AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಐಸಿಸಿ ನೂತನ ಕಟ್ಟಡವನ್ನು ಬಹಳ ಚೆನ್ನಾಗಿ ನಿರ್ಮಿಸಿದ್ದಾರೆ, ನಿರ್ಮಾಣಕ್ಕೆ 15 ವರ್ಷ ಹಿಡಿದಿದೆ: ಸಿದ್ದರಾಮಯ್ಯ

ಎಐಸಿಸಿ ನೂತನ ಕಟ್ಟಡವನ್ನು ಬಹಳ ಚೆನ್ನಾಗಿ ನಿರ್ಮಿಸಿದ್ದಾರೆ, ನಿರ್ಮಾಣಕ್ಕೆ 15 ವರ್ಷ ಹಿಡಿದಿದೆ: ಸಿದ್ದರಾಮಯ್ಯ

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Jan 15, 2025 | 4:35 PM

Share

ಜಾತಿಗಣತಿ ವರದಿಯನ್ನು ನಾಳಿನ ಸಂಪುಟ ಸಭೆಯಲ್ಲಿ ಪ್ರಸ್ತಾಪಿಸುವುದಿಲ್ಲ, ಮುಂದಿನ ಸಂಪುಟ ಸಭೆಯಲ್ಲಿ ಅದನ್ನು ಮಾಡುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದರು. ಜಾತಿಗಣತಿ ವರದಿಯಲ್ಲಿ ಏನಿದೆ ಅಂತ ತನಗೇ ಗೊತ್ತಿಲ್ಲ, ಅದನ್ನು ಇನ್ನೂ ಬಹಿರಂಗ ಮಾಡಿಲ್ಲ, ಕೇವಲ ಊಹಾಪೋಹದ ಅಂಕಿಅಂಶಗಳ ಮೇಲೆ ಕೆಲವರು ಚರ್ಚೆ ಮಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು.

ನವದೆಹಲಿ: ದೇಶದ ರಾಜಧಾನಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಸಿಎಂ ಸಿದ್ದರಾಮಯ್ಯ, ಎಐಸಿಸಿ ನೂತನ ಕಚೇರಿ ಉದ್ಘಾಟನೆಯಾಗಿದೆ, ಮನಮೋಹನ ಸಿಂಗ್ ಅವರು ಪ್ರಧಾನ ಮಂತ್ರಿಯಾಗಿದ್ದಾಗ ಶುರುವಾದ ಕಟ್ಟಡದ ಕಾಮಗಾರಿ 15 ವರ್ಷಗಳ ನಂತರ ಪೂರ್ಣಗೊಂಡಿದೆ ಎಂದು ಹೇಳಿದರು. ಸಮಾರಂಭದಲ್ಲಿ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಬಹಳ ಚೆನ್ನಾಗಿ ಮಾತಾಡಿದರು ಎಂದು ಹೇಳಿದ ಸಿದ್ದರಾಮಯ್ಯ, 2023ರಲ್ಲಿ ರಾಮಮಂದಿರ ಲೋಕಾರ್ಪಣೆಯ ನಂತರವೇ ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿದ್ದು ಅಂತ ಅರೆಸ್ಸೆಸ್ ಮುಖಂಡ ಮೋಹನ್ ಭಾಗವತ್ ಹೇಳಿರುವುದಕ್ಕೆ ಅರ್ಥವಿಲ್ಲ, 1947ರಲ್ಲಿ ಬ್ರಿಟಿಷರನ್ನು ಭಾರತದಿಂದ ತೊಲಗಿಸಿದ ಕ್ಷಣವೇ ಭಾರತಲ್ಲೆ ಸ್ವಾತಂತ್ರ್ಯ ಸಿಕ್ಕಿದ್ದು ಎಂದು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಭ್ರಷ್ಟಾಚಾರ ಆರೋಪ: ಸಿದ್ದರಾಮಯ್ಯ ಸಂಪುಟದ ಮತ್ತೋರ್ವ ಸಚಿವ ವಿರುದ್ಧ ರಾಜ್ಯಪಾಲರಿಗೆ ದೂರು

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.