ಬೆಳಗಾವಿಯಲ್ಲಿ ಶಿವಾಜಿ ಪ್ರತಿಮೆ ನಿರ್ಮಾಣಕ್ಕೆ 11 ಕೋಟಿ ರೂ. ಬಿಡುಗಡೆ ಮಾಡಿದ್ದು ನಾನು: ಗಾಲಿ ಜನಾರ್ಧನ ರೆಡ್ಡಿ, ಕೆಆರ್ ಪಿಪಿ ಅಧ್ಯಕ್ಷ
ಹಿಂದೆ ಬಿಎಸ್ ಯಡಿಯೂರಪ್ಪನವರ ಸಂಪುಟದಲ್ಲಿ ಪ್ರವಾಸೋದ್ಯಮ ಸಚಿವನಾಗಿದ್ದಾಗ ಹಣ ಬಿಡುಗಡೆ ಮಾಡಿದ್ದೆ ಎಂದು ಅವರು ಹೇಳುತ್ತಾರೆ
ಕೊಪ್ಪಳ: ಅತ್ತ ಬೆಳಗಾವಿಯಲ್ಲಿ ಇಂದು ಮುಖ್ಯಮಂತ್ರಿ ಬಸವರಾಜ್ ಎಸ್ ಬೊಮ್ಮಾಯಿ (Basavaraj S Bommai) ಅವರು ಲೋಕಾರ್ಪಣೆ ಮಾಡಿದ ಶಿವಾಜಿ ಪ್ರತಿಮೆ ಬಗ್ಗೆ ಆಡಳಿತ ಪಕ್ಷ ಮತ್ತು ವಿರೋಧ ಪಕ್ಷಗಳು ಶ್ರೇಯಸ್ಸು ತೆಗೆದುಕೊಳ್ಳುವ ಪ್ರಯತ್ನದಲ್ಲಿ ಮುಳುಗಿದ್ದರೆ ಇತ್ತ ಕೊಪ್ಪಳದ ಗಂಗಾವತಿಯಲ್ಲಿ ಮಾತಾಡಿದ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಧ್ಯಕ್ಷ ಗಾಲಿ ಜನಾರ್ಧನ ರೆಡ್ಡಿ (Gali Janardhan Reddy) ಅವರು ಪ್ರತಿಮೆ ನಿರ್ಮಾಣಕ್ಕೆ ರೂ. 11 ಕೋಟಿ ಅನುದಾನ ಬಿಡುಗಡೆ ಮಾಡಿದ್ದು ತಾನು ಎಂದು ಹೇಳುತ್ತ್ತಿದ್ದಾರೆ. ಹಿಂದೆ ಬಿಎಸ್ ಯಡಿಯೂರಪ್ಪನವರ (BS Yediyurappa) ಸಂಪುಟದಲ್ಲಿ ಪ್ರವಾಸೋದ್ಯಮ ಸಚಿವನಾಗಿದ್ದಾಗ ಹಣ ಬಿಡುಗಡೆ ಮಾಡಿದ್ದೆ ಎಂದು ಅವರು ಹೇಳುತ್ತಾರೆ. ಜನ ನೂರಾರು ವರ್ಷಗಳ ಕಾಲ ನೆನಪಿಡುವಂಥ ಕೆಲಸಗಳನ್ನು ತಾನು ಮಾಡಿರುವುದಾಗಿ ರೆಡ್ಡಿ ಹೇಳುತ್ತಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್

ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ

ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ

ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
