Chandrayaan-3 Moon Landing; ಸಫಲ ಲ್ಯಾಂಡಿಂಗ್ ಮತ್ತು ನಾಡಿನ ಶ್ರೇಯೋಭಿವೃದ್ಧಿಗೆ ಮಂತ್ರಾಲಯ ರಾಘವೇಂದ್ರ ಸ್ವಾಮಿ ಮಠದಲ್ಲಿ ಬಿಜೆಪಿ ಶಾಸಕನ ಆರಾಧನೆ

Chandrayaan-3 Landing: ಜೈ ಜವಾನ್ ಜೈ ಕಿಸಾನ್ ಉಕ್ತಿಗೆ ದಿವಂಗತ ಪ್ರಧಾನ ಮಂತ್ರಿ ಅಟಲ ಬಿಹಾರಿ ವಾಜಪೇಯಿ ಅವರು ಜೈ ವಿಜ್ಞಾನ ಸಹ ಸೇರಿಸಿದ್ದರು, ಹಾಗಾಗಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ವಿಜ್ಞಾಮಿಗಳ ಪರಿಶ್ರಮ ಸಫಲವಾಗಲಿ ಎಂದು ಪ್ರಾರ್ಥಸಿರುವುದಾಗಿ ಹೇಳಿದರು.

ರಾಯಚೂರು: ಚಂದ್ರಯಾನ-3 ವಿಕ್ರಮ ಲ್ಯಾಂಡರ್ ನ ಲ್ಯಾಂಡಿಂಗ್ (Chandrayaan-3 Vikram Lander landing) ನಿರ್ವಿಘ್ನವಾಗಿ ನಡೆಯಲಿ ಅಂತ ಮೈಸೂರು ಜಿಲ್ಲೆ ಕೃಷ್ಣರಾಜ ಕ್ಷೇತ್ರದ ಬಿಜೆಪಿ ಶಾಸಕ ಟಿಎಸ್ ಶ್ರೀವತ್ಸ (TS Srivatsa) ಮತ್ತು ಮೈಸೂರು ನಗರ ಬಿಜೆಪಿ ಘಟಕದ ಪದಾಧಿಕಾರಿಗಳೊಂದಿಗೆ ರಾಯಚೂರಿಗೆ ಹತ್ತಿರದ ಮಂತ್ರಾಲಯದಲ್ಲಿ ರಾಘವೇಂದ್ರ ಸ್ವಾಮಿಗೆ (Mantralaya Raghvendra Swamy Mutt) ವಿಶೇಷ ಆರಾಧನೆ ಸಲ್ಲಿಸಿದರು. ಚಂದ್ರಯಾನ-3 ಯಶಸ್ಸಿನ ಜೊತೆಗೆ ರಾಜ್ಯಕ್ಕೆ ಒಳ್ಳೆಯದಾಗಲಿ ಮತ್ತು ಮುಂಗಾರು ಮಳೆ ವಿಫಲಗೊಂಡಿರುವುದರಿಂದ ರೈತ ಸಮುದಾಯಕ್ಕೆ ಸಂಕಷ್ಟ ಎದುರಾಗದಿರಲಿ ಎಂಬ ಹರಕೆಗಳನ್ನು ಸಹ ಶ್ರೀವತ್ಸ ಮತ್ತು ಸಂಗಡಿಗರು ಗುರುರಾಯರಿಗೆ ಸಮರ್ಪಿಸಿದರು. ಟಿವಿ9 ಕನ್ನಡ ವಾಹಿನಿಯ ರಾಯಚೂರು ವರದಿಗಾರನೊಂದಿಗೆ ಮಾತಾಡಿದ ಅವರು, ಜೈ ಜವಾನ್ ಜೈ ಕಿಸಾನ್ ಉಕ್ತಿಗೆ ದಿವಂಗತ ಪ್ರಧಾನ ಮಂತ್ರಿ ಅಟಲ ಬಿಹಾರಿ ವಾಜಪೇಯಿ ಅವರು ಜೈ ವಿಜ್ಞಾನ ಸಹ ಸೇರಿಸಿದ್ದರು, ಹಾಗಾಗಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ವಿಜ್ಞಾಮಿಗಳ ಪರಿಶ್ರಮ ಸಫಲವಾಗಲಿ ಎಂದು ಪ್ರಾರ್ಥಸಿರುವುದಾಗಿ ಹೇಳಿದರು. ಅದಲ್ಲದೆ, ಭಾರತವನ್ನು ವಿಶ್ವದ ಮೂರನೇ ಅತಿದೊಡ್ಡ ಇಕಾನಮಿ ಮಾಡಬೇಕೆನ್ನುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಸಂಕಲ್ಪ ಆದಷ್ಟು ಬೇಗ ಈಡೇರಲಿ ಅಂತಲೂ ಹರಕೆ ಸಲ್ಲಿಸಿರುವುದಾಗಿ ಶಾಸಕ ಶ್ರೀವತ್ಸ ಹೇಳಿದರು.

ಮತ್ತಷ್ಟು ಕನ್ನಡ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More
Follow Us