇಳಿಕೆಯೊಂದನ್ನು ನೀಡಿ ನಂತರ ಅದನ್ನು ತಮ್ಮ ಎಕ್ಸ್ ಹ್ಯಾಂಡಲ್ ನಲ್ಲಿ ಶೇರ್ ಕೂಡ ಮಾಡಿದ್ದಾರೆ. ಅವರ ಹೇಳಿಕೆಯಿಂದ ಕೇವಲ ತಾನು ಮಾತ್ರವಲ್ಲದೆ ತನ್ನ ಪತಿ, ಮಕ್ಕಳ ಮತ್ತು ಸಹೋದರಿ ವಿಪರೀತ ನೊಂದುಕೊಂಡಿದ್ದಾರೆ. ಈ ಹಿನ್ನೆಲೆಯಲ್ಲೇ ರೋಹಿಣಿ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಬೇಕೆಂದು ರೂಪಾ ಅರ್ಜಿ ಸಲ್ಲಿಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ಜಡ್ಜ್​ ಮನವಿಗೂ ಬಗ್ಗದ IPS-IAS:ಸುಪ್ರೀಂಕೋರ್ಟ್​ನಲ್ಲಿ ಸಿಂಧೂರಿ-ರೂಪ ಪ್ರತಿಷ್ಠೆ ಜಿದ್ದು ಹೇಗಿತ್ತು ನೋಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More