ಗ್ಯಾಸ್ ಸಂಕಷ್ಟ ಬೆನ್ನಲ್ಲೇ ಇರಾನ್-ಇಸ್ರೇಲ್ ಯುದ್ಧದಿಂದ ಗ್ರ್ಯಾನೈಟ್ ಉದ್ಯಮಕ್ಕೂ ಕುತ್ತು

Edited By:

Updated on: Mar 13, 2026 | 8:10 AM

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಯುದ್ಧದ ಪರಿಣಾಮವಾಗಿ ಭಾರತದ ಗ್ರಾನೈಟ್ ಮತ್ತು ಟೈಲ್ಸ್ ಉದ್ಯಮ ತೀವ್ರ ಸಂಕಷ್ಟ ಎದುರಿಸುತ್ತಿದೆ. ಗ್ಯಾಸ್ ಕೊರತೆಯಿಂದಾಗಿ ದೇಶಾದ್ಯಂತ ನೂರಾರು ಉತ್ಪಾದನಾ ಘಟಕಗಳು ಬಂದ್ ಆಗಿವೆ. ಇದು ವೆಟ್ರಿಫೈಡ್ ಟೈಲ್ಸ್ ಮತ್ತು ಗ್ರಾನೈಟ್ ಉತ್ಪನ್ನಗಳ ಕೊರತೆ ಮತ್ತು ಬೆಲೆ ಏರಿಕೆಗೆ ಕಾರಣವಾಗಿದೆ, ಗ್ರಾಹಕರು ಮತ್ತು ಕಾರ್ಮಿಕರ ಮೇಲೆ ಪರಿಣಾಮ ಬೀರಿದೆ.

ಮಂಗಳೂರು, ಮಾರ್ಚ್ 13: ಇರಾನ್-ಇಸ್ರೇಲ್ ಯುದ್ಧದ ತೀವ್ರತೆಯು ಭಾರತದ ಗ್ರಾನೈಟ್ ಉದ್ಯಮದ ಮೇಲೆ ನೇರ ಪರಿಣಾಮ ಬೀರಿದೆ. ಗ್ಯಾಸ್ ಕೊರತೆಯು ಟೈಲ್ಸ್, ಗ್ರಾನೈಟ್ ಮತ್ತು ವೆಟ್ರಿಫೈಡ್ ಟೈಲ್ಸ್ ಉತ್ಪಾದನೆಗೆ ದೊಡ್ಡ ಅಡಚಣೆಯಾಗಿದೆ. ಈಗಾಗಲೇ ದೇಶದಾದ್ಯಂತ ನೂರಾರು ಫ್ಯಾಕ್ಟರಿಗಳು ಮುಚ್ಚಲ್ಪಟ್ಟಿವೆ. ಮಂಗಳೂರಿಗೆ ಸರಬರಾಜು ಮಾಡುತ್ತಿದ್ದ ಹಲವು ಘಟಕಗಳಿಗೂ ಬೀಗ ಜಡಿಯಲಾಗಿದೆ. ಟೈಲ್ಸ್ ಮತ್ತು ವೆಟ್ರಿಫೈಡ್ ಟೈಲ್ಸ್ ತಯಾರಿಕೆಗೆ ನೈಸರ್ಗಿಕ ಅನಿಲವನ್ನು ಹೀಟಿಂಗ್ ಮತ್ತು ಕೂಲಿಂಗ್ ಪ್ರಕ್ರಿಯೆಗಳಲ್ಲಿ ವ್ಯಾಪಕವಾಗಿ ಬಳಸಲಾಗುತ್ತದೆ. ಗ್ಯಾಸ್ ಕೊರತೆಯಿಂದಾಗಿ ಉತ್ಪಾದನಾ ವೆಚ್ಚ ಹೆಚ್ಚಾಗಿದೆ ಮತ್ತು ಉತ್ಪನ್ನಗಳ ಲಭ್ಯತೆ ಕುಸಿದಿದೆ. ಇದರ ಪರಿಣಾಮವಾಗಿ, ಮಾರುಕಟ್ಟೆಯಲ್ಲಿ ಟೈಲ್ಸ್ ಮತ್ತು ವೆಟ್ರಿಫೈಡ್ ಉತ್ಪನ್ನಗಳ ತೀವ್ರ ಕೊರತೆ ಎದುರಾಗಿದ್ದು, ಗ್ರಾಹಕರಿಗೆ ಆರ್ಡರ್ ಮಾಡಿದ ಉತ್ಪನ್ನಗಳು ಸಿಗುತ್ತಿಲ್ಲ. ಹೊಸ ಆರ್ಡರ್‌ಗಳನ್ನು ಅಂಗಡಿ ಮಾಲೀಕರು ಸಹ ತೆಗೆದುಕೊಳ್ಳಲು ಸಾಧ್ಯವಾಗುತ್ತಿಲ್ಲ.

ಈ ಪರಿಸ್ಥಿತಿಯು ಸಾವಿರಾರು ಕಾರ್ಖಾನೆಗಳ ಭವಿಷ್ಯವನ್ನು ಅನಿಶ್ಚಿತತೆಗೆ ತಳ್ಳಿದೆ, ಉದ್ಯೋಗಿಗಳ ಮೇಲೆ ಕೂಡ ಪರಿಣಾಮ ಬೀರಿದೆ. ಮಧ್ಯಪ್ರಾಚ್ಯದ ಸಂಘರ್ಷದ ಪರಿಣಾಮಗಳು ದೇಶದ ಆರ್ಥಿಕತೆಯ ವಿವಿಧ ವಲಯಗಳ ಮೇಲೆ ವ್ಯಾಪಕವಾಗಿ ಹರಡುತ್ತಿವೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Pruthviraj

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More