ರಾಜಕೀಯದಲ್ಲಿ ನನ್ನನ್ನು ಗುರುತಿಸಿ ಬೆಳೆಸಿದ್ದು ಮಾಜಿ ಸಂಸದೆ ಮಾರ್ಗರೆಟ್ ಆಳ್ವಾ: ಲಕ್ಷ್ಮಿ ಹೆಬ್ಬಾಳ್ಕರ್, ಸಚಿವೆ

ಅರುಣ್​ ಕುಮಾರ್​ ಬೆಳ್ಳಿ

Updated on: Jun 02, 2025 | 2:41 PM

ಮುಂದುವರಿದು ಮಾತಾಡಿದ ಲಕ್ಷ್ಮಿ ಹೆಬ್ಬಾಳ್ಕರ್ ತನ್ನ ಬೆಳವಣಿಗೆಗೆ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಸಹ ಕಾರಣವಾಗಿದ್ದಾರೆ ಎಂದರು. ಇವತ್ತು ಒಂದು ಜನಪ್ರಿಯ ಸರ್ಕಾರದ ಭಾಗವಾಗಿದ್ದೇನೆ, ಚುನಾವಣೆ ಸಮಯದಲ್ಲಿ ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸಿದ್ದೇವೆ, ತಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗ 6ತಿಂಗಳು ಸಹ ಬಾಳಲ್ಲ ಎಂದು ಬಿಜೆಪಿ ನಾಯಕರು ಮೂದಲಿಸಿದ್ದರು ಎಂದು ಸಚಿವೆ ಹೇಳಿದರು.

ಬೆಂಗಳೂರು, ಜೂನ್ 2: ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಚೇರಿಯಲ್ಲಿ ಕಾರ್ಯಕರ್ತರ ಅಹವಾಲುಗಳನ್ನು ಸ್ವೀಕರಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತಾಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ತಾನು ರಾಜಕಾರಣದಲ್ಲಿ ರಾಜ್ಯದ ಒಬ್ಬ ಮಂತ್ರಿಯಾಗುವಷ್ಟು ಬೆಳೆಯಲು ಮಾಜಿ ಸಂಸದೆ ಮಾರ್ಗರೆಟ್ ಆಳ್ವಾ ಕಾರಣವೆಂದು ಹೇಳಿದರು. ಮೊದಲಿಗೆ ಅವರು ಖಾನಾಪುರದಲ್ಲಿ ತನ್ನನ್ನು ಗುರುತಿಸಿ ಬೂತ್ ಏಜೆಂಟ್ ಆಗಿ ನೇಮಕ ಮಾಡಿದ್ದರು ಮತ್ತು ನಂತರ 1999ರಲ್ಲಿ ಅಸೆಂಬ್ಲಿ ಮತ್ತು ಪಾರ್ಲಿಮೆಂಟ್ ಚುನಾವಣೆ ಒಟ್ಟಿಗೆ ನಡೆದಾಗ ಅವರು ಪ್ರತಿನಿಧಿಸುತ್ತಿದ್ದ ಉತ್ತರ ಕನ್ನಡ ಕ್ಷೇತ್ರಕ್ಕೆ ಕೌಟಿಂಗ್ ಏಜೆಂಟ್ ಆಗಿ ಕರೆಸಿಕೊಂಡಿದ್ದರು ಎಂದ ಹೆಬ್ಬಾಳ್ಕರ್, ಆಗ ಈವಿಎಂಗಳು ಬಂದಿರಲಿಲ್ಲ, ಬ್ಯಾಲಟ್ ಪೇಪರ್​ಗಳ ಮೂಲಕ ಚುನಾವಣೆ ನಡೆಯುತ್ತಿತ್ತು ಎಂದರು.

ಇದನ್ನೂ ಓದಿ:  ಪರಿಷತ್​ನಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ನಿಂದನೆ ಪ್ರಕರಣ ಒಂದು ಕೆಟ್ಟ ಘಳಿಗೆ ಎಂದ ಎಮ್ಮೆಲ್ಸಿ ಸಿಟಿ ರವಿ

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.