ಬಿಜೆಪಿಗೆ ವಾಪಸ್ಸು ಹೋಗೋದಿಲ್ಲ ಅಂತ ಖುದ್ದು ಜಗದೀಶ್ ಶೆಟ್ಟರ್ ಹೇಳಿದ್ದಾರೆ: ಸಿದ್ದರಾಮಯ್ಯ

ಅರುಣ್​ ಕುಮಾರ್​ ಬೆಳ್ಳಿ

Updated on: Jan 25, 2024 | 1:16 PM

ಬಿಜೆಪಿ ನಾಯಕರೆಲ್ಲ ಶೆಟ್ಟರ್ ಮತ್ತು ಸವದಿ ವಾಪಸ್ಸು ಬರುತ್ತಾರೆ ಅನ್ನುತ್ತಿದ್ದಾರೆ ಅಂತ ಪುನಃ ಅವರನ್ನು ಕೇಳಿದಾಗ, ಯಾರಯ್ಯ ನಿಮಗೆ ಅದನ್ನು ಹೇಳಿದ್ದು? ಯಡಿಯೂರಪ್ಪ ಹೇಳಿದ್ದಾರಾ? ವಿಜಯೇಂದ್ರ ಹೇಳಿದ್ರಾ ಅಂತ ಕೇಳಿದ ಸಿದ್ದರಾಮಯ್ಯ, ಬಿಜೆಪಿ ನಾಯಕರು ಬಹಳ ಜನ ಇದ್ದಾರೆ, ನಿರ್ದಿಷ್ಟವಾಗಿ ಯಾರು ಅಂತ ಹೇಳಿ ಎಂದು ಸಿದ್ದರಾಮಯ್ಯ ಹೇಳಿದರು.

ಮೈಸೂರು: ರಾಜ್ಯದೆಲ್ಲೆಡೆ ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಜಗದೀಶ್ ಶೆಟ್ಟರ್ (jagadish Shettar) ಮತ್ತು ಅಥಣಿಯ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿಯವರನ್ನು (Laxman Savadi) ಬಿಜೆಪಿ ವಾಪಸ್ಸು ಕರೆದೊಯ್ಯುವ ಬಗ್ಗೆ ಚರ್ಚೆ ನಡೆದಿದೆ. ಮೈಸೂರಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah), ತನಗೆ ಬಿಜೆಪಿಯಲ್ಲಿ ಅವಮಾನವಾಗಿದೆ, ಅಲ್ಲಿಗೆ ವಾಪಸ್ಸು ಹೋಗವ ಪ್ರಶ್ನೆಯೇ ಉದ್ಭವಿಸಲ್ಲ ಎಂದು ಖುದ್ದು ಜಗದೀಶ್ ಶೆಟ್ಟರ್ ಹೇಳಿರುವಾಗ ಯಾಕೆ ಪದೇಪದೆ ಆ ಪ್ರಶ್ನೆ ಕೇಳುತ್ತಿದ್ದೀರಿ ಅಂತ ಹೇಳಿದರು. ಬಿಜೆಪಿ ನಾಯಕರೆಲ್ಲ ಶೆಟ್ಟರ್ ಮತ್ತು ಸವದಿ ವಾಪಸ್ಸು ಬರುತ್ತಾರೆ ಅನ್ನುತ್ತಿದ್ದಾರೆ ಅಂತ ಪುನಃ ಅವರನ್ನು ಕೇಳಿದಾಗ, ಯಾರಯ್ಯ ನಿಮಗೆ ಅದನ್ನು ಹೇಳಿದ್ದು? ಯಡಿಯೂರಪ್ಪ ಹೇಳಿದ್ದಾರಾ? ವಿಜಯೇಂದ್ರ ಹೇಳಿದ್ರಾ ಅಂತ ಕೇಳಿದ ಸಿದ್ದರಾಮಯ್ಯ, ಬಿಜೆಪಿ ನಾಯಕರು ಬಹಳ ಜನ ಇದ್ದಾರೆ, ನಿರ್ದಿಷ್ಟವಾಗಿ ಯಾರು ಅಂತ ಹೇಳಿ ಎಂದು ಸಿದ್ದರಾಮಯ್ಯ ಹೇಳಿದರು. ವಿಧಾನಸಭಾ ಚುನಾವಣೆಯಲ್ಲಿ ತನಗೆ ಟಿಕೆಟ್ ನೀಡದೆ ದೊಡ್ಡ ಅವಮಾನ ಮಾಡಿದ್ದಾರೆ, ಹಾಗಾಗಿ ಬಿಜೆಪಿ ವಾಪಸ್ಸು ಹೋಗೋದಿಲ್ಲ ಅಂತ ಶೆಟ್ಟರ್ ಹೇಳಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.