IT raids: ಬಿಜೆಪಿ ವಿಧಾನ ಪರಿಷತ್ ಸದಸ್ಯ ಆರ್ ಶಂಕರ್ ಮನೆ ಮೇಲೆ ವಾಣಿಜ್ಯ ತೆರಿಗೆ ಅಧಿಕಾರಿಗಲ ದಾಳಿ, ಹಲವು ವಸ್ತುಗಳು ಪತ್ತೆ

ಅರುಣ್​ ಕುಮಾರ್​ ಬೆಳ್ಳಿ

Updated on: Mar 15, 2023 | 12:07 PM

ತಪಾಸಣೆ ವೇಳೆ ಸಾರ್ವಜನಿಕರಿಗೆ ಹಂಚಲು ತಂದಿದ್ದ ಎಮ್ ಎಲ್ ಸಿ ಅವರ ಭಾವಚಿತ್ರವಿರುವ ಸೀರೆಗಳ ಬಾಕ್ಸ್, ಸ್ಟೀಲ್ ತಟ್ಟೆ-ಲೋಟ ಮತ್ತು ಶಾಲಾಮಕ್ಕಳಿಗೆ ವಿತರಿಸಲು ತಂದಿದ್ದ ಬ್ಯಾಗ್ ಗಳು ಪತ್ತೆಯಾಗಿವೆ.

ಹಾವೇರಿ: ರಾಜ್ಯದ ಬಿಜೆಪಿ ಶಾಸಕ ಮತ್ತು ವಿಧಾನ ಪರಿಷತ್ ಸದಸ್ಯರಿಗೆ ರಾಹುಕಾಲ ಶುರುವಾದಂತಿದೆ. ಇತ್ತೀಚಿಗಷ್ಟೇ ಚನ್ನಗಿರಿಯ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪರ (Madal Virupakshappa) ಮನೆ ಮೇಲೆ ದಾಳಿ ನಡೆಸಿದ್ದ ಲೋಕಾಯುಕ್ತ ಅಧಿಕಾರುಗಳು ಕೋಟ್ಯಾಂತರ ರೂಪಾಯಿ ವಶಪಡಿಸಿಕೊಂಡಿದ್ದರು. ಇವತ್ತು ಜಿಲ್ಲೆಯ ರಾಭೆಬೆನ್ನೂರಲ್ಲಿರುವ ಪಕ್ಷದ ವಿಧಾನ ಪರಿಷತ್ ಸದಸ್ಯ ಆರ್ ಶಂಕರ್ (R Shankar) ಅವರ ಮನೆ ಮತ್ತು ಕಚೇರಿಯ ಮೇಲೆ ದಾಳಿ ಆದಾಯ ತೆರಿಗೆ ಇಲಾಖೆ ಆಧಿಕಾರಿಗಳು (IT officials) ದಾಳಿ ನಡೆಸಿದ್ದಾರೆ. ತಪಾಸಣೆ ವೇಳೆ ಸಾರ್ವಜನಿಕರಿಗೆ ಹಂಚಲು ತಂದಿದ್ದ ಎಮ್ ಎಲ್ ಸಿ ಅವರ ಭಾವಚಿತ್ರವಿರುವ ಸೀರೆಗಳ ಬಾಕ್ಸ್, ಸ್ಟೀಲ್ ತಟ್ಟೆ-ಲೋಟ ಮತ್ತು ಶಾಲಾಮಕ್ಕಳಿಗೆ ವಿತರಿಸಲು ತಂದಿದ್ದ ಬ್ಯಾಗ್ ಗಳು ಪತ್ತೆಯಾಗಿವೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Mar 15, 2023 12:07 PM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.