ಬಿಜೆಪಿಯನ್ನು ಲೀಡರ್​ಲೆಸ್ ಪಾರ್ಟಿ ಅನ್ನುವ ಜಗದೀಶ್ ಶೆಟ್ಟರ್ ತಮ್ಮ ಪೂರ್ವಾಶ್ರಮ ಮರೆಯಬಾರದು: ಗೋವಿಂದ ಕಾರಜೋಳ, ಬಿಜೆಪಿ ನಾಯಕ

ಅರುಣ್​ ಕುಮಾರ್​ ಬೆಳ್ಳಿ

Updated on: Aug 02, 2023 | 11:46 AM

ಪಕ್ಷದ ರಾಷ್ಟ್ರೀಯ ನಾಯಕರು ಮುಂದಿನ ಕೆಲ ದಿನಗಳಲ್ಲಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಮತ್ತು ಪ್ರತಿಪಕ್ಷದ ನಾಯಕನನ್ನು ಆಯ್ಕೆ ಮಾಡಲಿದ್ದಾರೆ ಎಂದು ಗೋವಿಂದ ಕಾರಜೋಳ ಹೇಳಿದರು.

ಬೆಂಗಳೂರು: ದೆಹಲಿಗೆ ಕೇವಲ ಕಾಂಗ್ರೆಸ್ ನಾಯಕರಷ್ಟೇ ಅಲ್ಲ, ಬಿಜೆಪಿ ನಾಯಕರೂ ಹೋಗುತ್ತಿದ್ದಾರೆ. ನಿನ್ನೆ ಮಾಜಿ ಶಾಸಕ ಸಿಟಿ ರವಿ (CT Ravi) ದೆಹಲಿಗೆ ಹಾರಿದ ಸಂಗತಿಯನ್ನು ವರದಿ ಮಾಡಲಾಗಿದೆ. ಇಂದು ಮಾಜಿ ಸಚಿವ ಮತ್ತು ಹಿರಿಯ ಬಿಜೆಪಿ ನಾಯಕ ಗೋವಿಂದ ಕಾರಜೋಳ (Govind Karjol) ಸಹ ದೆಹಲಿಗೆ ತೆರಳಿದರು. ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತಾಡಿದ ಕಾರಜೋಳ ಸಿಟಿ ರವಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾಗಿದ್ದ (national general secretary) ಕಾರಣ ಆಗಾಗ ದೆಹಲಿಗೆ ಹೋಗುತ್ತಿದ್ದರು ಮತ್ತು ಈಗ ಅಧಿಕಾರ ವಾಪಸ್ಸು ನೀಡಲು ಹೋಗಿದ್ದಾರೆ. ಪಕ್ಷದ ವರಿಷ್ಠ ನಾಯಕರು ಮುಂದಿನ ಕೆಲ ದಿನಗಳಲ್ಲಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಮತ್ತು ಪ್ರತಿಪಕ್ಷದ ನಾಯಕನನ್ನು ಆಯ್ಕೆ ಮಾಡಲಿದ್ದಾರೆ ಎಂದರು. ಜಗದೀಶ್ ಶೆಟ್ಟರ್, ಬಿಜೆಪಿಯನ್ನು ಲೀಡರ್ ಲೆಸ್ ಪಾರ್ಟಿ ಅಂತ ಕರೆದಿರುವುದಕ್ಕೆ ಉತ್ತರಿಸಿದ ಕಾರಜೋಳ, ತಾನು ಶೆಟ್ಟರ್ ಜೊತೆ ಕೆಲಸ ಮಾಡಿದ್ದು ಅವರ ಬಗ್ಗೆ ಕಾಮೆಂಟ್ ಮಾಡೋದಿಲ್ಲ, ಆದರೆ ಅವರು ತಮ್ಮ ಪೂರ್ವಾಶ್ರಮ ಮರೆಯಬಾರದು ಎಂದಷ್ಟೇ ಹೇಳುತ್ತೇನೆ ಅಂದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.