Anti-encroachment drive: ಒತ್ತುವರಿ ತೆರವು ಕಾರ್ಯಾಚರಣೆ ನಡೆಸುವಾಗ ಸರ್ಕಾರಕ್ಕೆ ಕೇವಲ ಬಡವರ ಮನೆ ಮಾತ್ರ ಕಾಣಿಸುತ್ತವೆಯೇ?

Updated on: Jun 17, 2023 | 1:08 PM

ಬಿಬಿಎಂಪಿ ಖಾತೆಯನ್ನು ನಿರ್ವಹಿಸುತ್ತಿರುವ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಒಂದು ಕಣ್ಣಿಗೆ ಸುಣ್ಣ ಮತ್ತೊಂದು ಕಣ್ಣಿಗೆ ಬೆಣ್ಣೆ ಆಗೋದನ್ನು ತಪ್ಪಿಸಬೇಕು.

ಬೆಂಗಳೂರು: ಸರ್ಕಾರ ಯಾವುದೇ ಆಗಿರಲಿ, ಒತ್ತುವರಿ ತೆರವು ಕಾರ್ಯಾಚರಣೆ (anti encroachment drive) ಆರಂಭಿಸಿದಾಗ ಅದಕ್ಕೆ ಕೇವಲ ಬಡವರ ಮನೆಗಳು ಮಾತ್ರ ಕಾಣಿಸುತ್ತವೆ ಅನ್ನೋದು ಸ್ಪಷ್ಟವಾಗಿದೆ. ದೊಡ್ಡ ಕುಳಗಳ ಅಪಾರ್ಟ್ ಮೆಂಟ್, ಸಾಪ್ಟ್ ವೇರ್ ಕಂಪನಿಗಳು (software companies); ಸರ್ಕಾರ ಅಥವಾ ಬೃಹತ್ ಬೆಂಗಳೂರು ಮಹಾನನಗರ ಪಾಲಿಕೆ ಸಿಬ್ಬಂದಿಗೆ ಕಾಣೋದಿಲ್ಲ. ಆಫ್ ಕೋರ್ಸ್ ಈ ಕಂಪನಿಗಳಿಂದ ಒತ್ತುವರಿಯಾಗಿದ್ದರೆ, ಅವುಗಳ ಮೇಲೆ ಮಾರ್ಕಿಂಗ್ ಕಾಣಿಸುತ್ತದೆ ಆದರೆ ಒತ್ತುವರಿಯಾದ ಸ್ಥಳವನ್ನು ತೆರವು ಮಾಡುವ ಕೆಲಸ ಮಾತ್ರ ನಡೆಯುವುದೇ ಇಲ್ಲ. ನಗರದ ಹೊಯ್ಸಳ ನಗರದಲ್ಲಿ ತೆರವು ಕಾರ್ಯಾಚರಣೆ ನಡೆಯುತ್ತಿದ್ದು ಅಲ್ಲಿನ ನಿವಾಸಿಗಳು ಈ ತಾರತಮ್ಯದ ಬಗ್ಗೆಯೇ ಅಸಮಾಧಾನ ಹೊರಹಾಕುತ್ತಿದ್ದಾರೆ. ಬಿಬಿಎಂಪಿ ಖಾತೆಯನ್ನು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ನಿರ್ವಹಿಸುತ್ತಿದ್ದಾರೆ. ಒಂದು ಕಣ್ಣಿಗೆ ಸುಣ್ಣ ಮತ್ತೊಂದು ಕಣ್ಣಿಗೆ ಬೆಣ್ಣೆ ಆಗೋದನ್ನು ಅವರು ತಪ್ಪಿಸಬೇಕು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More