ಹಿಂದೂ ಆಗಿದ್ದರೂ ಹಿಂದುತ್ವದ ವಿರೋಧಿ ಅಂತ ಸಿದ್ದರಾಮಯ್ಯ ಹೇಳುವುದು ಅರ್ಥಹೀನ: ಮಂತ್ರಾಲಯ ಸ್ವಾಮೀಜಿ

ಅರುಣ್​ ಕುಮಾರ್​ ಬೆಳ್ಳಿ

Updated on: Feb 07, 2023 | 7:27 PM

ನಮ್ಮ ಸಂವಿಧಾನವೇ ಜಾತ್ಯಾತೀತ ಎಲ್ಲ ಧರ್ಮಗಳಿಗೆ ಸಮಾನ ಪ್ರಾಶಸ್ತ್ಯ ನೀಡಿದೆ, ಧರ್ಮ-ಜಾತಿಗಳಲ್ಲಿ ತಾರತಮ್ಯ ಮಾಡಿದರೆ ಅದು ಸಂವಿಧಾನಕ್ಕೆ ಅವಮಾನ ಮಾಡಿದಂತೆ ಎಂದು ಶ್ರೀಗಳು ಹೇಳಿದರು.

ಬಾಗಲಕೋಟೆ: ನಾನು ಹಿಂದೂ ಅದರೆ ಹಿಂದೂತ್ವದ ವಿರೋಧಿ ಅಂತ ಸಿದ್ದರಾಮಯ್ಯನವರು (Siddaramaiah) ಹೇಳೋದು ಅರ್ಥಹೀನವಾದದ್ದು ಎಂದು ಮಂತ್ರಾಲಯ ರಾಘವೇಂದ್ರ ಮಠದ ಸುಬುದೇಂದ್ರತೀರ್ಥ ಸ್ವಾಮೀಜಿ (Sri Subudendrateertha Swamiji) ಹೇಳಿದರು. ಬಾಗಲಕೋಟೆಯಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತಾಡಿದ ಶ್ರೀಗಳು ಹಿಂದೂ ಅಂತಾದ ಮೇಲೆ ಹಿಂದೂತ್ವವನ್ನು ಗೌರವಿಸಲೇ ಬೇಕು, ಹಿಂದೂತ್ವದ ಬಗ್ಗೆ ಭಿನಾಭಿಪ್ರಾಯಗಳಿರಬಹುದು ಆದರೆ ಹಿಂದೂತ್ವವನ್ನೇ ವಿರೋಧಿಸುತ್ತೇನೆ ಅಂತ ಹೇಳುವುದು ಸರ್ವಥಾ ತಪ್ಪು ಎಂದು ಅವರು ಹೇಳಿದರು. ರಾಜಕೀಯ ಪಕ್ಷಗಳು ತಾವು ಜಾತ್ಯಾತೀತ ಅಂತ ಹೇಳಿಕೊಳ್ಳುವುದರಲ್ಲೂ ಅರ್ಥವಿಲ್ಲ, ಯಾಕೆಂದರೆ ನಮ್ಮ ಸಂವಿಧಾನವೇ ಜಾತ್ಯಾತೀತ (the Constitution), ಎಲ್ಲ ಧರ್ಮಗಳಿಗೆ ಸಮಾನ ಪ್ರಾಶಸ್ತ್ಯ ನೀಡಿದೆ, ಧರ್ಮ-ಜಾತಿಗಳಲ್ಲಿ ತಾರತಮ್ಯ ಮಾಡಿದರೆ ಅದು ಸಂವಿಧಾನಕ್ಕೆ ಅವಮಾನ ಮಾಡಿದಂತೆ ಎಂದು ಶ್ರೀಗಳು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.