ಚನ್ನಪಟ್ಟಣ ಬಳಿ ಹಂಪಿ ಎಕ್ಸ್‌ಪ್ರೆಸ್‌ ರೈಲು ಅಪಘಾತಕ್ಕೆ ಸಂಚು!

Updated on: Nov 23, 2025 | 6:53 AM

ಹಳಿಯ ಮೇಲೆ ಕಬ್ಬಿಣದ ರಾಡ್​​ ಇಟ್ಟು ರೈಲು ಹಳಿ ತಪ್ಪಿಸುವ ದುಷ್ಕರ್ಮಿಗಳ ಯತ್ನ ವಿಫಲವಾಗಿದೆ. ಚನ್ನಪಟ್ಟಣ ತಾಲೂಕಿನ ವಂದಾರಗುಪ್ಪೆ ಬಳಿ ಘಟನೆ ನಡೆದಿದೆ. ಹಳಿಯ ಮೇಲೆ ಇಡಲಾಗಿದ್ದ ಕಬ್ಬಿಣದ ರಾಡ್​​ ಮೈಸೂರಿನಿಂದ ಬೆಂಗಳೂರಿಗೆ ‌ತೆರಳುತ್ತಿದ್ದ ಹಂಪಿ ಎಕ್ಸ್‌ಪ್ರೆಸ್‌ ರೈಲಿನ ಎಂಜಿನ್​​ಗೆ ಬಡಿದಿದೆ. ಪರಿಣಾಮ ರೈಲು ಅರ್ಧದಲ್ಲೇ ನಿಂತಿದೆ.

ರಾಮನಗರ, ನವೆಂಬರ್​ 23: ಹಳಿ ಮೇಲೆ ಕಬ್ಬಿಣದ ರಾಡ್ ಇಟ್ಟು ರೈಲು ಹಳಿ ತಪ್ಪಿಸಲು ದುಷ್ಕರ್ಮಿಗಳು ಯತ್ನಿಸಿದ್ದು, ಅದೃಷ್ಣವಶಾತ್​ ಉದ್ದೇಶ ವಿಫಲವಾಗಿರುವ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ವಂದಾರಗುಪ್ಪೆ ಬಳಿ ನಡೆದಿದೆ. ಹಳಿಯ ಮೇಲೆ ಇಡಲಾಗಿದ್ದ ಕಬ್ಬಿಣದ ರಾಡ್​​ ಇಂಜಿನ್​​ಗೆ ಬಡಿದಿದ್ದು, ಮೈಸೂರಿನಿಂದ ಬೆಂಗಳೂರಿಗೆ ‌ತೆರಳುತ್ತಿದ್ದ ಹಂಪಿ ಎಕ್ಸ್‌ಪ್ರೆಸ್‌ ರೈಲು ಅರ್ಧದಲ್ಲೇ ನಿಂತಿದೆ. ಬಳಿಕ ಬದಲಿ ಇಂಜಿನ್​​ ವ್ಯವಸ್ಥೆ ಮಾಡಲಾಗಿದ್ದು, ರೈಲು ಬೆಂಗಳೂರು ಕಡೆ ತೆರಳಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​ ಮಾಡಿ.

Published on: Nov 23, 2025 06:52 AM