Assembly Polls | ಜೆಡಿಎಸ್ ಟಿಕೆಟ್​ಗೋಸ್ಕರ ಯಾರೇ ಆಕಾಂಕ್ಷಿಗಳಾಗಿದ್ದರೂ ಪಕ್ಷದ ವರಿಷ್ಠರು ತೆಗೆದುಕೊಳ್ಳುವ ನಿರ್ಣಯವೇ ಅಂತಿಮ: ಅನಿತಾ ಕುಮಾರಸ್ವಾಮಿ

ಅರುಣ್​ ಕುಮಾರ್​ ಬೆಳ್ಳಿ

Updated on: Jan 31, 2023 | 4:58 PM

ರಾಮನಗರ ಕ್ಷೇತ್ರದ ವಿಷಯವೂ ಅಷ್ಟೇ, ವರಿಷ್ಠರು ಯಾರು ಸ್ಪರ್ಧಿಸಬೇಕೆಂದು ಸೂಚಿಸುತ್ತಾರೋ ಅವರೇ ಸ್ಪರ್ಧಿಸುತ್ತಾರೆ ಅಂತ ಅನಿತಾ ಕುಮಾರಸ್ವಾಮಿ ಹೇಳಿದರು.

ರಾಮನಗರ: ಹಾಸನ ಮತಕ್ಷೇತ್ರದಲ್ಲಿ (Hassan Constituency) ಜೆಡಿಎಸ್ ಪಕ್ಷದ ಟಿಕೆಟ್ ಯಾರಿಗೆ ಸಿಗಲಿದೆ ಅಂತ ಇನ್ನೂ ನಿರ್ಧಾರವಾಗಿಲ್ಲ. ರಾಮನಗರದಲ್ಲಿ ಇಂದು ಟಿವಿ9 ಕನ್ನಡ ವಾಹಿನಿಯ ವರದಿಗಾರನೊಂದಿಗೆ ಮಾತಾಡಿದ ಭಾಗದ ಶಾಸಕಿ ಅನಿತಾ ಕುಮಾರಸ್ವಾಮಿ (Anita Kumaraswamy) ಅವರು ಭವಾನಿ ರೇವಣ್ಣ (Bhavani Revanna) ಅವರಿಗೆ ಟಿಕೆಟ್ ಸಿಗುತ್ತೋ ಇಲ್ಲವೋ ಅಂತ ಬಹಳ ಡಿಪ್ಲೊಮ್ಯಾಟಿಕ್ ಆಗಿ ಮಾತಾಡಿದರು. ಟಿಕೆಟ್ ಗೋಸ್ಕರ ಯಾರೇ ಆಕಾಂಕ್ಷಿಗಳಾಗಿದ್ದರೂ ಪಕ್ಷದ ವರಿಷ್ಠರಾದ ಹೆಚ್ ಡಿ ದೇವೇಗೌಡ ಮತ್ತು ಹೆಚ್ ಡಿ ಕುಮಾರಸ್ವಾಮಿಯವರು ತೆಗೆದುಕೊಳ್ಳುವ ನಿರ್ಣಯವೇ ಅಂತಿಮ ಎಂದು ಅವರು ಹೇಳಿದರು. ರಾಮನಗರ ಕ್ಷೇತ್ರದ ವಿಷಯವೂ ಅಷ್ಟೇ, ವರಿಷ್ಠರು ಯಾರು ಸ್ಪರ್ಧಿಸಬೇಕೆಂದು ಸೂಚಿಸುತ್ತಾರೋ ಅವರೇ ಸ್ಪರ್ಧಿಸುತ್ತಾರೆ ಅಂತ ಅನಿತಾ ಕುಮಾರಸ್ವಾಮಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.