ಸಿದ್ದರಾಮಯ್ಯ ಮೇಲಿನ ರಾಜಕೀಯ ವೈರತ್ವವನ್ನು ಅವರ ಮಗನ ಮೇಲೆ ತೀರಿಸಿಕೊಳ್ಳುವುದು ಸರಿಯಲ್ಲ: ಭೈರತಿ ಸುರೇಶ್, ಸಚಿವ,

ಸಿದ್ದರಾಮಯ್ಯ ಮೇಲಿನ ರಾಜಕೀಯ ವೈರತ್ವವನ್ನು ಅವರ ಮಗನ ಮೇಲೆ ತೀರಿಸಿಕೊಳ್ಳುವುದು ಸರಿಯಲ್ಲ: ಭೈರತಿ ಸುರೇಶ್, ಸಚಿವ,
|

Updated on:Jul 01, 2024 | 9:22 PM

ಸಚಿವ ಸುರೇಶ್ ಮಾತಾಡುವಾಗ ಮುಡಾ ಅಧ್ಯಕ್ಷ ಕೆ ಮರಿಗೌಡ ಪ್ರತಿಯೊಂದು ಮಾತಿಗೂ ಮೂಗು ತೂರಿಸುತ್ತಾ ಅವರ ತಾಳ್ಮೆಯನ್ನು ಪರೀಕ್ಷಿಸುತ್ತಿದ್ದರು. ಅವರ ಕಾಟ ವಿಪರೀತವಾದಾಗ ಎಲ್ಲರ ಮುಂದೆಯೇ ಅಸಮಾಧಾನ ವ್ಯಕ್ತಪಡಿಸುವ ಸುರೇಶ್ ಸ್ವಲ್ಲ ಸಮ್ಮನಿರ್ತೀರಾ ಗೌಡ್ರೆ? ನಾನು ಮಾತಾಡ್ತೀದ್ದೀನಲ್ಲ? ನಂಗೆ ಮಾತಾಡಲು ಬಿಡಿ ಅನ್ನುತ್ತಾರೆ. ಇಂಗು ತಿಂದ ಮಂಗನಂತಾಗುವ ಮರಿಗೌಡ ಅದನ್ನು ಮುಚ್ಚಿಕೊಳ್ಳಲು ದೇಶಾವರಿ ನಗೆ ಬೀರುತ್ತಾರೆ.

ಮೈಸೂರು: ಮೈಸೂರು ನಗರಾಭಿವೃಧ್ಧಿ ಪ್ರಾಧಿಕಾರದಲ್ಲಿ (ಮುಡಾ) ಅಕ್ರಮಗಳು ನಡೆದಿವೆಯೆಂಬ ಆರೋಪಗಳಿಗೆ ಸಂಬಂಧಿಸಿದಂತೆ ನಗರದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತಾಡಿದ ನಗರಾಭಿವೃದ್ಧಿ ಖಾತೆ ಸಚಿವ ಬೈರತಿ ಸುರೇಶ್, ಇಲಾಖೆ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ವಿವರಿಸಿದರು. ಮುಡಾ ಆಯುಕ್ತ ದಿನೇಶ್ ಕುಮಾರ್, ಕಾರ್ಯದರ್ಶಿ ಮತ್ತು ಅಸಿಸ್ಟಂಟ್ ಎಕ್ಸಿಕ್ಯೂಟಿವ್ ಇಂಜಿನೀಯರ್ ಅವರ ವರ್ಗಾವಣೆ ಮಾಡಲಾಗಿದೆ, ಅಕ್ರಮಗಳ ತನಿಖೆ ನಡೆಸಲು ಸಮಿತಿಯೊಂದನ್ನು ರಚಿಸಲಾಗಿದೆ ಎಂದು ಸಚಿವ ಹೇಳಿದರು. ಅಸಲಿಗೆ ಬಿಜೆಪಿ ಎಮ್ಮೆಲ್ಸಿ ಹೆಚ್ ವಿಶ್ವನಾಥ್ ಹಲವಾರು ಆರೋಪಗಳನ್ನು ಮಾಡಿದ್ದಾರೆ. ಆದರೆ ಅವರ ಹೆಸರು ಉಲ್ಲೇಖಿಸದೆ ಸೈಟ್ ಗಾಗಿ ಅರ್ಜಿ ಸಲ್ಲಿಸಿರುವುದನ್ನು ಸುರೇಶ್ ಬಹಿರಂಗ ಪಡಿಸಿದರು. ಮುಡಾ ವ್ಯವಹಾರಗಳಲ್ಲಿ ಕಾಂಗ್ರೆಸ್ ಎಮ್ಮೆಲ್ಸಿ ಡಾ ಯತೀಂದ್ರ ಸಿದ್ದರಾಮಯ್ಯನವರ ಯಾವುದೇ ಪಾತ್ರವಿಲ್ಲ ಎಂದು ಹೇಳಿದ ಸುರೇಶ್ ಮುಖ್ಯಮಂತ್ರಿ ಸಿದ್ದರಾಮಯ್ಯ ಮೇಲಿನ ರಾಜಕೀಯ ದ್ವೇಷವನ್ನು ಅವರ ಮಗನಿಗೆ ಕಳಂಕ ತರುವ ರೀತಿಯಲ್ಲಿ ತೀರಿಸಿಕೊಳ್ಳಬಾರದು. ಎಂದು ಸುರೇಶ್ ಹೇಳಿದರು. ವಿಶ್ವನಾಥ್ ಅವರಿಗೆ ಎಲ್ಲರನ್ನೂ ನಿಂದಿಸುವ ಚಟವಿದೆ, ದೇವೇಗೌಡ ಮತ್ತು ಕುಮಾರಸ್ವಾಮಿಯವರನ್ನೂ ಅವರು ಬಿಟ್ಟಿಲ್ಲ, ಆದರೆ ತಾನು ಅವರ ಮಟ್ಟಕ್ಕೆ ಇಳಿಯಲಾರೆ ಎಂದು ಸಚಿವ ಹೇಳಿದರು.

 

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಗ್ಯಾರಂಟಿ ಯೋಜನೆ ನಿಲ್ಲುತ್ತವೆ ಅಂತ ಹೇಳಲು ಕುಮಾರಸ್ವಾಮಿಯೇನು ಮುಖ್ಯಮಂತ್ರಿಯೇ? ಭೈರತಿ ಸುರೇಶ್-ಸಚಿವ

Published On - 9:21 pm, Mon, 1 July 24

Follow us
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ