ಕುಮಾರಸ್ವಾಮಿ ಎಷ್ಟೇ ಅಡ್ಡಿಪಡಿಸಿದರೂ ರಾಮನಗರದ ಹೆಸರು ಬದಲಾಯಿಸುವುದು ಮಾತ್ರ ನಿಶ್ಚಿತ: ಶಿವಕುಮಾರ್

ಅರುಣ್​ ಕುಮಾರ್​ ಬೆಳ್ಳಿ

Updated on: Mar 20, 2025 | 12:32 PM

ರಾಮನಗರ ಜಿಲ್ಲೆಯ ಕನಕಪುರ, ಮಾಗಡಿ, ಚನ್ನಪಟ್ಟಣ ಮೊದಲಾದ ಊರುಗಳಲ್ಲಿ ವಾಸವಾಗಿರುವ ಜನ ಉದ್ಧಾರವಾಗೋದು ಕುಮಾರಸ್ವಾಮಿಯವರಿಗೆ ಬೇಕಿಲ್ಲವೇ? ಅವರು ತಮ್ಮ ಜಿಲ್ಲೆಯನ್ನು ಬಿಟ್ಟು ರಾಮನಗರಕ್ಕೆ ಬಂದಿದ್ದು ಯಾಕೆ? ತನ್ನ ಜಿಲ್ಲೆ, ತನ್ನ ಕ್ಷೇತ್ರದ ಅಭ್ಯುದಯಕ್ಕಾಗಿ ಶ್ರಮಿಸುವ ಹೊಣೆಗಾರಿಕೆ ತನ್ನ ಮೇಲಿದೆ ಎಂದು ಶಿವಕುಮಾರ್ ಹೇಳಿದರು.

ಬೆಂಗಳೂರು, ಮಾರ್ಚ್ 20: ವಿಧಾನಸಭೆಯ ಇವತ್ತಿನ ಕಾರ್ಯಕಲಾಪಗಳಲ್ಲಿ ಭಾಗಿಯಾಗುವ ಮೊದಲು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಎಷ್ಟೇ ಅಡ್ಡಿಪಡಿಸಿದರೂ ಏನೇ ಹೇಳಿದರೂ ರಾಮನಗರ ಜಿಲ್ಲೆಯ ಹೆಸರನ್ನು ಬದಲಾಯಿಸಲು ಕಟಿಬದ್ಧನಾಗಿರುವೆನೆಂದು ತಿಳಿಸಿದರು. ಹೆಸರು ಬದಲಾಯಿಸಲು ಅನುಮತಿ ಪಡೆಯಬೇಕೆಂದು ಸಂವಿಧಾನದಲ್ಲಿ ಎಲ್ಲೂ ಹೇಳಿಲ್ಲ, ಸುತ್ತೋಲೆಯ ಮೂಲಕ ಮಾಹಿತಿ ಹಂಚಿಕೊಳ್ಳಬೇಕಿತ್ತು, ಅದನ್ನು ಮಾಡಿದ್ದೇವೆ ಅಷ್ಟೇ ಅಂತ ಶಿವಕುಮಾರ್ ಕಡ್ಡಿ ತುಂಡು ಮಾಡಿದಂತೆ ಹೇಳಿದರು.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ರಾಜ್ಯಪಾಲರಿಂದ ಡಿಕೆ ಶಿವಕುಮಾರ್​​ಗೆ ಮತ್ತೊಂದು ಶಾಕ್ ಕೊಡಿಸಲು ಬಿಜೆಪಿ ಪ್ಲ್ಯಾನ್..!

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.