ಕುಮಾರಸ್ವಾಮಿ ಸಂಪುಟದಲ್ಲಿ ಗೃಹ ಸಚಿವನಾಗಿದ್ದಾಗ ಅವರು ನೀಡುತ್ತಿದ್ದ ಸಲಹೆ-ಸೂಚನೆಗಳನ್ನು ಬಹಿರಂಗಗೊಳಿಸುವುದು ಸರಿಯಲ್ಲ: ಜಿ ಪರಮೇಶ್ವರ್

ಸರ್ಕಾರ ತಮ್ಮದು ಮತ್ತು ತಮಗೆ ಸರಿಯೆನಿಸಿದ ರೀತಿಯಲ್ಲಿ ವರ್ಗಾವಣೆಗಳನ್ನು ಮಾಡಲಾಗುತ್ತದೆ. ಯಾವ ಇನ್ಸ್ ಪೆಕ್ಟರ್ ಅನ್ನು ಯಾವ ಜಾಗಕ್ಕೆ ಟ್ರಾನ್ಸ್ ಫರ್ ಮಾಡಿದರೆ ಸೂಕ್ತ ಅಂತ ಇಲಾಖೆಗೆ ಗೊತ್ತಿರುತ್ತದೆ ಎಂದು ಪರಮೇಶ್ವರ್ ಹೇಳಿದರು.

ಕುಮಾರಸ್ವಾಮಿ ಸಂಪುಟದಲ್ಲಿ ಗೃಹ ಸಚಿವನಾಗಿದ್ದಾಗ ಅವರು ನೀಡುತ್ತಿದ್ದ ಸಲಹೆ-ಸೂಚನೆಗಳನ್ನು ಬಹಿರಂಗಗೊಳಿಸುವುದು ಸರಿಯಲ್ಲ: ಜಿ ಪರಮೇಶ್ವರ್
|

Updated on: Aug 04, 2023 | 1:50 PM

ಬೆಂಗಳೂರು: ಗೃಹ ಸಚಿವ ಜಿ ಪರಮೇಶ್ವರ್ (G Parameshwara) ಹೇಳಿಕೆಗಳನ್ನು ನೀಡುವಾಗ ಸಾಮಾನ್ಯವಾಗಿ ವಿರೋಧ ಪಕ್ಷದ ನಾಯಕರನ್ನು ಟೀಕಿಸುವುದಿಲ್ಲ. ಆ ನಾಯಕರು ಮಾಡಿದ ಕಾಮೆಂಟ್ ಅಥವಾ ಸರಿ ಯೆನ್ನಿಸದಿದ್ದರೆ ಮಾತ್ರ ಜವಾಬು ನೀಡುತ್ತಾರೆ. ವಿದೇಶದಿಂದ ವಾಪಸ್ಸು ಬಂದಿರುವ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಸರ್ಕಾರದ ವಿರುದ್ಧ ಶುರುಮಾಡಿದ್ದು ಪೊಲೀಸ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆ (police inspector transfers) ವಿಷಯವನ್ನೂ ಗುರಿಯಾಗಿಸಿಕೊಂಡಿದ್ದಾರೆ. ಹಾಗಾಗೇ, ಪರಮೇಶ್ವರ್, ಕುಮಾರಸ್ವಾಮಿಯವರ ಅರೋಪಕ್ಕೆ ಪಾಯಿಂಟೆಡ್ ಉತ್ತರಗಳನ್ನು ನೀಡಿದ್ದಾರೆ. ಇಂದು ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು, ಬೇರೆಯವರು ಮಾಡುವ ಟೀಕೆಗಳ ಬಗ್ಗೆ ಯೋಚಿಸುವ ಅಗತ್ಯವಿಲ್ಲ, ಸರ್ಕಾರ ತಮ್ಮದು ಮತ್ತು ತಮಗೆ ಸರಿಯೆನಿಸಿದ ರೀತಿಯಲ್ಲಿ ವರ್ಗಾವಣೆಗಳನ್ನು ಮಾಡಲಾಗುತ್ತದೆ. ಯಾವ ಇನ್ಸ್ ಪೆಕ್ಟರ್ ಅನ್ನು ಯಾವ ಜಾಗಕ್ಕೆ ಟ್ರಾನ್ಸ್ ಫರ್ ಮಾಡಿದರೆ ಸೂಕ್ತ ಅಂತ ಇಲಾಖೆಗೆ ಗೊತ್ತಿರುತ್ತದೆ, ಕಾನೂನು ಸುವ್ಯವಸ್ಥೆ ಕಾಯ್ದುಕೊಳ್ಳುವಲ್ಲಿ ಲೋಪವಾಗಬಾರದು ಎಂಬ ದೃಷ್ಟಿಕೋನದಿಂದ ವರ್ಗಾವಣೆಗಳನ್ನು ಮಾಡಲಾಗುತ್ತದೆ ಎಂದು ಅವರು ಹೇಳಿದರು. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗಲೂ ತಾನು ಗೃಹ ಸಚಿವನಾಗಿದ್ದೆ, ಆಗ ಅವರು ನೀಡುತ್ತಿದ್ದ ಸಲಹೆ ಸೂಚನೆಗಳನ್ನು ತಾನೆಲ್ಲೂ ಹೇಳಿಕೊಂಡಿಲ್ಲ, ಅದು ಸರಿ ಕೂಡ ಅಲ್ಲ ಎಂದು ಪರಮೇಶ್ವರ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow us
ಗದಗ: ಲಂಚದ ಆರೋಪ, ಅಧಿಕಾರಿಗೆ ಸಚಿವ ಎಚ್​ಕೆ ಪಾಟೀಲ್​ ಹಿಗ್ಗಾಮುಗ್ಗಾ ತರಾಟೆ
ಗದಗ: ಲಂಚದ ಆರೋಪ, ಅಧಿಕಾರಿಗೆ ಸಚಿವ ಎಚ್​ಕೆ ಪಾಟೀಲ್​ ಹಿಗ್ಗಾಮುಗ್ಗಾ ತರಾಟೆ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
CM Siddaramaiah Press Meet Live: ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ
CM Siddaramaiah Press Meet Live: ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ
ಬೆಂಗಳೂರಿನ ಅನೇಕ ಕೆರೆಗಳಲ್ಲಿ ಕರಗದೇ ತೇಲುತ್ತಿವೆ ಗಣೇಶ ಮೂರ್ತಿಗಳು
ಬೆಂಗಳೂರಿನ ಅನೇಕ ಕೆರೆಗಳಲ್ಲಿ ಕರಗದೇ ತೇಲುತ್ತಿವೆ ಗಣೇಶ ಮೂರ್ತಿಗಳು