ಹುಲಿ ಉಗುರು ಪ್ರಕರಣ: ವರ್ತೂರು ಸಂತೋಷ್ ಅಮ್ಮ ಬಹಳ ಆತಂಕದಲ್ಲಿದ್ದರು, ಈಗ ಅವರಿಗೆ ನೆಮ್ಮದಿ ಸಿಕ್ಕಿದೆ: ಸಂತೋಷ್ ದೊಡ್ಡಪ್ಪ

ಅರುಣ್​ ಕುಮಾರ್​ ಬೆಳ್ಳಿ

Updated on: Oct 27, 2023 | 5:27 PM

ರೈತಾಪಿ ಹುಡುಗ, ಸಮಾಜದಲ್ಲಿ ಗುರುತಿಸಿಕೊಳ್ಳುತ್ತಿರುವಾಗಲೇ ಹೀಗಾಯಿತಲ್ಲ ಮನೆಯಲ್ಲಿ ಎಲ್ಲರೂ ದುಃಖದಲ್ಲಿದ್ದರು, ಆದರೆ ಅವನು ಈಗ ಬಿಡುಗಡೆಯಾಗುತ್ತಿರೋದು ಸಂತೋಷವನ್ನುಂಟು ಮಾಡಿದೆ ಎಂದು ಅವರು ಹೇಳಿದರು. ಪುನಃ ಸಂತೋಷ್ ಬಿಗ್ ಬಾಸ್ ಗೆ ಹೋಗ್ತಾರಾ? ಅಂತ ಕೇಳಿದ ಪ್ರಶ್ನೆಗೆ ರಮೇಶ್, ಬಿಗ್ ಬಾಸ್ ಟೀಮ್ ಬಂದು ಕರೆದರೆ ಖಂಡಿತ ಕಳಿಸ್ತೀವಿ ಅಂತ ಹೇಳಿದರು.

ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 10 ಸ್ಪರ್ಧಿ ವರ್ತೂರು ಸಂತೋಷ್ ಗೆ (Varthur Santosh) ನ್ಯಾಯ ಸಮತ್ತು ಷರತ್ತುಬದ್ಧ ಜಾಮೀನು (conditional bail) ಎರಡೂ ಸಿಕ್ಕಿವೆ. ಸಹಜವಾಗೇ ಅವರ ಕುಟುಂಬ ಅಪರಿಮಿತ ಸಂತೋಷದಲ್ಲಿದೆ. ನ್ಯಾಯಾಲಯದ ತೀರ್ಪಿನ ಬಳಿಕ ಟಿವಿ9 ಕನ್ನಡ ವಾಹಿನಿಯ ಬೆಂಗಳೂರು ವರದಿಗಾರನೊಂದಿಗೆ ಮಾತಾಡಿದ ಸಂತೋಷ್ ಅವರ ದೊಡ್ಡಪ್ಪ ರಮೇಶ್ (Ramesh) ಹರ್ಷ ವ್ಯಕ್ತಪಡಿಸುತ್ತಾ ನಾಡಿನ ಕಾನೂನು ವ್ಯವಸ್ಥೆಗೆ ಕೃತಜ್ಞತೆ ಸಲ್ಲಿಸಿದರು. ಕಳೆದ 4 ದಿನಗಳಿಂದ ಸಂತೋಷ್ ತಾಯಿ ಅತೀವ ವೇದನೆಯಲ್ಲಿದ್ದರು, ಇವತ್ತು ನೆಮ್ಮದಿಯಿಂದ ಉಸಿರಾಡುತ್ತಿದ್ದಾರೆ ಎಂದು ರಮೇಶ್ ಹೇಳಿದರು. ರೈತಾಪಿ ಹುಡುಗ, ಸಮಾಜದಲ್ಲಿ ಗುರುತಿಸಿಕೊಳ್ಳುತ್ತಿರುವಾಗಲೇ ಹೀಗಾಯಿತಲ್ಲ ಮನೆಯಲ್ಲಿ ಎಲ್ಲರೂ ದುಃಖದಲ್ಲಿದ್ದರು, ಆದರೆ ಅವನು ಈಗ ಬಿಡುಗಡೆಯಾಗುತ್ತಿರೋದು ಸಂತೋಷವನ್ನುಂಟು ಮಾಡಿದೆ ಎಂದು ಅವರು ಹೇಳಿದರು. ಪುನಃ ಸಂತೋಷ್ ಬಿಗ್ ಬಾಸ್ ಗೆ ಹೋಗ್ತಾರಾ? ಅಂತ ಕೇಳಿದ ಪ್ರಶ್ನೆಗೆ ರಮೇಶ್, ಬಿಗ್ ಬಾಸ್ ಟೀಮ್ ಬಂದು ಕರೆದರೆ ಖಂಡಿತ ಕಳಿಸ್ತೀವಿ ಅಂತ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Oct 27, 2023 05:20 PM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.