AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಸಿಗೆ ‘ಖಾಸಗಿ ಚಿಕಿತ್ಸೆ’: ಅಸ್ಪತ್ರೆಗಳ ಕರಾಳ ಮುಖ ತೆರೆದಿಟ್ಟ IPS ಅಧಿಕಾರಿ

[lazy-load-videos-and-sticky-control id=”4mDj3UDMwgw”] ಬೆಂಗಳೂರು: ಖಾಸಗಿ ಆಸ್ಪತ್ರೆಗಳು ಬೆಡ್ ಲೆಕ್ಕಚಾರ ಮತ್ತು ಬಿಲ್ ವಿಚಾರದಲ್ಲಿ ಸರಕಾರಕ್ಕೆ ಹಾಗೂ ಜನರಿಗೆ ಮಹಾ ವಂಚನೆ ಮಾಡಿವೆ ಎಂಬ ಆರೋಪ ಕೇಳಿಬಂದಿದೆ. ಖಾಸಗಿ ಆಸ್ಪತ್ರೆಗಳು ಬಿಬಿಎಂಪಿ ಗೂ ಮಾಹಿತಿ ನೀಡದೆ ಸ್ವತಃ ತಾವೇ ರೋಗಿಗಳನ್ನು ಟ್ರೀಟ್ ಮಾಡುತ್ತಿದ್ದು, ಸರ್ಕಾರ ನಿಗದಿ ಮಾಡಿರುವ ಹಣಕ್ಕಿಂತ ಮೂರು ಪಟ್ಟು ಹಣ ವಸೂಲಿ ಮಾಡಿರುವುದು ಕಂಡು ಬಂದಿದೆ. ನಿನ್ನೇ ರಾಜರಾಜೇಶ್ವರಿನಗರದ ಖಾಸಗಿ ಆಸ್ಪತ್ರೆಗೆ IAS ಅಧಿಕಾರಿ ಹರ್ಷ ಗುಪ್ತಾ ಮತ್ತು IPS ಅಧಿಕಾರಿ ರೂಪ ಅವರು ಭೇಟಿ […]

ಕಾಸಿಗೆ ‘ಖಾಸಗಿ ಚಿಕಿತ್ಸೆ’: ಅಸ್ಪತ್ರೆಗಳ ಕರಾಳ ಮುಖ ತೆರೆದಿಟ್ಟ IPS ಅಧಿಕಾರಿ
ಸಾಧು ಶ್ರೀನಾಥ್​
| Edited By: |

Updated on:Jul 25, 2020 | 10:08 PM

Share

[lazy-load-videos-and-sticky-control id=”4mDj3UDMwgw”]

ಬೆಂಗಳೂರು: ಖಾಸಗಿ ಆಸ್ಪತ್ರೆಗಳು ಬೆಡ್ ಲೆಕ್ಕಚಾರ ಮತ್ತು ಬಿಲ್ ವಿಚಾರದಲ್ಲಿ ಸರಕಾರಕ್ಕೆ ಹಾಗೂ ಜನರಿಗೆ ಮಹಾ ವಂಚನೆ ಮಾಡಿವೆ ಎಂಬ ಆರೋಪ ಕೇಳಿಬಂದಿದೆ. ಖಾಸಗಿ ಆಸ್ಪತ್ರೆಗಳು ಬಿಬಿಎಂಪಿ ಗೂ ಮಾಹಿತಿ ನೀಡದೆ ಸ್ವತಃ ತಾವೇ ರೋಗಿಗಳನ್ನು ಟ್ರೀಟ್ ಮಾಡುತ್ತಿದ್ದು, ಸರ್ಕಾರ ನಿಗದಿ ಮಾಡಿರುವ ಹಣಕ್ಕಿಂತ ಮೂರು ಪಟ್ಟು ಹಣ ವಸೂಲಿ ಮಾಡಿರುವುದು ಕಂಡು ಬಂದಿದೆ.

ನಿನ್ನೇ ರಾಜರಾಜೇಶ್ವರಿನಗರದ ಖಾಸಗಿ ಆಸ್ಪತ್ರೆಗೆ IAS ಅಧಿಕಾರಿ ಹರ್ಷ ಗುಪ್ತಾ ಮತ್ತು IPS ಅಧಿಕಾರಿ ರೂಪ ಅವರು ಭೇಟಿ ನೀಡಿದ್ದ ವೇಳೆ ಈ ವಿಚಾರ ಬೆಳಕಿಗೆ ಬಂದಿದೆ. ಬಿಬಿಎಂಪಿ ಮೂಲಕ ರೋಗಿಗಳು ಖಾಸಗಿ ಆಸ್ಪತ್ರೆಗೆ ಹೋಗಿದ್ದರೂ ಸಹ ಆಸ್ಪತ್ರೆಗಳು ರೋಗಿಗಳ ಬಳಿ ಇನ್ಶೂರೆನ್ಸ್ ಇದೆಯಾ ಎಂಬ ಮಾಹಿತಿ ಪಡೆದು ಹಣ ಸುಲಿಗೆ ಮಾಡುತ್ತಿವೆ ಎಂಬ ಆರೋಪ ಕೇಳಿಬಂದಿದೆ.

ಹೀಗಾಗಿ ಈಗಾಗಲೇ ವಸೂಲಿ ಮಾಡಿರುವ ಹಣವನ್ನು ಆಸ್ಪತ್ರೆ ಅಧಿಕಾರಿಗಳಿಗೆ ವಾಪಸ್ ಕೊಡುವಂತೆ ಸೂಚನೆ ನೀಡಿದ್ದು, ಎರಡು ದಿನಗಳಲ್ಲಿ ಹೆಚ್ಚುವರಿಯಾಗಿ ವಸೂಲಿ ಮಾಡಿರುವ ಹಣವನ್ನು ವಾಪಸ್ ಕೊಡುವುದಾಗಿ ಖಾಸಗಿ ಆಸ್ಪತ್ರೆಗಳು ಒಪ್ಪಿಕೊಂಡಿವೆ ಎನ್ನಲಾಗಿದೆ. ಕೆಲ ರೋಗಿಗಳಿಗೆ ಎರಡು ದಿನಕ್ಕೆ 2 ಲಕ್ಷ ಹಣ ವಸೂಲಿ ಮಾಡಿರುವುದು ಬೆಳಕಿಗೆ ಬಂದಿರುವದಲ್ಲದೆ, ಓರ್ವ ಕೊರೊನಾ ರೋಗಿಗೆ 6 ಲಕ್ಷ ಹಣ ವಸೂಲಿದ ಮಾಡಿರುವುದು ಸಹ ಅಧಿಕಾರಿಗಳ ತನಿಖೆಯಿಂದ ಬಯಲಾಗಿದೆ.

ಸಮಯಕ್ಕೆ ಸರಿಯಾಗಿ ಖಾಸಗಿ  ಆಸ್ಪತ್ರೆಗಳಲ್ಲಿರುವ ಬೆಡ್ ಗಳ ಮಾಹಿತಿಯನ್ನು ವೆಬ್​ ಸೈಟ್​ನಲ್ಲಿ ಹಾಗೂ ಆಸ್ಪತ್ರೆಯ ನೋಟಿಸ್ ಬೋರ್ಡಿನಲ್ಲಿ ಹಾಕಬೇಕೆಂಬ ಸೂಚನೆ ಇದ್ದರೂ ಸಹ ಖಾಸಗಿ ಆಸ್ಪತ್ರೆಗಳು ಬೆಡ್ ಗಳ ಬಗ್ಗೆ ಯಾವುದೇ ಮಾಹಿತಿ ನೀಡುತ್ತಿಲ್ಲವೆಂದು ಸಾರ್ವಜನಿಕರು ಆರೋಪಿಸಿದ್ದಾರೆ.

Published On - 6:43 pm, Fri, 24 July 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ