AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

CM in Bengaluru: ಹಾಲಿನ ದರ ಹೆಚ್ಚಿಸುವ ನಿರ್ಧಾರ ಕೆಎಂಎಫ್ ತೆಗೆದುಕೊಂಡಿದ್ದು: ಸಿದ್ದರಾಮಯ್ಯ, ಮುಖ್ಯಮಂತ್ರಿ

CM in Bengaluru: ಹಾಲಿನ ದರ ಹೆಚ್ಚಿಸುವ ನಿರ್ಧಾರ ಕೆಎಂಎಫ್ ತೆಗೆದುಕೊಂಡಿದ್ದು: ಸಿದ್ದರಾಮಯ್ಯ, ಮುಖ್ಯಮಂತ್ರಿ

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on:Jul 28, 2023 | 11:05 AM

Share

ಹಾಲಿನ ದರ ಹೆಚ್ಚಿಸುವ ನಿರ್ಧಾರ ಕೆಎಂಎಫ್ ತೆಗೆದುಕೊಂಡಿದೆ ತಮ್ಮನ್ನು ಕೇವಲ ಸಭೆಗೆ ಆಹ್ವಾನಿಸಲಾಗಿತ್ತು ಅಂತ ಹೇಳುವ ಮೂಲಕ ಸಿದ್ದರಾಮಯ್ಯ ತಮ್ಮ ಹೊಣೆಗಾರಿಕೆಯಿಂದ ನುಣುಚಿಕೊಳ್ಳುವ ಪ್ರಯತ್ನ ಮಾಡಿದ್ದಾರೆ.

ಬೆಂಗಳೂರು: ನಂದಿನಿ ಹಾಲಿನ (Nandini milk) ದರ ಹೆಚ್ಚಾಗಲಿರುವುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಖಚಿತಪಡಿಸಿದರಾದರೂ ದೋಷವನ್ನು ಹಾಲು ಒಕ್ಕೂಟದ (milk federation) ಮೇಲೆ ಜಾರಿಸಿದರು. ಗುರುವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಸಿದ್ದರಾಮಯ್ಯ ಹಾಲಿನ ದರ ರೂ. 3 ಹೆಚ್ಚಿಸುವ ನಿರ್ಧಾರ ಕೆಎಂಎಫ್ ತೆಗೆದುಕೊಂಡಿದೆ, ತಮ್ಮನ್ನು ಸಭೆಗೆ ಆಹ್ವಾನಿಸಲಾಗಿತ್ತು, ಒಕ್ಕೂಟ ತೆಗೆದುಕೊಂಡಿರುವ ನಿರ್ಣಯವನ್ನು ಸಚಿವ ಸಂಪುಟದ ಗಮನಕ್ಕೆ ತರುವ ಕೆಲಸವನ್ನಷ್ಟೇ ತಾನು ಮಾಡಿದ್ದು ಎಂದು ಸಿದ್ದರಾಮಯ್ಯ ಹೇಳಿದರು. ಕರ್ನಾಟಕದಲ್ಲಿ ಈಗ ಹಾಲಿನ ದರ ರೂ. 39/ ಲೀಟರ್ ಇದೆ. ಹೆಚ್ಚಳದ ಬಳಿಕ ಅದು ರೂ. 42 ಆಗುತ್ತದೆ. ಅಷ್ಟಾಗಿಯೂ ಬೇರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಹಾಲಿನ ದರ ಕಡಿಮೆ ಇದೆ. ಕೆಲ ರಾಜ್ಯಗಳಲ್ಲಿ ರೂ. 54-56/ ಲೀಟರ್ ಇದ್ದರೆ, ತಮಿಳುನಾಡಿನಲ್ಲಿ ರೂ. 44/ಲೀಟರ್ ಇದೆ ಅಂತ ಸಿದ್ದರಾಮಯ್ಯ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Jul 28, 2023 11:04 AM
Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.