ಜಗದೀಶ್​ಗೆ ಸೀರೆ ಕೊಡೋಕೆ ಮುಂದಾದ ಮನೆ ಮಂದಿ; ಹೆಂಗಸಾಗೋಕೂ ಯೋಗ್ಯತೆ ಇಲ್ಲ ಎಂದ ಹಂಸಾ

Updated on: Oct 17, 2024 | 7:50 AM

‘ಬಿಗ್ ಬಾಸ್ ಕನ್ನಡ ಸೀಸನ್ 11’ರಿಂದ ಲಾಯರ್ ಜಗದೀಶ್ ಅವರು ಎಲಿಮಿನೇಟ್ ಆಗಿದ್ದಾರೆ ಎಂದು ವರದಿ ಆಗಿದೆ. ಅವರು ಹಾಗೂ ರಂಜಿತ್ ಮಧ್ಯೆ ಫೈಟ್ ನಡೆದು ಇಬ್ಬರೂ ಹೊರ ಹೋದರು ಎಂದು ಹೇಳಲಾಗುತ್ತಿದೆ. ಅದನ್ನೂ ಇನ್ನೂ ತೋರಿಸಿಲ್ಲ. ಹೀಗಿರುವಾಗಲೇ ಒಂದು ಹೊಸ ಪ್ರೋಮೋನ ಕಲರ್ಸ್ ಕನ್ನಡ ರಿಲೀಸ್ ಮಾಡಿದೆ.

ಮಹಿಳಾ ಸ್ಪರ್ಧಿಗಳ ಬಗ್ಗೆ ಜಗದೀಶ್ ಅವರು ಅತಿಯಾದ ಕೆಟ್ಟ ಪದಗಳ ಬಳಕೆ ಮಾಡಿದ್ದಾರೆ. ಇದು ಮನೆಯವರ ನೆಮ್ಮದಿ ಕೆಡಿಸುತ್ತಿದೆ. ‘ಸೀರೆ ಕೊಡ್ತೀನಿ ಉಟ್ಕೋ’ ಎಂದು ಮಾನಸಾ ಅವರು ಜಗದೀಶ್​ಗೆ ಹೇಳಿದ್ದಾರೆ. ‘ಅವರು ಹೆಂಗಸಾಗೋಕೂ ಯೋಗ್ಯತೆ ಇಲ್ಲ’ ಎಂದಿದ್ದಾರೆ ಹಂಸಾ. ‘ಇದಕ್ಕೆ ನೀವು ಒಂದು ಪರಿಹಾರ ಬೇಕೇ ಬೇಕು. ನೀವು ಕೊಡ್ತೀರಾ ಅಥವಾ ನಾವೇ ಏನಾದರೂ ಮಾಡಬೇಕಾ’ ಎಂದು ಹಂಸಾ ಪ್ರಶ್ನೆ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More