ಮುಸ್ಲಿಂ ಯುವತಿಯನ್ನು ಲಗ್ನವಾದರೆ ಹಣ ಕೊಡ್ತೀನಿ ಅನ್ನೋದು ಯತ್ನಾಳ್​ರ ಕೀಳು ಮನಸ್ಥಿತಿ: ಶಿವರಾಜ್ ತಂಗಡಿಗಿ

ಅರುಣ್​ ಕುಮಾರ್​ ಬೆಳ್ಳಿ

Updated on: Aug 26, 2025 | 4:23 PM

ಯತ್ನಾಳ್ ಮಾತಾಡಿದ್ದು ಒಳ್ಳೆಯ ಬೆಳವಣಿಗೆ ಅಲ್ಲ, ಎಲ್ಲರ ಮನೆಗಳಲ್ಲೂ ಹೆಣ್ಣುಮಕ್ಕಳಿರುತ್ತಾರೆ, ಯಾರನ್ನೂ ಕೇವಲವಾಗಿ ಕಾಣೋದು ಸರಿಯಲ್ಲ, ಧರ್ಮ ಮತ್ತು ಜಾತಿ ವ್ಯವಸ್ಥೆ ಮೊದಲಿಂದ ನಡೆದುಕೊಂಡು ಬಂದಿದೆ, ಯಾವುದೇ ಧರ್ಮ ಅಥವಾ ಜಾತಿ ಮತ್ತೊಂದಕ್ಕಿಂತ ದೊಡ್ಡದಲ್ಲ, ಚಿಕ್ಕದಲ್ಲ; ನಮ್ಮ ವ್ಯವಸ್ಥೆಯಲ್ಲಿ ಎಲ್ಲ ಜಾತಿಗಳು ಸಮ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಿಗಿ ಹೇಳಿದರು.

ಕೊಪ್ಪಳ, ಆಗಸ್ಟ್ 26: ಮುಸ್ಲಿಂ ಸಮಾಜದ ಯುವತಿಯನ್ನು ಮದುವೆಯಾದರೆ ರೂ. 5 ಲಕ್ಷ ಕೊಡುತ್ತೇನೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಹೇಳಿರುವುದನ್ನು ಸಚಿವ ಶಿವರಾಜ್ ತಂಗಡಿಗಿ ತೀವ್ರವಾಗಿ ಖಂಡಿಸಿದರು. ಮಾಧ್ಯಮಗಳೊಂದಿಗೆ ಮಾತಾಡಿದ ಅವರು, ಯತ್ನಾಳ್ ಗೆ ಮಹಿಳೆಯರ ಬಗ್ಗೆ ಗೌರವ ಇಲ್ಲ ಅನ್ನೋದು ಇದರಿಂದ ಸ್ಪಷ್ಟವಾಗುತ್ತದೆ, ಅದ್ಯಾವ ನೈತಿಕತೆಯಿಂದ ಅವರು ಹೀಗೆಲ್ಲ ಮಾತಾಡುತ್ತಾರೆ? ದುಡ್ಡು ಇವರ ಬಳಿ ಮಾತ್ರ ಇದೆ ಅಂದುಕೊಂಡಿದ್ದಾರಾ? ಬೇರೆ ಜಾತಿ ಮತ್ತು ಧರ್ಮದ ಹೆಣ್ಣುಮಕ್ಕಳ ವಿಷಯದಲ್ಲಿ ಕೀಳಾಗಿ ಮಾತಾಡುವುದನ್ನು ದೇಶ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆ ಒಪ್ಪಲ್ಲ ಎಂದು ಹೇಳಿದರು.

ಇದನ್ನೂ ಓದಿ:   Karnataka Assembly session; ಎಲ್ಲ ಮುಖ್ಯಮಂತ್ರಿಗಳು ಅನುದಾನ ಹಂಚಿಕೆಯಲ್ಲಿ ತಾರತಮ್ಯ ಮಾಡಿದ್ದಾರೆ: ಯತ್ನಾಳ್

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

Published on: Aug 26, 2025 01:52 PM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.