ಇದು ಜಾತಿ ಗಣತಿ ಅಲ್ಲ; ಬಡವರ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ: ಶಿವರಾಜ ತಂಗಡಿಗಿ

ಅರುಣ್​ ಕುಮಾರ್​ ಬೆಳ್ಳಿ

Updated on: Apr 17, 2025 | 12:15 PM

ಬಿಜೆಪಿಯ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿ ಸಚಿವ ತಂಗಡಿಗಿ, ಅವರ ಬಗ್ಗೆ ಏನು ಮಾತಾಡೋದು, ಅವರೇ ಮಾತಾಡೋದನ್ನು ಬಿಟ್ಟು ಮೌನಕ್ಕೆ ಶರಣಾಗಿದ್ದಾರೆ, ಬಿಜೆಪಿಯ ಕತೆ ಮನೆಯೊಂದು ಬಾಗಿಲು ಮೂವತ್ತಾರು ಥರ ಆಗಿದೆ ಎಂದು ಹೇಳಿದರು.

ಕೊಪ್ಪಳ, ಏಪ್ರಿಲ್ 17: ಮುಖ್ಯಮಂತ್ರಿಯಾದಿ ಆಗಿ ಕಾಂಗ್ರೆಸ್ ಮಂತ್ರಿಗಳೆಲ್ಲ ಜಾತಿ ಗಣತಿ ವರದಿಯನ್ನು (Caste Census Report) ಬಡವರ ಆರ್ಥಿಕ, ಶೈಕ್ಷಣಿಕ ಮತ್ತು ಸಾಮಾಜಿಕ ಸಮೀಕ್ಷೆ ಎಂದು ಹೇಳುತ್ತಿದ್ದಾರೆ. ಇಂದು ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತಾಡಿದ ಸಚಿವ ಶಿವರಾಜ ತಂಗಡಿಗಿ, ರಾಜ್ಯದಲ್ಲಿ ಈಗ ಚರ್ಚೆಯಾಗುತ್ತಿರುವುದು ಜಾತಿ ಗಣತಿ ವರದಿ ಅಲ್ಲವೇ ಅಲ್ಲ, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಡವರಿಗೆ ಯೋಜನೆಗಳನ್ನು ಹಂಚಲು ಅವರ ಶೈಕ್ಷಣಿಕ, ಆರ್ಥಿಕ ಮತ್ತು ಸಾಮಾಜಿಕ ಸ್ಥಿತಿಗತಿಗಳ ಬಗ್ಗೆ ಮಾಡಿಸಿರುವ ಸಮೀಕ್ಷೆ ಎಂದು ಹೇಳಿದರು. ಮಾಧ್ಯಮದವರು ಇದನ್ನು ಸಮೀಕ್ಷೆಯೆಂದು ಬಿತ್ತರಿಸಬೇಕೆಂದು ಅವರ ವಿನಂತಿಸಿಕೊಂಡರು.

ಇದನ್ನೂ ಓದಿ:  ಬಸನಗೌಡ ಯತ್ನಾಳ್​​ರನ್ನು ಉಚ್ಚಾಟಿಸಿ ಬಿಜೆಪಿ ಲಿಂಗಾಯತ ಸಮುದಾಯಕ್ಕೆ ಕೆಟ್ಟ ಸಂದೇಶ ನೀಡಿದೆ: ಶಿವರಾಜ ತಂಗಡಿಗಿ

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.