AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದು ಕೇವಲ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ, ಯಾರಿಗೂ ಅನ್ಯಾಯವಾಗಲು ಬಿಡಲ್ಲ: ಸಿದ್ದರಾಮಯ್ಯ

ಇದು ಕೇವಲ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ, ಯಾರಿಗೂ ಅನ್ಯಾಯವಾಗಲು ಬಿಡಲ್ಲ: ಸಿದ್ದರಾಮಯ್ಯ

ಅರುಣ್​ ಕುಮಾರ್​ ಬೆಳ್ಳಿ
|

Updated on: Apr 16, 2025 | 1:49 PM

ದಾಣಗೆರೆಯಲ್ಲಿ ಮಹಿಳೆಯೊಬ್ಬರನ್ನು ನಡುರಸ್ತೆಯಲ್ಲಿ ನಿಲ್ಲಿಸಿ ಹಲವಾರು ಜನ ಕೋಲು ಬಡಿಗೆಗಳಿಂದ ಥಳಿಸಿರುವುದನ್ನು ಸಿಎಂ ಸಿದ್ದರಾಮಯ್ಯ ಗಮನಕ್ಕೆ ತಂದಾಗ, ಮಹಿಳೆ ಮೇಲೆ ಹಲ್ಲೆ ನಡೆಸಿದವರು ಯಾರೇ ಅಗಿರಲಿ ಅವರನ್ನು ಸರ್ಕಾರ ಬಿಡಲ್ಲ, ಅವರು ಎಷ್ಟೇ ಬಲಾಢ್ಯರಾಗಿದ್ದರೂ ಯಾವುದೇ ಪಕ್ಷದ ಬೆಂಬಲ ಹೊಂದಿದ್ದರೂ ಮಟ್ಟ ಹಾಕದೆ ಬಿಡೋದಿಲ್ಲ ಎಂದು ಹೇಳಿದರು.

ಕಲಬುರಗಿ, ಏಪ್ರಿಲ್ 16: ಜಾತಿ ಗಣತಿ ವರದಿ ಮತ್ತು ಅದರ ಬಗ್ಗೆ ಸಿದ್ದರಾಮಯ್ಯ ಸರ್ಕಾರ (Siddaramaiah government) ತಳೆದಿರುವ ಧೋರಣೆ ಬಗ್ಗೆ ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕ್ರಪ್ಪನವರು ತೀವ್ರ ಅಸಮಾಧಾನ ಹೊರ ಹಾಕಿದ್ದಾರೆ ಮತ್ತು ಪ್ರತಿಭಟನೆ ನಡೆಸುವ ಎಚ್ಚರಿಕೆಯನ್ನೂ ಸರ್ಕಾರಕ್ಕೆ ನೀಡಿದ್ದಾರೆ. ಕಲಬುರಗಿಯಲ್ಲಿ ಮಾತಾಡಿದ ಸಿಎಂ ಸಿದ್ದರಾಮಯ್ಯ, ಪ್ರತಿಭಟನೆ ಮಾಡುವರು ಮಾಡಲಿ, 5 ಜನ ಒಕ್ಕಲಿಗ ಮಂತ್ರಿಗಳು ದೂರು ದುಮ್ಮಾನಗಳನ್ನು ಹೇಳಿಕೊಂಡಿರುವಂತೆ ಲಿಂಗಾಯತರ ಸಚಿವರೂ ಹೇಳಲಿ, ಅಸಲಿಗೆ ಇದು ಸಾಮಾಜಿಕ-ಅರ್ಥಿಕ ಸಮೀಕ್ಷೆ, ಇದರಿಂದ ಯಾರಿಗೂ ಅನ್ಯಾಯವಾಗಲ್ಲ ಮತ್ತು ತಮ್ಮ ಸರ್ಕಾರ ಅನ್ಯಾಯವಾಗಲು ಬಿಡಲ್ಲ ಎಂದು ಹೇಳಿದರು.

ಇದನ್ನೂ ಓದಿ:   ಜಾತಿ ಗಣತಿ ವರದಿ ಹಿಂಪಡೆದು, ಪ್ರತಿ ಮನೆಗೆ ಹೋಗಿ ಸಮೀಕ್ಷೆ ಮಾಡಿ ವೈಜ್ಞಾನಿಕ ವರದಿ ರೂಪಿಸಿ: ಅಶೋಕ್ ಆಗ್ರಹ

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ