ಹುಬ್ಬಳ್ಳಿ: ಚುನಾವಣೆ ತೀರ ಹತ್ತಿರದಲ್ಲಿದ್ದಾಗ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷ ಸೇರಿ ಹುಬ್ಬಳ್ಳಿ-ಧಾರವಾಡ ಕೇಂದ್ರ ಕ್ಷೇತ್ರದಿಂದ ಸ್ಪರ್ಧಿಸಿದ್ದ ಜಗದೀಶ್ ಶೆಟ್ಟರ್ (Jagadish Shettar) ಸೋತಿದ್ದಾರೆ. ಆದರೆ ಶೆಟ್ಟರ್ ಸೋಲನ್ನು ಸ್ಪೋರ್ಟ್ ಆಗಿ ಸ್ವೀಕರಿಸಿದ್ದಾರೆ. ನಿಮಗೆ ನೆನಪುರಬಹುದು, ಬಿಎಸ್ ಯಡಿಯೂರಪ್ಪ (BS Yediyurappa) ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರು ಶೆಟ್ಟರ್ ರನ್ನು ಸೋಲಿಸಲೇಬೇಕು ಎಂದು ಪಣತೊಟ್ಟು. ತಮ್ಮ ಗುರಿ ಸಾಧಿಸಿದ್ದಾರೆ. ಫಲಿತಾಂಶ ಪ್ರಕಟವಾದ ಬಳಿಕ ಭೇಟಿಯಾಗಲು ಬಂದ ಬೆಂಬಲಿಗರನ್ನು ಶೆಟ್ಟರ್ ವಿಶ್ವಾಸದಿಂದ ಮಾತಾಡಿಸಿದರು. ಕೆಲ ಅಭಿಮಾನಿಗಳು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರೂ ಶೆಟ್ಟರ್ ಅವರನ್ನು ಸಮಾಧಾನಪಡಿಸಿ ಕಳಿಸಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಮತ್ತಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ