ಅತ್ಯಾಚಾರಿ ಪ್ರಜ್ವಲ್ ರೇವಣ್ಣ ಒಬ್ಬ ಸ್ಯಾಡಿಸ್ಟ್, ಅವನನ್ನು ಹುಚ್ಚಾಸ್ಪತ್ರೆಗೆ ಕಳಿಸಬೇಕು: ಕೆ ನೀಲಾ, ಸಾಮಾಜಿಕ ಹೋರಾಟಗಾರ್ತಿ

ವಿಡಿಯೋಗಳನ್ನು ಹರಿಬಿಟ್ಟರೆ ಮಹಿಳೆಯರ ಗತಿ ಏನಾದೀತು ಅಂತ ಯೋಚನೆ ಮಾಡದ ಜನ ಸಹ ಅಷ್ಟೇ ತಪ್ಪಿತಸ್ಥರು, ನೊಂದ ಮಹಿಳೆಯರಿಗಾಗಿ ಮಿಡಿಯದ ಸಿದ್ದರಾಮಯ್ಯ ಸರ್ಕಾರ ನಿಷ್ಪ್ರಯೋಜಕ ಮತ್ತು ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುತ್ತಿರುವ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಸಹ ದೋಷಿಗಳು ಎಂದು ನೀಲಾ ಎಲ್ಲರ ವಿರುದ್ಧ ಕಿಡಿ ಕಾರಿದರು.

ಅತ್ಯಾಚಾರಿ ಪ್ರಜ್ವಲ್ ರೇವಣ್ಣ ಒಬ್ಬ ಸ್ಯಾಡಿಸ್ಟ್, ಅವನನ್ನು ಹುಚ್ಚಾಸ್ಪತ್ರೆಗೆ ಕಳಿಸಬೇಕು: ಕೆ ನೀಲಾ, ಸಾಮಾಜಿಕ ಹೋರಾಟಗಾರ್ತಿ
|

Updated on: May 30, 2024 | 8:01 PM

ಹಾಸನ: ವಿವಿಧ ಸಂಘಟನೆ, ಸಂಸ್ಥೆಗಳ ಸದಸ್ಯರು ಇಂದು ಹಾಸನದಲ್ಲಿ ಬೃಹತ್ ಪ್ರತಿಭಟನೆ ನಡೆಸಿ ಸರಣಿ ಲೈಂಗಿಕ ಅಪರಾಧಗಳ ಆರೋಪಿಯಾಗಿರುವ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಸರ್ಕಾರವನ್ನು ಅಗ್ರಹಿಸಿದರು. ಈ ಸಂದರ್ಭದಲ್ಲಿ ಮಾತಾಡಿದ ಉತ್ತರ ಕರ್ನಾಟಕದ ಖ್ಯಾತ ಸಾಮಾಜಿಕ ಹೋರಾಟಗಾರ್ತಿ (social activist) ಕೆ ನೀಲಾ (K Neela) ಅವರು, ಲೋಕಸಭಾ ಚುನಾವಣೆಯಲ್ಲಿ ಪ್ರಜ್ವಲ್ ರೇವಣ್ಣ ಸೋಲಲಿ ಇಲ್ಲವೇ ಗೆಲ್ಲಲಿ ಆದರೆ ಹಾಸನದ ಜನ ಆ ಅತ್ಯಾಚಾರಿಯನ್ನು ತಿರಸ್ಕರಿಸಬೇಕು ಎಂದು ಆಕ್ರೋಶದಿಂದ ಹೇಳಿದರು. ಪ್ರಜ್ವಲ್  ಮನುಷ್ಯನಲ್ಲ ಅವನೊಬ್ಬ ಸ್ಯಾಡಿಸ್ಟ್, ಮಾನಸಿಕ ಸ್ಥಿಮಿತ ಇಲ್ಲದ ಮತ್ತು ನಿಸ್ಸಹಾಯಕ ಮಹಿಳೆಯರ ಮೇಲೆ ವಿಕೃತಿ ಮೆರೆಯುವ ವ್ಯಕ್ತಿ, ಅವನು ಹುಚ್ಚಾಸ್ಪತ್ರೆಯಲ್ಲಿ ಇರೋದಿಕ್ಕೆ ಮಾತ್ರ ಲಾಯಕ್ಕು ಎಂದು ಬೆಂಕಿಯುಗುಳಿದರು.

ಅವನಿಗೆ ಹೆಣ್ಣಿನ ಬೆಲೆ ಗೊತ್ತಿಲ್ಲ, ತನ್ನಲ್ಲಿ ಒಂದು ಹೊಸ ಜೀವವನ್ನು ಸೃಷ್ಟಿಸಲು ಮಹಿಳೆ ತನ್ನ ರಕ್ತವನ್ನು ಹರಿಸುತ್ತಾಳೆ, ಅವನಿಂದ ಪೀಡನೆಗೆ ಒಳಗಾದ ಮಹಿಳೆಯರನ್ನು ಸಂತ್ರಸ್ತೆಯರೆಂದು ಕರೆಯಲಾಗುತ್ತಿದೆ, ಆದರೆ ಅವರು ಸಂತ್ರಸ್ತೆಯರಲ್ಲ, ಅವರನ್ನು ತೊಂದರೆಗೊಳಾಗದವರೆಂದು ಉಲ್ಲೇಖಿಸಬೇಕೆಂದು ನೀಲಾ ಹೇಳಿದರು.

ವಿಡಿಯೋಗಳನ್ನು ಹರಿಬಿಟ್ಟರೆ ಮಹಿಳೆಯರ ಗತಿ ಏನಾದೀತು ಅಂತ ಯೋಚನೆ ಮಾಡದ ಜನ ಸಹ ಅಷ್ಟೇ ತಪ್ಪಿತಸ್ಥರು, ನೊಂದ ಮಹಿಳೆಯರಿಗಾಗಿ ಮಿಡಿಯದ ಸಿದ್ದರಾಮಯ್ಯ ಸರ್ಕಾರ ನಿಷ್ಪ್ರಯೋಜಕ ಮತ್ತು ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುತ್ತಿರುವ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಸಹ ದೋಷಿಗಳು ಎಂದು ನೀಲಾ ಎಲ್ಲರ ವಿರುದ್ಧ ಕಿಡಿ ಕಾರಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಡಿಕೆ ಶಿವಕುಮಾರ್ ಕೈವಾಡ ಎನ್ನುವವರಿಗೆ ಸಚಿವ ಶರಣಬಸಪ್ಪ ದರ್ಶನಾಪುರ ತಿರುಗೇಟು!

Follow us
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
ವಿದ್ಯಾರ್ಥಿಗಳ ನಡುವೆಯೂ  ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಕಷ್ಟು ಜನಪ್ರಿಯರು
ವಿದ್ಯಾರ್ಥಿಗಳ ನಡುವೆಯೂ  ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಕಷ್ಟು ಜನಪ್ರಿಯರು
 ದುಡ್ಡಿನ ವಿಷಯದಲ್ಲಿ ದರ್ಶನ್ ಕಡ್ಡಿ ಮುರಿದಂತೆ ಮಾತಾಡುತ್ತಿದ್ದರು: ಕೆ ಮಂಜು
 ದುಡ್ಡಿನ ವಿಷಯದಲ್ಲಿ ದರ್ಶನ್ ಕಡ್ಡಿ ಮುರಿದಂತೆ ಮಾತಾಡುತ್ತಿದ್ದರು: ಕೆ ಮಂಜು
ಲೂಟಿ ಹೋಡೆಯೋಕೆ ಸರ್ಕಾರ ಸಿದ್ಧತೆ ಮಾಡ್ತಿದೆ -ಆರ್.ಅಶೋಕ್
ಲೂಟಿ ಹೋಡೆಯೋಕೆ ಸರ್ಕಾರ ಸಿದ್ಧತೆ ಮಾಡ್ತಿದೆ -ಆರ್.ಅಶೋಕ್