Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಬ್ಬ ಮಾಜಿ ಸಿಎಂ ಆಗಿ ಕುಮಾರಸ್ವಾಮಿ ಬಳಸಿದ್ದು ಸಂಸ್ಕಾರವಂತರ ಭಾಷೆ ಅಲ್ಲ: ಎನ್ ಚಲುವರಾಯಸ್ವಾಮಿ

ಒಬ್ಬ ಮಾಜಿ ಸಿಎಂ ಆಗಿ ಕುಮಾರಸ್ವಾಮಿ ಬಳಸಿದ್ದು ಸಂಸ್ಕಾರವಂತರ ಭಾಷೆ ಅಲ್ಲ: ಎನ್ ಚಲುವರಾಯಸ್ವಾಮಿ

ಅರುಣ್​ ಕುಮಾರ್​ ಬೆಳ್ಳಿ
|

Updated on: Apr 15, 2024 | 3:58 PM

ಹೆಚ್ ಡಿ ಕುಮಾರಸ್ವಾಮಿ ಹೆಣ್ಣುಮಕ್ಕಳ ಬಗ್ಗೆ ಹಗುರವಾಗಿ ಮಾತಾಡಿರುವುದನ್ನು ಪ್ರಸ್ತಾಪಿಸಿದ ಚಲುವರಾಯಸ್ವಾಮಿ, ಅವರು ಬಳಸಿರುವ ಭಾಷೆ ಸಂಸ್ಕಾರವಂತರು ಬಳಸುವ ಭಾಷೆ ಅಲ್ಲ, ಹಿಂದೆ ಒಬ್ಬ ರೈತಮಹಿಳೆಯ ಬಗ್ಗೆಯೂ ಅವರು ಅವಹೇಳನಕಾರಿಯಾಗಿ ಮಾತಾಡಿದ್ದರು, ಒಬ್ಬ ಮಾಜಿ ಮುಖ್ಯಮಂತ್ರಿಯಾಗಿ ಹೀಗೆ ಸಂಸ್ಕಾರಹೀನರಾಗಿ ಮಾತಾಡುವುದು ಎಷ್ಟರಮಟ್ಟಿಗೆ ಸರಿ ಅನ್ನೋದನ್ನು ಅವರೇ ಯೋಚನೆ ಮಾಡಬೇಕು ಎಂದು ಹೇಳಿದರು.

ಮಂಡ್ಯ: ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (Venkatramanegowda) (ಸ್ಟಾರ್ ಚಂದ್ರು) ಪರ ಎಡೆಬಿಡದೆ ಪ್ರಚಾರ ಮಾಡುತ್ತಿರುವ ಕೃಷಿ ಸಚಿವ ಎನ್ ಚಲುವರಾಯಸ್ವಾಮಿ (N Cheluvarayaswamy), ಚಂದ್ರು ನಾಗಮಂಗಲದವರಾಗಿರುವುದರಿಂದ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ ಎಂದು ಹೇಳಿದರು. ಕ್ಷೇತ್ರದ ಎಲ್ಲ ಭಾಗಗಳಲ್ಲಿ ಈಗಾಗಲೇ ಎರಡೆರಡು ಸಲ ಪ್ರಚಾರ ಮಾಡಲಾಗಿದೆ ಮತ್ತು 17 ರಂದು ರಾಹುಲ್ ಗಾಂಧಿ (Rahul Gandhi) ಆಗಮಿಸಲಿದ್ದಾರೆ ಎಂದು ಹೇಳಿದ ಸಚಿವ, ಅದಾದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರಚಾರಕ್ಕೆ ಅಗಮಿಸಲಿದ್ದಾರೆ ಎಂದರು. ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ ಹೆಣ್ಣುಮಕ್ಕಳ ಬಗ್ಗೆ ಹಗುರವಾಗಿ ಮಾತಾಡಿರುವುದನ್ನು ಪ್ರಸ್ತಾಪಿಸಿದ ಚಲುವರಾಯಸ್ವಾಮಿ, ಅವರು ಬಳಸಿರುವ ಭಾಷೆ ಸಂಸ್ಕಾರವಂತರು ಬಳಸುವ ಭಾಷೆ ಅಲ್ಲ, ಹಿಂದೆ ಒಬ್ಬ ರೈತಮಹಿಳೆಯ ಬಗ್ಗೆಯೂ ಅವರು ಅವಹೇಳನಕಾರಿಯಾಗಿ ಮಾತಾಡಿದ್ದರು, ಒಬ್ಬ ಮಾಜಿ ಮುಖ್ಯಮಂತ್ರಿಯಾಗಿ ಹೀಗೆ ಸಂಸ್ಕಾರಹೀನರಾಗಿ ಮಾತಾಡುವುದು ಎಷ್ಟರಮಟ್ಟಿಗೆ ಸರಿ ಅನ್ನೋದನ್ನು ಅವರೇ ಯೋಚನೆ ಮಾಡಬೇಕು ಎಂದು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಒಂದೇ ಕುಟುಂಬಕ್ಕೆ ಎಷ್ಟು ಸಲ ಅವಕಾಶ ಕೊಡುತ್ತೀರಿ? ಶ್ರೇಯಸ್ ಪಟೇಲ್ ಕೂಡ ರಾಜಕೀಯ ಹಿನ್ನೆಲೆಯ ಕುಟುಂಬದವರು: ಎನ್ ಚಲುವರಾಯಸ್ವಾಮಿ