ನನ್ನ ತಂಟೆಗೆ ಬಂದ್ರೆ ಸುಮ್ಮನೆ ಬಿಡಲ್ಲ!ವಿರೋಧಿಗಳಿಗೆ ಜಗದೀಶ್ ಶೆಟ್ಟರ್ ವಾರ್ನ್

‘ನನ್ನ ತಂಟೆಗೆ ಬಂದರೆ ಸುಮ್ಮನೆ ಬಿಡಲ್ಲವೆಂದು ವಿರೋಧಿಗಳಿಗೆ ಮಾಜಿ ಸಿಎಂ ಜಗದೀಶ್​ ಶೆಟ್ಟರ್(Jagadish Shettar) ಎಚ್ಚರಿಕೆ ಕೊಟ್ಟಿದ್ದಾರೆ. 68ನೇ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ‘ಕಳೆದ ವರ್ಷವೂ ಇದೇ ಮಾತು ಹೇಳಿದ್ದೆ, ತಂಟೆಗೆ ಬಂದವರಿಗೆ ಉತ್ತರಿಸಿದ್ದೇನೆ ಎಂದರು.

ನನ್ನ ತಂಟೆಗೆ ಬಂದ್ರೆ ಸುಮ್ಮನೆ ಬಿಡಲ್ಲ!ವಿರೋಧಿಗಳಿಗೆ ಜಗದೀಶ್ ಶೆಟ್ಟರ್ ವಾರ್ನ್
| Updated By: ಕಿರಣ್ ಹನುಮಂತ್​ ಮಾದಾರ್

Updated on: Dec 17, 2023 | 9:58 PM

ಹುಬ್ಬಳ್ಳಿ, ಡಿ.17: ‘ನನ್ನ ತಂಟೆಗೆ ಬಂದರೆ ಸುಮ್ಮನೆ ಬಿಡಲ್ಲವೆಂದು ವಿರೋಧಿಗಳಿಗೆ ಮಾಜಿ ಸಿಎಂ ಜಗದೀಶ್​ ಶೆಟ್ಟರ್(Jagadish Shettar) ಎಚ್ಚರಿಕೆ ಕೊಟ್ಟಿದ್ದಾರೆ. 68ನೇ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ‘ಕಳೆದ ವರ್ಷವೂ ಇದೇ ಮಾತು ಹೇಳಿದ್ದೆ, ತಂಟೆಗೆ ಬಂದವರಿಗೆ ಉತ್ತರಿಸಿದ್ದೇನೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಾನು ಸೋತಿರಬಹುದು. ಆದರೆ, 6 ಬಾರಿ ನನ್ನನ್ನು ಜನ ಗೆಲ್ಲಿಸಿರುವುದನ್ನು ಮರೆಯುವುದಿಲ್ಲ. ನಾನು ಸೋತರೂ ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚು ಸ್ಥಾನ ಗೆಲ್ಲಿಸಿದ್ದೇವೆ. ನನ್ನ ಉಸಾಬರಿಗೆ ಬಂದವರಿಗೆ ತಕ್ಕ ಉತ್ತರ ಕೊಟ್ಟಿದ್ದೇನೆ. ಇನ್ಮುಂದೆಯೂ ನನ್ನ ಉಸಾಬರಿಗೆ ಬಂದವರನ್ನು ಸುಮ್ಮನೆ ಬಿಡಲ್ಲ ಎಂದು ಹುಬ್ಬಳ್ಳಿಯ ಸವಾಯಿಗಂಧರ್ವ ಹಾಲ್​ನಲ್ಲಿ ಜಗದೀಶ್ ಶೆಟ್ಟರ್ ಎಚ್ಚರಿಕೆ ಕೊಟ್ಟಿದ್ದಾರೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Follow us