ಹಲ್ಲೆ ಮಾಡಿದವ ವಿಂಗ್ ಕಮಾಂಡರ್ ಆಗಿದ್ದರೇನಂತೆ? ಕ್ರಮ ತೆಗೆದುಕೊಳ್ಳಲು ಹೇಳಿದ್ದೇನೆ: ಸಿದ್ದರಾಮಯ್ಯ

ಅರುಣ್​ ಕುಮಾರ್​ ಬೆಳ್ಳಿ

Updated on: Apr 22, 2025 | 2:55 PM

ಹಿಂದಿ ಹೇರಿಕೆಯನ್ನು ತಮ್ಮ ಸರ್ಕಾರ ತೀವ್ರವಾಗಿ ವಿರೋಧಿಸುತ್ತದೆ, ರಾಜ್ಯದಲ್ಲಿ ದ್ವಿಭಾಷಾ ಸೂತ್ರ ಜಾರಿಯಲ್ಲಿದೆ, ಮಾತೃಭಾಷೆ ಕನ್ನಡ ಪ್ರಥಮ ಭಾಷೆಯಾದರೆ ಎರಡನೇ ಭಾಷೆ ಇಂಗ್ಲಿಷ್ ಎಂದು ಸಿದ್ದರಾಮಯ್ಯ ಹೇಳಿದರು. ತೃತೀಯ ಭಾಷೆಯಾಗಿ ಹಿಂದಿಯನ್ನು ಪರಿಗಣಿಸಬಹುದಲ್ಲ ಅಂದಾಗ ಸಿದ್ದರಾಮಯ್ಯ ಚುಟುಕಾಗಿ ತ್ರಿಭಾಷಾ ಸೂತ್ರಕ್ಕೆ ರಾಜ್ಯದಲ್ಲಿ ಅವಕಾಶವಿಲ್ಲವೆಂದು ಹೇಳಿದರು.

ಮಂಡ್ಯ, ಏಪ್ರಿಲ್ 22: ಸಕ್ಕರೆ ನಾಡು ಮಂಡ್ಯ ಜಿಲ್ಲೆಯ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಕನ್ನಡದ ಹುಡುಗ ವಿಕಾಸ್ ಮೇಲೆ ಹಲ್ಲೆ ಮಾಡಿರುವ ಡಿಅರ್​ಡಿಒ ಉದ್ಯೋಗಿ ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್ (Wing Commander Shiladitya Bose) ವಿರುದ್ಧ ಕಾನೂನು ರೀತ್ಯಾ ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿದ್ದೇನೆ ಎಂದು ಹೇಳಿದರು. ಮಾಧ್ಯಮದವರೊಂದಿಗೆ ಮಾತಾಡಿದ ಅವರು, ಎರಡೂ ಕಡೆಯವರು ದೂರು ಸಲ್ಲಿಸಿದ್ದಾರೆ, ಹಲ್ಲೆ ಮಾಡಿದವ ವಿಂಗ್ ಕಮಾಂಡರ್ ಆಗಿರಲಿ, ಮತ್ತೇನಾದರೂ ಅಗಿರಲಿ, ಕಾನೂನಿನ್ವಯ ಕ್ರಮ ಜರುಗಿಸಲು ಹೇಳಿದ್ದೇನೆ ಎಂದು ಮುಖ್ಯಮಂತ್ರಿ ಹೇಳಿದರು.

ಇದನ್ನೂ ಓದಿ: ತಮ್ಮ ನಿವಾಸದಲ್ಲಿ ಕೆಲ ಮಾಜಿ ಶಾಸಕರನ್ನು ಭೇಟಿಯಾದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.