ನಮ್ರತಾ ಗೌಡ ಬಗ್ಗೆ ಸ್ನೇಹಿತ್​ ಮನಸ್ಸಿನಲ್ಲಿ ಮೂಡಿದೆಯಾ ಪ್ರೀತಿ? ಇಲ್ಲಿದೆ ವಿಡಿಯೋ ಸಾಕ್ಷಿ

ಸ್ನೇಹಿತ್​ ಅವರ ಮನದಲ್ಲಿ ನಮ್ರತಾ ಗೌಡ ಬಗ್ಗೆ ವಿಶೇಷ ಭಾವನೆ ಹುಟ್ಟಿಕೊಂಡಿರಬಹುದೇ ಎಂಬ ಅನುಮಾನ ಎಲ್ಲರಿಗೂ ಮೂಡಿದೆ. ಹಾಗಾಗಿ ಬಿಗ್​ ಬಾಸ್​ ಮನೆಯಲ್ಲಿ ಇರುವ ಇತರ ಸ್ಪರ್ಧಿಗಳು ಸ್ನೇಹಿತ್​ನ ಕಾಲು ಎಳೆದಿದ್ದಾರೆ. ಪದೇ ಪದೇ ನಮ್ರತಾ ಗೌಡ ಹೆಸರು ಹೇಳಿದ್ದಕ್ಕೆ ಸ್ನೇಹಿತ್​ ನಾಚಿಕೊಂಡಿದ್ದಾರೆ. ಆ ಕ್ಷಣದ ವಿಡಿಯೋ ಇಲ್ಲಿದೆ.

ನಮ್ರತಾ ಗೌಡ ಬಗ್ಗೆ ಸ್ನೇಹಿತ್​ ಮನಸ್ಸಿನಲ್ಲಿ ಮೂಡಿದೆಯಾ ಪ್ರೀತಿ? ಇಲ್ಲಿದೆ ವಿಡಿಯೋ ಸಾಕ್ಷಿ
|

Updated on: Oct 26, 2023 | 4:19 PM

ಕಿರುತೆರೆಯ ಅನೇಕರು ‘ಬಿಗ್​ ಬಾಸ್​ ಕನ್ನಡ ಸೀಸನ್​ 10’ (Bigg Boss Kannada Season 10) ರಿಯಾಲಿಟಿ ಶೋನಲ್ಲಿ ಸ್ಪರ್ಧಿಸುತ್ತಿದ್ದಾರೆ. ‘ನಾಗಿಣಿ’ ಸೀರಿಯಲ್​ ಖ್ಯಾತಿಯ ನಮ್ರತಾ ಗೌಡ ಅವರು ಹಲವು ಕಾರಣದಿಂದ ಗಮನ ಸೆಳೆಯುತ್ತಿದ್ದಾರೆ. ಅದೇ ರೀತಿ ಸ್ನೇಹಿತ್​ (Snehith) ಕೂಡ ಹೈಲೈಟ್​ ಆಗುತ್ತಿದ್ದಾರೆ. ದೊಡ್ಮನೆಯೊಳಗೆ ಸ್ಪರ್ಧಿಗಳ ನಡುವೆ ಪ್ರೀತಿ ಚಿಗುರಿದ ಅನೇಕ ನಿದರ್ಶನಗಳಿವೆ. ಈಗ ಸ್ನೇಹಿತ್​ ಅವರ ಮನದಲ್ಲಿ ನಮ್ರತಾ ಗೌಡ ಬಗ್ಗೆ ವಿಶೇಷ ಭಾವನೆ ಹುಟ್ಟಿಕೊಂಡಿರಬಹುದೇ ಎಂಬ ಅನುಮಾನ ಎಲ್ಲರಿಗೂ ಮೂಡಿದೆ. ಹಾಗಾಗಿ ಬಿಗ್​ ಬಾಸ್​ ಮನೆಯಲ್ಲಿ ಇರುವ ಇತರ ಸ್ಪರ್ಧಿಗಳು ಸ್ನೇಹಿತ್​ನ ಕಾಲು ಎಳೆದಿದ್ದಾರೆ. ಪದೇ ಪದೇ ನಮ್ರತಾ ಗೌಡ ಹೆಸರು ಹೇಳಿದ್ದಕ್ಕೆ ಸ್ನೇಹಿತ್​ ನಾಚಿಕೊಂಡಿದ್ದಾರೆ. ತಾವು ರಾಖಿ ಕಟ್ಟಿಸಿಕೊಳ್ಳುವುದಿಲ್ಲ ಎಂದು ಕೂಡ ಸ್ನೇಹಿತ್​ ಹೇಳಿದ್ದಾರೆ. ಇದೇ ಸಮಯವನ್ನು ಬಳಸಿಕೊಂಡು ನಮ್ರತಾ ಗೌಡ (Namratha Gowda) ಅವರು ಕೋಪಗೊಂಡಂತೆ ನಟಿಸಿದ್ದಾರೆ. ಇದರಿಂದ ಸ್ನೇಹಿತ್​ ಅವರು ಪೇಚಿಗೆ ಸಿಲುಕಿದ್ದಾರೆ. ಈ ಕ್ಷಣದ ವಿಡಿಯೋ ಇಲ್ಲಿದೆ. ಕಲರ್ಸ್​ ಕನ್ನಡ ವಾಹಿನಿಯಲ್ಲಿ ಬಿಗ್​ ಬಾಸ್​ ಶೋ ಪ್ರತಿ ರಾತ್ರಿ 9.30ಕ್ಕೆ ಪ್ರಸಾರ ಆಗುತ್ತಿದೆ. ‘ಜಿಯೋ ಸಿನಿಮಾ’ ಒಟಿಟಿಯಲ್ಲಿ ಉಚಿತವಾಗಿ 24 ಗಂಟೆ ಲೈವ್​ ನೋಡಲು ಅವಕಾಶ ಇದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow us
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
CM Siddaramaiah Press Meet Live: ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ
CM Siddaramaiah Press Meet Live: ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ
ಬೆಂಗಳೂರಿನ ಅನೇಕ ಕೆರೆಗಳಲ್ಲಿ ಕರಗದೇ ತೇಲುತ್ತಿವೆ ಗಣೇಶ ಮೂರ್ತಿಗಳು
ಬೆಂಗಳೂರಿನ ಅನೇಕ ಕೆರೆಗಳಲ್ಲಿ ಕರಗದೇ ತೇಲುತ್ತಿವೆ ಗಣೇಶ ಮೂರ್ತಿಗಳು
‘ಯುಐ’ ಕುರಿತು ಉಪೇಂದ್ರ ವಿಶೇಷ ಸುದ್ದಿಗೋಷ್ಠಿ; ಇಲ್ಲಿದೆ ಲೈವ್ ವಿಡಿಯೋ
‘ಯುಐ’ ಕುರಿತು ಉಪೇಂದ್ರ ವಿಶೇಷ ಸುದ್ದಿಗೋಷ್ಠಿ; ಇಲ್ಲಿದೆ ಲೈವ್ ವಿಡಿಯೋ
ಮೆಡಿಕಲ್​ಗಳಲ್ಲೂ ಸಿಂಥೆಟಿಕ್ ಡ್ರಗ್ಸ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ಮೆಡಿಕಲ್​ಗಳಲ್ಲೂ ಸಿಂಥೆಟಿಕ್ ಡ್ರಗ್ಸ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
VIDEO: ಎಲ್ಲಾ ಮಸಾಲೆಗೆ ವಿರಾಟ್ ಕೊಹ್ಲಿ-ಗೌತಮ್ ಗಂಭೀರ್ ಬ್ರೇಕ್..!
VIDEO: ಎಲ್ಲಾ ಮಸಾಲೆಗೆ ವಿರಾಟ್ ಕೊಹ್ಲಿ-ಗೌತಮ್ ಗಂಭೀರ್ ಬ್ರೇಕ್..!
ಜನ್ಮದಿನದಂದು ಹೇಗಿತ್ತು ನೋಡಿ ಉಪೇಂದ್ರ ಮನೆ ಮುಂದೆ ಫ್ಯಾನ್ಸ್​ ಸಂಭ್ರಮ
ಜನ್ಮದಿನದಂದು ಹೇಗಿತ್ತು ನೋಡಿ ಉಪೇಂದ್ರ ಮನೆ ಮುಂದೆ ಫ್ಯಾನ್ಸ್​ ಸಂಭ್ರಮ
CPL 2024: ಕಾರ್ನ್​ವಾಲ್ ಕಮಾಲ್: ರಾಯಲ್ಸ್​ಗೆ ಭರ್ಜರಿ ತಂದುಕೊಟ್ಟ ರಹ್​ಕೀಮ್
CPL 2024: ಕಾರ್ನ್​ವಾಲ್ ಕಮಾಲ್: ರಾಯಲ್ಸ್​ಗೆ ಭರ್ಜರಿ ತಂದುಕೊಟ್ಟ ರಹ್​ಕೀಮ್