ಉಡುಪಿ: ಪೋಷಕರಿಲ್ಲದೆ ಹೊಳೆ ದಾಟುವುದು ಅಸಾಧ್ಯ, ಬೈಂದೂರಿನಲ್ಲಿ ಮಕ್ಕಳು ಶಾಲೆ ತಲುಪುವುದೇ ಸಾಹಸ!

Edited By:

Updated on: Jul 02, 2024 | 10:02 AM

ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಹುಲ್ಕಡಕೆಯ ಮಕ್ಕಳು ಶಾಲೆಗೆ ಹೋಗಬೇಕಂದ್ರೆ ಹೊಳೆಯನ್ನು ದಾಟಿ ಸಾಗಬೇಕು. ಜಿಲ್ಲೆಯಲ್ಲಿ ಭಾರಿ ಮಳೆಯಿಂದಾಗಿ ಹೊಳೆ ತುಂಬಿ ಹರಿಯುತ್ತಿದ್ದು ಪೋಷಕರು ತಮ್ಮ ಮಕ್ಕಳನ್ನು ಶಾಲೆಗೆ ಬಿಡಲು ಹರಸಾಹಸ ಪಡುವಂತಹ ಸ್ಥಿತಿ ಇದೆ.

ಉಡುಪಿ, ಜುಲೈ.02: ಮಳೆ(Rain) ಬಂದರೆ ಸಾಕು, ಬೈಂದೂರಿನ ಮಕ್ಕಳಿಗೆ ಶಾಲೆಗೆ ಹೋಗುವುದೇ ಸಮಸ್ಯೆ ಆಗಿ ಬಿಡುತ್ತದೆ. ಪೋಷಕರು ತಮ್ಮ ಮಕ್ಕಳನ್ನು ಸುರಕ್ಷಿತವಾಗಿ ಶಾಲೆಗೆ ಕರೆದುಕೊಂಡು ಹೋಗಿ ಬಿಡಲು ಹರಸಾಹಸವನ್ನೇ ಮಾಡಬೇಕಾಗಿ ಬರುತ್ತದೆ. ಸದ್ಯ ಉಡುಪಿಯ (Udupi) ವಿಡಿಯೋ ಒಂದು ವೈರಲ್ ಆಗಿದ್ದು ಅದರಲ್ಲಿ ಪೋಷಕರು ಯಾವ ರೀತಿ ತಮ್ಮ ಮಕ್ಕಳನ್ನು ಶಾಲೆಗೆ ತಲುಪಿಸಲು ವಿಧಿಯ ಜೊತೆ ಹೊಡೆದಾಡುತ್ತಿದ್ದಾರೆ ಎಂಬುವುದು ಬಯಲಾಗಿದೆ.

ಕಳೆದ ವಾರ ರೆಡ್ ಅಲರ್ಟ್ ಇದ್ದಾಗಲೂ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ ಘೋಷಿಸಿರಲಿಲ್ಲ. ನೆರೆಯ ದಕ್ಷಿಣ ಕನ್ನಡಕ್ಕೆ ರಜೆ ನೀಡಲಾಗಿತ್ತು. 2 ದಿನ ರೆಡ್ ಅಲರ್ಟ್ ಹಿನ್ನೆಲೆ ರಜೆ ಘೋಷಿಸಲಾಗಿತ್ತು. ಆದರೆ ಉಡುಪಿ ಜಿಲ್ಲೆಗೆ ಒಂದು ದಿನವೂ ರಜೆ ನೀಡಿರಲಿಲ್ಲ. ಹೀಗಾಗಿ ಬೈಂದೂರಿನಲ್ಲಿ ಪೋಷಕರು ತಮ್ಮ ಮಕ್ಕಳನ್ನು ಶಾಲೆಗೆ ತಲುಪಿಸಲು ಜೋರಾಗಿ ಹರಿಯುವ ಹೊಳೆ ದಾಟುವಂತಹ ಸ್ಥಿತಿ ಎದುರಾಗಿತ್ತು.

ಗೋಳಿಹೊಳೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಹುಲ್ಕಡಕೆಯಲ್ಲಿ ಹೆಚ್ಚಾಗಿ ಮರಾಠ ಜನಾಂಗ ವಾಸವಾಗಿದ್ದಾರೆ. ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಕೈಗನ್ನಡಿಯಂತಿದೆ ಈ ಗ್ರಾಮ. ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಪೋಷಕರು ಯಾವ ರಿಸ್ಕ್ ಬೇಕಾದ್ರು ತೆಗೆದುಕೊಳ್ಳಬೇಕಿದೆ. ಆದರೆ ಕೊಂಚ ಯಾವಾರಿದರೂ ಅನಾವುತ ಕಟ್ಟಿಟ್ಟಬುತ್ತಿ.

ವಿಡಿಯೋ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Prajwal Amin

ಪ್ರಜ್ವಲ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪಡೆದಿರುತ್ತಾರೆ. ಉಡುಪಿ ಜಿಲ್ಲೆಯ ಸ್ಥಳೀಯ ಖಾಸಗಿ ಸುದ್ದಿವಾಹಿನಿಯ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ ಇವರು ಬಳಿಕ ಪ್ರಜಾವಾಣಿಯ ವರದಿಗಾರನಾಗಿ ಕೆಲಸ ಮಾಡಿರುತ್ತಾರೆ. ನಂತರ 6 ವರ್ಷ ಟಿ.ವಿ 5ನ ದಕ್ಷಿಣ ಕನ್ನಡ ಜಿಲ್ಲಾ ವರದಿಗಾರನಾಗಿ ನಂತರ ದಿಗ್ವಿಜಯ ನ್ಯೂಸ್ ನ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವರದಿಗಾರನಾಗಿ ಕಾರ್ಯನಿರ್ವಾಹಸಿದ್ದಾರೆ. ಕಳೆದ ಹನ್ನೊಂದು ತಿಂಗಳಿನಿಂದ ಟಿ.ವಿ 9 ಸಂಸ್ಥೆಯಲ್ಲಿ ಉಡುಪಿ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಾಹಿಸುತ್ತಿದ್ದಾರೆ.

Read More