AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಷ್ಟಪಟ್ಟಿದ್ದ ಡಿ.ಕೆ. ಶಿವಕುಮಾರ್ಗೆ​​ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?

ಕಷ್ಟಪಟ್ಟಿದ್ದ ಡಿ.ಕೆ. ಶಿವಕುಮಾರ್ಗೆ​​ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?

ಪ್ರಸನ್ನ ಗಾಂವ್ಕರ್​
| Updated By: ಪ್ರಸನ್ನ ಹೆಗಡೆ|

Updated on:Dec 12, 2025 | 12:12 PM

Share

ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗುವ ಬಗ್ಗೆ ಶಾಸಕ ಇಕ್ಬಾಲ್ ಹುಸೇನ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅಧಿವೇಶನದ ನಂತರ ಅವರಿಗೆ ಈ ಅವಕಾಶ ಸಿಗಲಿದೆ . ಡಿನ್ನರ್​​ ಮೀಟಿಂಗ್​​ ಶಕ್ತಿ ಪ್ರದರ್ಶನವಲ್ಲ, ಸೌಹಾರ್ದಯುತ ಭೋಜನಕೂಟ ಎಂದಿರುವ ಶಾಸಕ, ಕಾಂಗ್ರೆಸ್ ಪಕ್ಷದಲ್ಲಿ ವರಿಷ್ಠರ ನಿರ್ಧಾರವೇ ಅಂತಿಮ ಎಂದು ತಿಳಿಸಿದ್ದಾರೆ.

ಬೆಳಗಾವಿ, ಡಿಸೆಂಬರ್​​ 12: ಶೀಘ್ರದಲ್ಲೇ ಡಿ.ಕೆ. ಶಿವಕುಮಾರ್ ಕರ್ನಾಟಕದ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಶಾಸಕ ಇಕ್ಬಾಲ್ ಹುಸೇನ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅಧಿವೇಶನ ಮುಗಿದ ನಂತರ ಡಿ.ಕೆ. ಶಿವಕುಮಾರ್‌ಗೆ ಮುಖ್ಯಮಂತ್ರಿ ಸ್ಥಾನ ಲಭಿಸಲಿದೆ. ಡಿನ್ನರ್​​ ಮೀಟಿಂಗ್​​ ಶಕ್ತಿ ಪ್ರದರ್ಶನವಲ್ಲ, ಸೌಹಾರ್ದಯುತ ಭೋಜನಕೂಟ. ಊಟಕ್ಕೆ ಯಾರು ಬೇಕಾದರೂ ಬರಬಹುದು, ಇದರಲ್ಲಿ ರಾಜಕೀಯವಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಕಾಂಗ್ರೆಸ್ ಶಿಸ್ತಿನ ಪಕ್ಷವಾಗಿದ್ದು, ಯಾವುದೇ ನಂಬರ್ ಗೇಮ್‌ಗಳಿಗೆ ಮಹತ್ವ ನೀಡುವುದಿಲ್ಲ. ಹೈಕಮಾಂಡ್ ತೆಗೆದುಕೊಳ್ಳುವ ಅಂತಿಮ ನಿರ್ಧಾರಕ್ಕೆ ಎಲ್ಲರೂ ಬದ್ಧರಾಗಿರಬೇಕು ಎಂದು ಇಕ್ಬಾಲ್​​ ತಿಳಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​ ಮಾಡಿ.

Published on: Dec 12, 2025 12:04 PM