ಬೆಂಗಳೂರಿನಲ್ಲಿ ಸಂಜೆ ದಿಢೀರ್ ಸುರಿದ ಮಳೆ.. ವರುಣಾರ್ಭಟಕ್ಕೆ ಸವಾರರು ಫುಲ್ ಶಾಕ್, ಇಲ್ಲಿದೆ ವಿಡಿಯೋ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲೂ ಧಾರಕಾರ ಮಳೆ ಸುರಿಯುತ್ತಿದ್ದು, ಮಳೆಯಿಂದಾಗಿ ವಾಹನ ಸವಾರರಿಗೆ ತೀವ್ರ ಸಂಕಷ್ಟ ಎದುರಾಗಿದೆ. ಚಿಕ್ಕಬಾಣಾವಾರ ರೈಲ್ವೆ ಅಂಡರ್ ಪಾಸ್ನಲ್ಲಿ ಮಳೆ ನೀರು ತುಂಬಿದೆ. ಇನ್ನು ತಗ್ಗು ಪ್ರದೇಶಗಳಿಗೆ ನೀರು ನುಗ್ಗುವ ಆತಂಕ ಎದುರಾಗಿದೆ.
ಬೆಂಗಳೂರು, ಸೆ.13: ನಗರದಲ್ಲಿ ಇಂದು(ಸೆ.13)ಪೀಣ್ಯ, ದಾಸರಹಳ್ಳಿ, ಬಾಗಲಗುಂಟೆ, ಶೆಟ್ಟಿಹಳ್ಳಿ ಮಲ್ಲಸಂದ್ರ, ಸೇರಿದಂತೆ ಹಲವು ಕಡೆ ಮಳೆ ಆರಂಭವಾಗಿದೆ. ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆಯ ನೆಲಮಂಗಲದಲ್ಲೂ ಧಾರಕಾರ ಮಳೆ ಸುರಿಯುತ್ತಿದ್ದು, ಮಳೆಯಿಂದಾಗಿ ವಾಹನ ಸವಾರರಿಗೆ ತೀವ್ರ ಸಂಕಷ್ಟ ಎದುರಾಗಿದೆ. ಚಿಕ್ಕಬಾಣಾವಾರ ರೈಲ್ವೆ ಅಂಡರ್ ಪಾಸ್ನಲ್ಲಿ ಮಳೆ ನೀರು ತುಂಬಿದೆ. ಬೆಂಗಳೂರು ಉತ್ತರ ತಾಲೂಕಿನ ಚಿಕ್ಕಬಾಣಾವಾರದಲ್ಲಿ ಸತತ ಒಂದು ಗಂಟೆಯಿಂದ ಸುರಿಯುತ್ತಿರುವ ಮಳೆಯಿಂದ ವಾಹನಗಳು ನೀರಲ್ಲೇ ಸಾಗುತ್ತಿವೆ. ಇನ್ನು ತಗ್ಗು ಪ್ರದೇಶಗಳಿಗೆ ನೀರು ನುಗ್ಗುವ ಆತಂಕ ಎದುರಾಗಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
