ಶಿವಕುಮಾರ ಅವರಿಗೆ ಸರಳ ಕನ್ನಡ ಕೂಡ ಅರ್ಥವಾಗದಿರುವುದು ವಿಷಾದನೀಯ: ಹೆಚ್ ಡಿ ಕುಮಾರಸ್ವಾಮಿ

ಅರುಣ್​ ಕುಮಾರ್​ ಬೆಳ್ಳಿ

Updated on: Jan 28, 2023 | 2:23 PM

ಕಾಂಗ್ರೆಸ್ ನಾಯಕರಿಗೆ ತಮ್ಮನ್ನು ಟೀಕಿಸದೆ ಹೋದರೆ ತಿಂದಿದ್ದು ಜೀರ್ಣವಾಗಲಾರದು ಅನಿಸುತ್ತದೆ ಎಂದು ಕುಮಾರಸ್ವಾಮಿ ಕುಹುಕವಾಡಿದರು.

ರಾಯಚೂರು: ಜೆಡಿಎಸ್ ಮುಖಂಡ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ರಾಯಚೂರಿನಲ್ಲಿಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ (DK Shivakumar) ಅವರ ಟೀಕೆಗಳಿಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತಾಡಿದ ಅವರು, ತಾವು ಆಧಿಕಾರಕ್ಕೆ ಬಂದು, ಸ್ವಚ್ಛ ಆಡಳಿತ ನೀಡಿ ರಾಜ್ಯದಲ್ಲಿ ವಾಸವಾಗಿರುವ ಪ್ರತಿ ಕುಟುಂಬದ ಬದುಕನ್ನು ಹಸನಾಗಿಸಿದಿದ್ದರೆ ಪಕ್ಷವನ್ನು ವಿಸರ್ಜಿಸುತ್ತೇನೆ ಅಂತ ಹೇಳಿದ್ದೇನೆ ಎಂದರು. ಶಿವಕುಮಾರ್ ಅವರಿಗೆ ಸರಳ ಕನ್ನಡವೂ (Kannada) ಅರ್ಥವಾಗದಿರುವುದಕ್ಕೆ ವ್ಯಥೆಯಾಗುತ್ತಿದೆ ಎಂದು ಹೇಳಿದ ಅವರು ಕಾಂಗ್ರೆಸ್ ನಾಯಕರಿಗೆ ತಮ್ಮನ್ನು ಟೀಕಿಸದೆ ಹೋದರೆ ತಿಂದಿದ್ದು ಜೀರ್ಣವಾಗಲಾರದು ಅನಿಸುತ್ತದೆ ಎಂದು ಕುಹುಕವಾಡಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Jan 28, 2023 02:22 PM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.