AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಗದೀಶ್ ಶೆಟ್ಟರ್ ಮತ್ತು ನನ್ನ ನಡುವೆ ವ್ಯತ್ಯಾಸವಿದೆ, ನಾನು ಬಿಜೆಪಿಯಲ್ಲೇ ಇದ್ದೇನೆ: ಎಸ್ ಟಿ ಸೋಮಶೇಖರ್

ಜಗದೀಶ್ ಶೆಟ್ಟರ್ ಮತ್ತು ನನ್ನ ನಡುವೆ ವ್ಯತ್ಯಾಸವಿದೆ, ನಾನು ಬಿಜೆಪಿಯಲ್ಲೇ ಇದ್ದೇನೆ: ಎಸ್ ಟಿ ಸೋಮಶೇಖರ್

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Jan 27, 2024 | 3:54 PM

Share

ವಿಧಾನಸಭಾ ಚುನಾವಣೆಯಲ್ಲಿ ಆಗಿದ್ದೇನು? ಯಶವಂತಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಒಂದಾಗಿದ್ದವು, ಆದರೆ ಅದು ಮತದಾರರ ಮೇಲೆ ಯಾವುದೇ ಪರಿಣಾಮ ಬೀರಲಿಲ್ಲ ಎಂದು ಹೇಳಿದ ಸೋಮಶೇಖರ್ ಲೋಕಸಭಾ ಚುನಾವಣೆ ಇನ್ನೂ ಸಮಯವಿದೆ, ಮೊದಲು ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ, ಜನ ಅದರ ಬಗ್ಗೆ ಯೋಚನೆ ಮಾಡುತ್ತಿದ್ದಾರೆ ಎಂದರು.

ಬೆಂಗಳೂರು: ನಗರದ ಅರಮನೆ ಮೈದಾನದಲ್ಲಿ ಬಿಜೆಪಿ ಕಾರ್ಯಕಾರಿಣಿ ಸಮಿತಿ ಸಭೆ (BJP Executive Committee Meet) ನಡೆಯುತ್ತಿದ್ದರೆ ಪಕ್ಷದ ಯಶವಂತಪುರ ಶಾಸಕ ಎಸ್ ಟಿ ಸೋಮಶೇಖರ್ (ST Somashekhar) ನಗರದ ಬೇರೆ ಯಾವುದೋ ಭಾಗದಲ್ಲಿದ್ದರು. ಏನ್ಸಾರ್ ನೀವಿಲ್ಲಿ, ಉಳಿದವರೆಲ್ಲ ಅಲ್ಲಿ ಅಂತ ಮಾಧ್ಯಮ ಪ್ರತಿನಿಧಿಗಳು ಕೇಳಿದ್ದಕ್ಕೆ, ಕಾರ್ಯಕಾರಿಣಿ ಸಮಿತಿ ಸಭೆಗೆ ತನಗೆ ಆಹ್ವಾನ ಇಲ್ಲ ಎಂದು ಹೇಳಿದರು. ಮಾಧ್ಯಮದವರು ಜಗದೀಶ್ ಶೆಟ್ಟರ್ (Jagadish Shettar) ಅವರ ಬಗ್ಗೆ ಪ್ರಶ್ನೆ ಕೇಳಿದಾಗ ಶಾಸಕ ಸೋಮಶೇಖರ್, ತನ್ನ ಮತ್ತು ಅವರ ನಡುವೆ ವ್ಯತ್ಯಾಸವಿದೆ, ಶೆಟ್ಟರ್ ತನಗೆ ಅನ್ಯಾಯವಾಗಿದೆ ಅಂತ ಕಾಂಗ್ರೆಸ್ ಗೆ ಹೋಗಿದ್ದರು, ಪಕ್ಷಅವರನ್ನು ಗೌರವಿಸಿ ಎಮ್ ಎಲ್ ಸಿ ಮಾಡಲಾಗಿತ್ತು, ಅದರೆ ಈಗ ಪುನಃ ಬಿಜೆಪಿಗೆ ವಾಪಸ್ಸು ಬಂದಿದ್ದಾರೆ, ಆದರೆ ತಾನಿನ್ನೂ ಬಿಜೆಪಿಯಲ್ಲಿರುವುದಾಗಿ ಹೇಳಿದರು.

ಬಿಜೆಪಿ ಮತ್ತು ಜೆಡಿಎಸ್ ಒಂದಾಗಿರುವುದರಿಂದ ಕಾರ್ಯಕರ್ತರ ನಡುವೆ ಗೊಂದಲವಿದೆ ಅಂತ ಹೇಳಿದಾಗ ಯಾರು ಯಾರೊಂದಿಗೆ ಮಾಡಿಕೊಂಡರೂ ಚುನಾವಣೆಯಲ್ಲಿ ಮತದಾರನ ತೀರ್ಮಾನವೇ ಲೆಕ್ಕಕ್ಕೆ ಬರೋದು, ವಿಧಾನಸಭಾ ಚುನಾವಣೆಯಲ್ಲಿ ಆಗಿದ್ದೇನು? ಯಶವಂತಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಒಂದಾಗಿದ್ದವು, ಆದರೆ ಅದು ಮತದಾರರ ಮೇಲೆ ಯಾವುದೇ ಪರಿಣಾಮ ಬೀರಲಿಲ್ಲ ಎಂದು ಹೇಳಿದ ಸೋಮಶೇಖರ್ ಲೋಕಸಭಾ ಚುನಾವಣೆ ಇನ್ನೂ ಸಮಯವಿದೆ, ಮೊದಲು ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ, ಜನ ಅದರ ಬಗ್ಗೆ ಯೋಚನೆ ಮಾಡುತ್ತಿದ್ದಾರೆ ಎಂದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.