ಜಗದೀಶ್ ಶೆಟ್ಟರ್ ಬೆಳಗಾವಿ ಲೋಕಸಭಾ ಟಿಕೆಟ್ ಸಿಗಲಿದೆ, ವರಿಷ್ಠರು ಮಾತಾಡಿದ್ದಾರೆ: ಆರ್ ಅಶೋಕ, ಬಿಜೆಪಿ ನಾಯಕ

| Updated By: ಅರುಣ್​ ಕುಮಾರ್​ ಬೆಳ್ಳಿ

Updated on: Mar 15, 2024 | 6:23 PM

ಸಿದ್ದರಾಮಯ್ಯ ನೇತೃತ್ವದ ಸರ್ಕಾರ ರಾಜಕಾರಣ ಮಾಡಲಿ, ಅದರೆ ದ್ವೇಷದ ರಾಜಕಾರಣ ಬೇಡ, ಯದುವೀರ್ ಕೃಷ್ಣದತ್ ಒಡೆಯರ್ ಅವರಿಗೆ ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದ ಟಿಕೆಟ್ ಸಿಕ್ಕಿರುವ ಕಾರಣ ಕಾಂಗ್ರೆಸ್ ಸರ್ಕಾರ ಇದನ್ನೆಲ್ಲ ಮಾಡುತ್ತಿದೆ, ಅಧಿಕಾರ ಶಾಶ್ವತ ಅಲ್ಲ ಅನ್ನೋದನ್ನು ಸರ್ಕಾರ ಮನಗಾಣಬೇಕು, ಅವರು ಸಹ ಮೊದಲು ವಿರೋಧ ಪಕ್ಷದಲ್ಲಿದ್ದವರು ಎಂದು ಅಶೋಕ ಹೇಳಿದರು.

ದಾವಣಗೆರೆ: ಬೆಂಗಳೂರು ಅರಮನೆ ಮೈದಾನದ (Bangalore palace grounds) ಒಡೆತನ ವಿಷಯಕ್ಕೆ ಸಂಬಂಧಿಸಿದ ಪ್ರಕರಣವೊಂದರಲ್ಲಿ ಸರ್ವೋಚ್ಛ ನ್ಯಾಯಾಲಯವು ಯಥಾಸ್ಥಿತಿಯನ್ನು ಕಾಯ್ದುಕೊಳ್ಳುವಂತೆ ಆದೇಶಿಸಿದ್ದರೂ ಕರ್ನಾಟಕ ಸರ್ಕಾರ ಪ್ರಕರಣಕ್ಕೆ ಪುನಃ ಕೈ ಹಾಕುವ ಮೂಲಕ ದ್ವೇಷದ ರಾಜಕಾರಣಕ್ಕೆ ಮುಂದಾಗಿದೆ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ (R Ashoka) ಹೇಳಿದರು. ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು ಸಿದ್ದರಾಮಯ್ಯ (Siddaramaiah) ನೇತೃತ್ವದ ಸರ್ಕಾರ ರಾಜಕಾರಣ ಮಾಡಲಿ, ಅದರೆ ದ್ವೇಷದ ರಾಜಕಾರಣ ಬೇಡ, ಯದುವೀರ್ ಕೃಷ್ಣದತ್ ಒಡೆಯರ್ ಅವರಿಗೆ ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದ ಟಿಕೆಟ್ ಸಿಕ್ಕಿರುವ ಕಾರಣ ಕಾಂಗ್ರೆಸ್ ಸರ್ಕಾರ ಇದನ್ನೆಲ್ಲ ಮಾಡುತ್ತಿದೆ, ಅಧಿಕಾರ ಶಾಶ್ವತ ಅಲ್ಲ ಅನ್ನೋದನ್ನು ಸರ್ಕಾರ ಮನಗಾಣಬೇಕು, ಅವರು ಸಹ ಮೊದಲು ವಿರೋಧ ಪಕ್ಷದಲ್ಲಿದ್ದವರು ಎಂದು ಅಶೋಕ ಹೇಳಿದರು.

ಜಗದೀಶ್ ಶೆಟ್ಟರ್ ಅವರಿಗೆ ಬೆಳಗಾವಿ ಲೋಕಸಭಾ ಕ್ಷೇತ್ರದ ಟಿಕೆಟ್ ಸಿಗಲಿದೆಯಾ ಅಂತ ಕೇಳಿದ್ದಕ್ಕೆ ಅಶೋಕ, ಅವರೊಂದಿಗೆ ಪಕ್ಷದ ವರಿಷ್ಠರು ಮಾತಾಡಿದ್ದು, ಸ್ಪರ್ಧೆ ಮಾಡಲಿದ್ದಾರೆ ಎಂದು ಖಚಿತ ಸ್ವರದಲ್ಲಿ ಹೇಳಿದ ಅಶೋಕ, ಪತ್ರಕರ್ತರು ಅದೇ ಪ್ರಶ್ನೆಯನ್ನು ಮತ್ತೊಮ್ಮೆ ಕೇಳಿದಾಗ ಕೊಂಚ ತಡಬಡಾಯಿಸಿ ಮೋಸ್ಟ್ಲೀ ಅವರು ಸ್ಪರ್ಧೆ ಮಾಡಲಿದ್ದಾರೆ ಅಂತ ಹೇಳುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಧಾರವಾಡವೂ ಇಲ್ಲ, ಹಾವೇರಿಗೂ‌ ಸಲ್ಲ: ಜಗದೀಶ್ ಶೆಟ್ಟರ್ ಮುಂದಿನ ನಡೆ ಏನು?

Follow us on