ಪಿಎಫ್ಐ ಕಾರ್ಯಕರ್ತರು ನಡೆಸಿರುವ ಸಮಾಜ ಮತ್ತು ದೇಶದ್ರೋಹಿ ಕೆಲಸಗಳನ್ನು ಜನರ ಮುಂದಿಡಿ: ಹೆಚ್ ಡಿ ಕುಮಾರಸ್ವಾಮಿ

Updated on: Sep 28, 2022 | 12:44 PM

ಈಗಾಗಲೇ ಬಂಧನಕ್ಕೊಳಗಾಗಿರುವ ಪಿಎಫ್ಐ ಕಾರ್ಯಕರ್ತರು ನಡೆಸಿರುವ ಸಮಾಜ ವಿರೋಧಿ ಚಟುವಟಿಕೆಗಳನ್ನು ಜನರ ಮುಂದಿಡಬೇಕೆಂದು ಕುಮಾರಸ್ವಾಮಿ ಸರ್ಕಾರವನ್ನು ಆಗ್ರಹಿಸಿದರು.

ರಾಮನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತಾಡಿದ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಅವರು ಕೇಂದ್ರ ಸರ್ಕಾರ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯ (PFI) ಸಂಘಟನೆ ಮೇಲೆ 5 ವರ್ಷಗಳ ಕಾಲ ನಿಷೇಧ (ban) ಹೇರಿರುವುದನ್ನು ಸ್ವಾಗತಿಸಿದರು. ಸಮಾಜ ದ್ರೋಹಿ, ರಾಷ್ಟ್ರದ್ರೋಹಿ ಚಟುವಟಿಕೆಗಳಲ್ಲಿ ಯಾವುದೇ ಸಂಘಟನೆ ಪಾಲ್ಗೊಂಡಿದ್ದರೂ ಅದನ್ನು ಬ್ಯಾನ್ ಮಾಡಬೇಕೆಂದು ಹೇಳಿದ ಕುಮಾರಸ್ವಾಮಿ, ಈಗಾಗಲೇ ಬಂಧನಕ್ಕೊಳಗಾಗಿರುವ ಪಿಎಫ್ಐ ಕಾರ್ಯಕರ್ತರು ನಡೆಸಿರುವ ಸಮಾಜ ವಿರೋಧಿ ಚಟುವಟಿಕೆಗಳನ್ನು ಜನರ ಮುಂದಿಟ್ಟರೆ ಅವರ ಪರ ಸಹಾನುಭೂತಿ ಇಟ್ಟುಕೊಂಡು ಪ್ರತಿಭಟನೆ ನಡೆಸಲು ಶುರುಮಾಡಿರುವ ಜನರಿಗೆ ವಾಸ್ತವತೆ ಮನದಟ್ಟಾಗುತ್ತದೆ ಎಂದರು.

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More