ಮಾತಾಡುವಾಗ ಕುಮಾರಸ್ವಾಮಿ ನಾಲಗೆ ಮೇಲೆ ಹಿಡಿತ ಹೊಂದಿರಬೇಕು: ಕೆಎಂ ಶಿವಲಿಂಗೇಗೌಡ

ಅರುಣ್​ ಕುಮಾರ್​ ಬೆಳ್ಳಿ

Updated on: May 09, 2024 | 3:07 PM

ಪೆನ್ ಡ್ರೈವ್ ಗಳ ವಿಷಯ 4-5 ತಿಂಗಳುಗಳಿಂದ ಹರಿದಾಡುತಿತ್ತು, ಅದರೆ ಅವುಗಳನ್ನು ಸಾರ್ವಜನಿಕಗೊಳಿಸದಂತೆ ನ್ಯಾಯಲಯದಿಂದ ತಡೆಯಾಜ್ಞೆ ತಂದಿದ್ದ ಕಾರಣ ಅವು ಬೆಳಕಿಗೆ ಬಂದಿರಲಿಲ್ಲ ಎಂದು ಹೇಳಿದರು. ಮಾಜಿ ಸಂಸದ ಎಲ್ ಆರ್ ಶಿವರಾಮೇಗೌಡ ಮತ್ತು ವಕೀಲ ದೇವರಾಜೇಗೌಡ ಅವರು ದಿನಕ್ಕೊಂದು ಪತ್ರಿಕಾ ಗೋಷ್ಟಿ ನಡೆಸುತ್ತಿರುವ ಔಚಿತ್ಯವನ್ನು ಶಿವಲಿಂಗೇಗೌಡ ಪ್ರಶ್ನಿಸಿದರು.

ಹಾಸನ: ನಗರದ ಪ್ರೆಸ್ ಕ್ಲಬ್ ನಲ್ಲಿ ಮಾಧ್ಯಮ ಗೋಷ್ಟಿ ನಡೆಸಿ ಮಾತಾಡಿದ ಅರಸೀಕೆರೆ ಕಾಂಗ್ರೆಸ್ ಶಾಸಕ ಕೆಎಂ ಶಿವಲಿಂಗೇಗೌಡ (KM Shivalingegowda) ಅವರು ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ (Prajwal Revanna sleazed videos) ಮತ್ತು ಹೆಚ್ ಡಿ ರೇವಣ್ಣ ಬಂಧನ ಪ್ರಕರಣಗಳಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಯರು (HD Kumaraswamy) ಮನಬಂದಂತೆ ನಾಲಗೆ ಹರಿಬಿಡುತ್ತಿದ್ದಾರೆ, ಸರ್ಕಾರದಲ್ಲಿ ಉನ್ನತ ಸ್ಥಾನಗಳಲ್ಲಿರುವ ಜನನ ಬಗ್ಗೆ ಕೇವಲವಾಗಿ ಮತ್ತು ಅವಹೇಳನಕಾರಯಾಗಿ ಮಾತಾಡುವುದು ಸರಿಯಲ್ಲ ಎಂದರು. ಜೆಡಿಎಸ್ ಮತ್ತು ಬಿಜೆಪಿ ನಾಯಕರು ಪೆನ್ ಡ್ರೈವ್ ಗಳು ಸಾರ್ವಜನಿಕಗೊಂಡಿದ್ದಕ್ಕೆ ಸರ್ಕಾರವನ್ನು ದೂರುತ್ತಿದ್ದಾರೆ, ಇದಕ್ಕೆ ಸರ್ಕಾರ ಹೇಗೆ ಕಾರಣವಾಗುತ್ತದೆ ಎಂದು ಪ್ರಶ್ನಿಸಿದ ಶಿವಲಿಂಗೇಗೌಡರು, ಪೆನ್ ಡ್ರೈವ್ ಗಳ ವಿಷಯ 4-5 ತಿಂಗಳುಗಳಿಂದ ಹರಿದಾಡುತಿತ್ತು, ಅದರೆ ಅವುಗಳನ್ನು ಸಾರ್ವಜನಿಕಗೊಳಿಸದಂತೆ ನ್ಯಾಯಲಯದಿಂದ ತಡೆಯಾಜ್ಞೆ ತಂದಿದ್ದ ಕಾರಣ ಅವು ಬೆಳಕಿಗೆ ಬಂದಿರಲಿಲ್ಲ ಎಂದು ಹೇಳಿದರು. ಮಾಜಿ ಸಂಸದ ಎಲ್ ಆರ್ ಶಿವರಾಮೇಗೌಡ ಮತ್ತು ವಕೀಲ ದೇವರಾಜೇಗೌಡ ಅವರು ದಿನಕ್ಕೊಂದು ಪತ್ರಿಕಾ ಗೋಷ್ಟಿ ನಡೆಸುತ್ತಿರುವ ಔಚಿತ್ಯವನ್ನು ಶಿವಲಿಂಗೇಗೌಡ ಪ್ರಶ್ನಿಸಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ನಾನು ಸಿದ್ದರಾಮಯ್ಯ ಸರ್ಕಾರದಲ್ಲಿ ಮಂತ್ರಿಯಾಗಬೇಕಾದರೆ ಶ್ರೇಯಸ್ ಪಟೇಲ್​ರನ್ನು ಗೆಲ್ಲಿಸಬೇಕು: ಕೆಎಂ ಶಿವಲಿಂಗೇಗೌಡ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.