ಕುಮಾರಸ್ವಾಮಿ ಚನ್ನಪಟ್ಟಣ ಕ್ಷೇತ್ರವನ್ನು ತ್ಯಾಗ ಮಾಡಬೇಕು: ಬಸನಗೌಡ ಪಾಟೀಲ್ ಯತ್ನಾಳ್
ಸಿಪಿ ಯೋಗೇಶ್ವರ್ ಎನ್ಡಿಎ ಚನ್ನಪಟ್ಟಣ ಕ್ಷೇತ್ರದಲ್ಲಿ ಅಭ್ಯರ್ಥಿಯಾಗಬೇಕೆಂದು ಬಿಜೆಪಿ ಹಿರಿಯ ನಾಯಕ ಅರ್ ಅಶೋಕ ಹೇಳಿದ್ದಾರೆ ಎಂದು ಬಸನಗೌಡ ಯತ್ನಾಳ್ ಹೇಳಿದರು. ಅದು ಸರಿ, ಆದರೆ ತಮ್ಮ ಮಗ ನಿಖಿಲ್ ಕುಮಾರಸ್ವಾಮಿಯನ್ನು ರೀ ಲಾಂಚ್ ಮಾಡಲು ಉತ್ಸುಕರಾಗಿರುವ ಹೆಚ್ ಡಿ ಕುಮಾರಸ್ವಾಮಿಗೆ ಈ ಮಾತುಗಳು ರುಚಿಸಿಯಾವೇ?
ಹುಬ್ಬಳ್ಳಿ: ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ವಿಜಯಪುರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ ದೊಡ್ಡ ಹೃದಯ ಪ್ರದರ್ಶಿಸಿ ಚನ್ನಪಟ್ಟಣ ಕ್ಷೇತ್ರವನ್ನು ಬಿಜೆಪಿಗೆ ಬಿಟ್ಟುಕೊಡಬೇಕು, ಆವರು ಬಿಜೆಪಿ ಜೊತೆ ಕೈ ಜೋಡಿಸಿರುವುದರಿಂದ ದಕ್ಷಿಣ ಕರ್ನಾಟಕ ಭಾಗದಲ್ಲಿ ತಮ್ಮ ಪಕ್ಷಕ್ಕೆ ಅನುಕೂಲವಾಗಿರುವಂತೆಯೇ ಪುನಶ್ಚೇತನಗೊಳ್ಳಲು ಜೆಡಿಎಸ್ ಪಕ್ಷಕ್ಕೂ ನೆರವಾಗಿದೆ ಎಂದು ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ರಾಹುಲ್ ಗಾಂಧಿ, ಸಿದ್ದರಾಮಯ್ಯ ವಿರುದ್ಧ ಅವಾಚ್ಯ ಶಬ್ಧ ಬಳಕೆ: ಯತ್ನಾಳ್ ವಿರುದ್ಧ ದೂರು
Latest Videos

