ಬೆಳಗಾವಿಯಲ್ಲಿ ಶಿವಾಜಿ ಪ್ರತಿಮೆ ನಿರ್ಮಾಣಕ್ಕೆ 11 ಕೋಟಿ ರೂ. ಬಿಡುಗಡೆ ಮಾಡಿದ್ದು ನಾನು: ಗಾಲಿ ಜನಾರ್ಧನ ರೆಡ್ಡಿ, ಕೆಆರ್ ಪಿಪಿ ಅಧ್ಯಕ್ಷ
ಹಿಂದೆ ಬಿಎಸ್ ಯಡಿಯೂರಪ್ಪನವರ ಸಂಪುಟದಲ್ಲಿ ಪ್ರವಾಸೋದ್ಯಮ ಸಚಿವನಾಗಿದ್ದಾಗ ಹಣ ಬಿಡುಗಡೆ ಮಾಡಿದ್ದೆ ಎಂದು ಅವರು ಹೇಳುತ್ತಾರೆ
ಕೊಪ್ಪಳ: ಅತ್ತ ಬೆಳಗಾವಿಯಲ್ಲಿ ಇಂದು ಮುಖ್ಯಮಂತ್ರಿ ಬಸವರಾಜ್ ಎಸ್ ಬೊಮ್ಮಾಯಿ (Basavaraj S Bommai) ಅವರು ಲೋಕಾರ್ಪಣೆ ಮಾಡಿದ ಶಿವಾಜಿ ಪ್ರತಿಮೆ ಬಗ್ಗೆ ಆಡಳಿತ ಪಕ್ಷ ಮತ್ತು ವಿರೋಧ ಪಕ್ಷಗಳು ಶ್ರೇಯಸ್ಸು ತೆಗೆದುಕೊಳ್ಳುವ ಪ್ರಯತ್ನದಲ್ಲಿ ಮುಳುಗಿದ್ದರೆ ಇತ್ತ ಕೊಪ್ಪಳದ ಗಂಗಾವತಿಯಲ್ಲಿ ಮಾತಾಡಿದ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಧ್ಯಕ್ಷ ಗಾಲಿ ಜನಾರ್ಧನ ರೆಡ್ಡಿ (Gali Janardhan Reddy) ಅವರು ಪ್ರತಿಮೆ ನಿರ್ಮಾಣಕ್ಕೆ ರೂ. 11 ಕೋಟಿ ಅನುದಾನ ಬಿಡುಗಡೆ ಮಾಡಿದ್ದು ತಾನು ಎಂದು ಹೇಳುತ್ತ್ತಿದ್ದಾರೆ. ಹಿಂದೆ ಬಿಎಸ್ ಯಡಿಯೂರಪ್ಪನವರ (BS Yediyurappa) ಸಂಪುಟದಲ್ಲಿ ಪ್ರವಾಸೋದ್ಯಮ ಸಚಿವನಾಗಿದ್ದಾಗ ಹಣ ಬಿಡುಗಡೆ ಮಾಡಿದ್ದೆ ಎಂದು ಅವರು ಹೇಳುತ್ತಾರೆ. ಜನ ನೂರಾರು ವರ್ಷಗಳ ಕಾಲ ನೆನಪಿಡುವಂಥ ಕೆಲಸಗಳನ್ನು ತಾನು ಮಾಡಿರುವುದಾಗಿ ರೆಡ್ಡಿ ಹೇಳುತ್ತಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ

