AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಸಿಗೆ ‘ಖಾಸಗಿ ಚಿಕಿತ್ಸೆ’: ಅಸ್ಪತ್ರೆಗಳ ಕರಾಳ ಮುಖ ತೆರೆದಿಟ್ಟ IPS ಅಧಿಕಾರಿ

[lazy-load-videos-and-sticky-control id=”4mDj3UDMwgw”] ಬೆಂಗಳೂರು: ಖಾಸಗಿ ಆಸ್ಪತ್ರೆಗಳು ಬೆಡ್ ಲೆಕ್ಕಚಾರ ಮತ್ತು ಬಿಲ್ ವಿಚಾರದಲ್ಲಿ ಸರಕಾರಕ್ಕೆ ಹಾಗೂ ಜನರಿಗೆ ಮಹಾ ವಂಚನೆ ಮಾಡಿವೆ ಎಂಬ ಆರೋಪ ಕೇಳಿಬಂದಿದೆ. ಖಾಸಗಿ ಆಸ್ಪತ್ರೆಗಳು ಬಿಬಿಎಂಪಿ ಗೂ ಮಾಹಿತಿ ನೀಡದೆ ಸ್ವತಃ ತಾವೇ ರೋಗಿಗಳನ್ನು ಟ್ರೀಟ್ ಮಾಡುತ್ತಿದ್ದು, ಸರ್ಕಾರ ನಿಗದಿ ಮಾಡಿರುವ ಹಣಕ್ಕಿಂತ ಮೂರು ಪಟ್ಟು ಹಣ ವಸೂಲಿ ಮಾಡಿರುವುದು ಕಂಡು ಬಂದಿದೆ. ನಿನ್ನೇ ರಾಜರಾಜೇಶ್ವರಿನಗರದ ಖಾಸಗಿ ಆಸ್ಪತ್ರೆಗೆ IAS ಅಧಿಕಾರಿ ಹರ್ಷ ಗುಪ್ತಾ ಮತ್ತು IPS ಅಧಿಕಾರಿ ರೂಪ ಅವರು ಭೇಟಿ […]

ಕಾಸಿಗೆ ‘ಖಾಸಗಿ ಚಿಕಿತ್ಸೆ’: ಅಸ್ಪತ್ರೆಗಳ ಕರಾಳ ಮುಖ ತೆರೆದಿಟ್ಟ IPS ಅಧಿಕಾರಿ
ಸಾಧು ಶ್ರೀನಾಥ್​
| Edited By: |

Updated on:Jul 25, 2020 | 10:08 PM

Share

[lazy-load-videos-and-sticky-control id=”4mDj3UDMwgw”]

ಬೆಂಗಳೂರು: ಖಾಸಗಿ ಆಸ್ಪತ್ರೆಗಳು ಬೆಡ್ ಲೆಕ್ಕಚಾರ ಮತ್ತು ಬಿಲ್ ವಿಚಾರದಲ್ಲಿ ಸರಕಾರಕ್ಕೆ ಹಾಗೂ ಜನರಿಗೆ ಮಹಾ ವಂಚನೆ ಮಾಡಿವೆ ಎಂಬ ಆರೋಪ ಕೇಳಿಬಂದಿದೆ. ಖಾಸಗಿ ಆಸ್ಪತ್ರೆಗಳು ಬಿಬಿಎಂಪಿ ಗೂ ಮಾಹಿತಿ ನೀಡದೆ ಸ್ವತಃ ತಾವೇ ರೋಗಿಗಳನ್ನು ಟ್ರೀಟ್ ಮಾಡುತ್ತಿದ್ದು, ಸರ್ಕಾರ ನಿಗದಿ ಮಾಡಿರುವ ಹಣಕ್ಕಿಂತ ಮೂರು ಪಟ್ಟು ಹಣ ವಸೂಲಿ ಮಾಡಿರುವುದು ಕಂಡು ಬಂದಿದೆ.

ನಿನ್ನೇ ರಾಜರಾಜೇಶ್ವರಿನಗರದ ಖಾಸಗಿ ಆಸ್ಪತ್ರೆಗೆ IAS ಅಧಿಕಾರಿ ಹರ್ಷ ಗುಪ್ತಾ ಮತ್ತು IPS ಅಧಿಕಾರಿ ರೂಪ ಅವರು ಭೇಟಿ ನೀಡಿದ್ದ ವೇಳೆ ಈ ವಿಚಾರ ಬೆಳಕಿಗೆ ಬಂದಿದೆ. ಬಿಬಿಎಂಪಿ ಮೂಲಕ ರೋಗಿಗಳು ಖಾಸಗಿ ಆಸ್ಪತ್ರೆಗೆ ಹೋಗಿದ್ದರೂ ಸಹ ಆಸ್ಪತ್ರೆಗಳು ರೋಗಿಗಳ ಬಳಿ ಇನ್ಶೂರೆನ್ಸ್ ಇದೆಯಾ ಎಂಬ ಮಾಹಿತಿ ಪಡೆದು ಹಣ ಸುಲಿಗೆ ಮಾಡುತ್ತಿವೆ ಎಂಬ ಆರೋಪ ಕೇಳಿಬಂದಿದೆ.

ಹೀಗಾಗಿ ಈಗಾಗಲೇ ವಸೂಲಿ ಮಾಡಿರುವ ಹಣವನ್ನು ಆಸ್ಪತ್ರೆ ಅಧಿಕಾರಿಗಳಿಗೆ ವಾಪಸ್ ಕೊಡುವಂತೆ ಸೂಚನೆ ನೀಡಿದ್ದು, ಎರಡು ದಿನಗಳಲ್ಲಿ ಹೆಚ್ಚುವರಿಯಾಗಿ ವಸೂಲಿ ಮಾಡಿರುವ ಹಣವನ್ನು ವಾಪಸ್ ಕೊಡುವುದಾಗಿ ಖಾಸಗಿ ಆಸ್ಪತ್ರೆಗಳು ಒಪ್ಪಿಕೊಂಡಿವೆ ಎನ್ನಲಾಗಿದೆ. ಕೆಲ ರೋಗಿಗಳಿಗೆ ಎರಡು ದಿನಕ್ಕೆ 2 ಲಕ್ಷ ಹಣ ವಸೂಲಿ ಮಾಡಿರುವುದು ಬೆಳಕಿಗೆ ಬಂದಿರುವದಲ್ಲದೆ, ಓರ್ವ ಕೊರೊನಾ ರೋಗಿಗೆ 6 ಲಕ್ಷ ಹಣ ವಸೂಲಿದ ಮಾಡಿರುವುದು ಸಹ ಅಧಿಕಾರಿಗಳ ತನಿಖೆಯಿಂದ ಬಯಲಾಗಿದೆ.

ಸಮಯಕ್ಕೆ ಸರಿಯಾಗಿ ಖಾಸಗಿ  ಆಸ್ಪತ್ರೆಗಳಲ್ಲಿರುವ ಬೆಡ್ ಗಳ ಮಾಹಿತಿಯನ್ನು ವೆಬ್​ ಸೈಟ್​ನಲ್ಲಿ ಹಾಗೂ ಆಸ್ಪತ್ರೆಯ ನೋಟಿಸ್ ಬೋರ್ಡಿನಲ್ಲಿ ಹಾಕಬೇಕೆಂಬ ಸೂಚನೆ ಇದ್ದರೂ ಸಹ ಖಾಸಗಿ ಆಸ್ಪತ್ರೆಗಳು ಬೆಡ್ ಗಳ ಬಗ್ಗೆ ಯಾವುದೇ ಮಾಹಿತಿ ನೀಡುತ್ತಿಲ್ಲವೆಂದು ಸಾರ್ವಜನಿಕರು ಆರೋಪಿಸಿದ್ದಾರೆ.

Published On - 6:43 pm, Fri, 24 July 20

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​