AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರ ಯಾವುದೇ ಆಗಿರಲಿ ಸಂಸತ್ತಿನಲ್ಲಿ ರಾಜ್ಯದ ಪರ ಧ್ವನಿಯೆತ್ತುವ ಸಂಸದರು ಬೇಕು: ಬಿಜೆಡ್ ಜಮೀರ್ ಆಹ್ಮದ್ ಖಾನ್

ಸರ್ಕಾರ ಯಾವುದೇ ಆಗಿರಲಿ ಸಂಸತ್ತಿನಲ್ಲಿ ರಾಜ್ಯದ ಪರ ಧ್ವನಿಯೆತ್ತುವ ಸಂಸದರು ಬೇಕು: ಬಿಜೆಡ್ ಜಮೀರ್ ಆಹ್ಮದ್ ಖಾನ್

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Mar 01, 2024 | 5:57 PM

Share

ಕಾಂಗ್ರೆಸ್ ಪಕ್ಷದಿಂದ ಕೇವಲ ಒಬ್ಬ ಸಂಸದ ಇರೋದ್ರಿಂದ ಅವರಿಗೆ ಮಾತಾಡುವ ಅವಕಾಶ ಕೊಡುತ್ತಿಲ್ಲ, ಸುಮಲತಾ ಅಂಬರೀಶ್ ಮತ್ತು ಜೆಡಿಎಸ್ ಪಕ್ಷದ ಸಂಸದ ಸೇರಿ 27 ಸದಸ್ಯರು ಸಂಸತ್ತಿನಲ್ಲಿದ್ದರೂ ರಾಜ್ಯದ ಪರ ಧ್ವನಿ ಎತ್ತಲ್ಲ ಎಂದರು. ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವ ಕುಮಾರಸ್ವಾಮಿ ಆ ಪಕ್ಷಕ್ಕಿಂತ ಒಂದು ಹಂತ ಮೇಲೆ ಹೋಗಿದ್ದು ಬೇರೆ ವಿಷಯಗಳ ಬಗ್ಗೆ ಧ್ವನಿಯೆತ್ತುತ್ತಾರೆ, ಕರ್ನಾಟಕ ಜನತೆ ಪರ ಎತ್ತಲ್ಲ ಎಂದು ಜಮೀರ್ ಹೇಳಿದರು.

ಬೆಂಗಳೂರು: ನಗರದಲ್ಲಿಂದು ಮಾಧ್ಯಮಗೋಷ್ಟಿಯೊಂದನ್ನು ನಡೆಸಿ ಮಾತಾಡಿದ ವಸತಿ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವ ಬಿಜೆಡ್ ಜಮೀರ್ ಅಹ್ಮದ್ ಖಾನ್ (BZ Zameer Ahmed Khan), ಮುಂದಿನ ಲೋಕಸಭಾ ಚುನಾವಣೆಯಲ್ಲಿ (Lok Sabha Polls) ಕಾಂಗ್ರೆಸ್ ನೇತೃತ್ವದ ಇಂಡಿಯ ಒಕ್ಕೂಟಕ್ಕೆ ಬಹುಮತ ಸಿಗುವ ವಿಶ್ವಾಸ ವ್ಯಕ್ತಪಡಿಸಿದರು. ಕರ್ನಾಟಕದಲ್ಲಿ ಮುಸಲ್ಮಾನರ ಸಂಖ್ಯೆ (Muslim population) 70 ಲಕ್ಷ ಎಂದು ಹೇಳಲಾಗುತ್ತಿದ್ದು ಆ ಆಧಾರದಲ್ಲಿ ಹೆಚ್ಚಿನ ಸ್ಥಾನಗಳನ್ನು ಮುಸ್ಲಿಂ ಸಮುದಾಯದ ಅಭ್ಯರ್ಥಿಗಳಿಗೆ ನೀಡಬೇಕೆಂದು ಬೇಡಿಕೆ ಸಲ್ಲಿಸಲಾಗಿದೆಯೇ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಜಮೀರ್ ಖಾನ್, ಶೇಕಡಾವಾರು ಅಂತೇನಿಲ್ಲ, ಆದರೆ ಬೆಂಗಳೂರು ಕೇಂದ್ರ, ಬೀದರ್ ಮತ್ತು ಹಾವೇರಿ ಕ್ಷೇತ್ರಗಳನ್ನು ನೀಡುವಂತೆ ಕೋರಿದ್ದೇವೆ, ಆದಾಗ್ಯೂ ಹೈ ಕಮಾಂಡ್ ಏನು ತೀರ್ಮಾನ ತೆಗೆದುಕೊಳ್ಳುತ್ತದೆಯೋ ಅದೇ ಅಂತಿಮ ಎಂದು ಹೇಳಿದರು.

ಸರ್ಕಾರ ಯಾವುದೇ ಆಗಿರಲಿ, ಸಂಸತ್ತಿನಲ್ಲಿ ರಾಜ್ಯದ ಪರ ಧ್ವನಿಯೆತ್ತುವವರ ಸಂಖ್ಯೆ ಹೆಚ್ಚಿರಬೇಕು, ಸದ್ಯದ ಸ್ಥಿತಿ ನೋಡಿ; ಕಾಂಗ್ರೆಸ್ ಪಕ್ಷದಿಂದ ಕೇವಲ ಒಬ್ಬ ಸಂಸದ ಇರೋದ್ರಿಂದ ಅವರಿಗೆ ಮಾತಾಡುವ ಅವಕಾಶ ಕೊಡುತ್ತಿಲ್ಲ, ಸುಮಲತಾ ಅಂಬರೀಶ್ ಮತ್ತು ಜೆಡಿಎಸ್ ಪಕ್ಷದ ಸಂಸದ ಸೇರಿ 27 ಸದಸ್ಯರು ಸಂಸತ್ತಿನಲ್ಲಿದ್ದರೂ ರಾಜ್ಯದ ಪರ ಧ್ವನಿ ಎತ್ತಲ್ಲ ಎಂದರು. ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವ ಕುಮಾರಸ್ವಾಮಿ ಆ ಪಕ್ಷಕ್ಕಿಂತ ಒಂದು ಹಂತ ಮೇಲೆ ಹೋಗಿದ್ದು ಬೇರೆ ವಿಷಯಗಳ ಬಗ್ಗೆ ಧ್ವನಿಯೆತ್ತುತ್ತಾರೆ, ಕರ್ನಾಟಕ ಜನತೆ ಪರ ಎತ್ತಲ್ಲ ಎಂದು ಜಮೀರ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: Lok Sabha polls: 16 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಸಮಾಜವಾದಿ ಪಕ್ಷ, ಮೈನ್‌ಪುರಿಯಿಂದ ಡಿಂಪಲ್ ಯಾದವ್ ಸ್ಪರ್ಧೆ

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.