ಬಿಗ್​ಬಾಸ್ ವೇದಿಕೆ ಮೇಲೆ ಲಾಯರ್ ಜಗದೀಶ್, ಮನೆಗೆ ಮತ್ತೆ ಎಂಟ್ರಿ?

ಬಿಗ್​ಬಾಸ್ ವೇದಿಕೆ ಮೇಲೆ ಲಾಯರ್ ಜಗದೀಶ್, ಮನೆಗೆ ಮತ್ತೆ ಎಂಟ್ರಿ?
|

Updated on: Oct 20, 2024 | 8:09 AM

ಲಾಯರ್ ಜಗದೀಶ್ ಅವರ ವರ್ತನೆಯಿಂದ ಬೇಸತ್ತು ಬಿಗ್​ಬಾಸ್​ನಿಂದ ಎಲಿಮಿನೇಟ್ ಮಾಡಲಾಗಿದೆ. ಆದರೆ ಶನಿವಾರ ಸುದೀಪ್ ಅವರು ಜಗದೀಶ್ ಪರವಾಗಿ ಮಾತನಾಡಿದ್ದರು. ಇದೀಗ ಬಿಗ್​ಬಾಸ್​ ಹೊಸ ಪ್ರೋಮೋ ಪ್ರಕಾರ, ಬಿಗ್​ಬಾಸ್ ವೇದಿಕೆ ಮೇಲೆ ಜಗದೀಶ್​ ಅವರ ವಿಡಿಯೋ ಪ್ರಸಾರ ಮಾಡಲಾಗಿದ್ದು, ಜಗದೀಶ್ ಬಿಗ್​ಬಾಸ್​ ಕ್ಷಮೆ ಕೇಳಿರುವುದಲ್ಲದೆ, ತಮ್ಮನ್ನು ಮತ್ತೆ ಬಿಗ್​ಬಾಸ್​ಗೆ ಕರೆಸಿಕೊಳ್ಳಲು ಸಾಧ್ಯವಾ ಎಂದು ಮನವಿ ಮಾಡಿದ್ದಾರೆ.

ಬಿಗ್​ಬಾಸ್ ಕನ್ನಡ ಸೀಸನ್ 11ರಿಂದ ಲಾಯರ್ ಜಗದೀಶ್ ಅನ್ನು ಹೊರ ಹಾಕಲಾಗಿದೆ. ಜಗದೀಶ್, ಮನೆಯೊಳಗೆ ಬಳಸಿದ ಭಾಷೆ, ನಡೆದುಕೊಂಡ ರೀತಿ, ತೋರಿದ ನಡವಳಿಕೆಗಳಿಂದಾಗಿ ಜಗದೀಶ್ ಅನ್ನು ಹೊರಗೆ ಹಾಕಲಾಗಿದೆ. ಜಗದೀಶ್ ಮೇಲೆ ಕೈ ಮಾಡಿದ್ದಕ್ಕೆ ರಂಜಿತ್ ಸಹ ಹೊರಗೆ ಹೋಗಿದ್ದಾರೆ. ಆದರೆ ಕಲರ್ಸ್ ವಾಹಿನಿ ಹಂಚಿಕೊಂಡಿರುವ ಹೊಸ ಪ್ರೋಮೋದಲ್ಲಿ ಬಿಗ್​ಬಾಸ್ ವೇದಿಕೆ ಮೇಲೆ ಜಗದೀಶ್ ಕಾಣಿಸಿಕೊಂಡಿದ್ದಾರೆ. ಹೌದು, ಜಗದೀಶ್ ಮಾತನಾಡಿರುವ ವಿಡಿಯೋವನ್ನು ಸುದೀಪ್ ಪ್ರಸಾರ ಮಾಡಿದ್ದಾರೆ. ವಿಡಿಯೋನಲ್ಲಿ ತಮ್ಮ ವರ್ತನೆ ಬಗ್ಗೆ ಕ್ಷಮೆ ಕೇಳಿರುವ ಜಗದೀಶ್, ಮನೆಯ ಸದಸ್ಯರ ಬಗ್ಗೆ ಸಹ ಮಾತನಾಡಿದ್ದಾರೆ. ಸಾಧ್ಯವಾದರೆ ನನ್ನನ್ನು ವಾಪಸ್ ಕರೆಸಿಕೊಳ್ಳಿ ಎಂದು ಮನವಿ ಸಹ ಮಾಡಿದ್ದಾರೆ. ನಿನ್ನೆ ಸುದೀಪ್, ಜಗದೀಶ್​ ಪರವಾಗಿ ಮಾತನಾಡಿದ್ದರು, ಈಗ ಅವರ ವಿಡಿಯೋ ಪ್ರಸಾರ ಮಾಡಿರುವುದು ನೋಡಿದರೆ ಜಗದೀಶ್ ಅನ್ನು ಮತ್ತೆ ಒಳಗೆ ಕರೆಸಿಕೊಳ್ಳುತ್ತಾರೆಯೇ ನೋಡಬೇಕಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ತೆಲಂಗಾಣದಲ್ಲಿ ಉತ್ಖನನದ ವೇಳೆ ಆಂಜನೇಯನ ಪ್ರತಿಮೆ ಪತ್ತೆ
ತೆಲಂಗಾಣದಲ್ಲಿ ಉತ್ಖನನದ ವೇಳೆ ಆಂಜನೇಯನ ಪ್ರತಿಮೆ ಪತ್ತೆ
ಮನೆ ಸದಸ್ಯರಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ ಸುದೀಪ್, ಎಲ್ಲರೂ ಎಲಿಮಿನೇಟ್?
ಮನೆ ಸದಸ್ಯರಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ ಸುದೀಪ್, ಎಲ್ಲರೂ ಎಲಿಮಿನೇಟ್?
ಈಡಿ ವ್ಯಾಪ್ತಿಯನ್ನು ಸರ್ವೋಚ್ಛ ನ್ಯಾಯಾಲಯದಲ್ಲಿ ಪ್ರಶ್ನಿಸಲಾಗಿದೆ: ಸಚಿವ
ಈಡಿ ವ್ಯಾಪ್ತಿಯನ್ನು ಸರ್ವೋಚ್ಛ ನ್ಯಾಯಾಲಯದಲ್ಲಿ ಪ್ರಶ್ನಿಸಲಾಗಿದೆ: ಸಚಿವ
ಬೆಂಗಳೂರು: ಜಿಟಿ ಜಿಟಿ ಮಳೆಯಲ್ಲಿ ಫೋಟೋಶೂಟ್ ಮಾಡಿಸಿಕೊಂಡ ಮುದ್ದಾದ ಜೋಡಿ
ಬೆಂಗಳೂರು: ಜಿಟಿ ಜಿಟಿ ಮಳೆಯಲ್ಲಿ ಫೋಟೋಶೂಟ್ ಮಾಡಿಸಿಕೊಂಡ ಮುದ್ದಾದ ಜೋಡಿ
Bangalore Rains: ಬೆಂಗಳೂರಿನಲ್ಲಿ ಮತ್ತೆ ಮಳೆ, ಧರೆಗುರುಳಿದ ಮರಗಳು
Bangalore Rains: ಬೆಂಗಳೂರಿನಲ್ಲಿ ಮತ್ತೆ ಮಳೆ, ಧರೆಗುರುಳಿದ ಮರಗಳು
ಲೋಕಸಭಾ ಚುನಾವಣೆಯಲ್ಲಿ ಸೋಲ್ತೀನಿ ಅಂತ ನನಗೆ ಗೊತ್ತಿತ್ತು: ಕೆಎಸ್ ಈಶ್ವರಪ್ಪ
ಲೋಕಸಭಾ ಚುನಾವಣೆಯಲ್ಲಿ ಸೋಲ್ತೀನಿ ಅಂತ ನನಗೆ ಗೊತ್ತಿತ್ತು: ಕೆಎಸ್ ಈಶ್ವರಪ್ಪ
ವಂಚನೆ ಕೇಸ್​ನಲ್ಲಿ ಪ್ರಲ್ಹಾದ್ ಜೋಶಿ ಪಾತ್ರ ಏನೂ ಇಲ್ಲ: ದೂರುದಾರೆ ಸ್ಪಷ್ಟನೆ
ವಂಚನೆ ಕೇಸ್​ನಲ್ಲಿ ಪ್ರಲ್ಹಾದ್ ಜೋಶಿ ಪಾತ್ರ ಏನೂ ಇಲ್ಲ: ದೂರುದಾರೆ ಸ್ಪಷ್ಟನೆ
ಯಾರೇ ಗಣತಿ ಮಾಡಿಸಿದರೂ ಜಾತಿಗಳಿಗೆ ಸೂಕ್ತ ಪ್ರಾತಿನಿಧ್ಯ ಸಿಗಬೇಕು: ಶಾಸಕ
ಯಾರೇ ಗಣತಿ ಮಾಡಿಸಿದರೂ ಜಾತಿಗಳಿಗೆ ಸೂಕ್ತ ಪ್ರಾತಿನಿಧ್ಯ ಸಿಗಬೇಕು: ಶಾಸಕ
ಪಂತ್ ಪವರ್​ಗೆ ಚಿನ್ನಸ್ವಾಮಿ ಮೇಲ್ಛಾವಣಿಗೆ ಬಿದ್ದ ಚೆಂಡು; ವಿಡಿಯೋ
ಪಂತ್ ಪವರ್​ಗೆ ಚಿನ್ನಸ್ವಾಮಿ ಮೇಲ್ಛಾವಣಿಗೆ ಬಿದ್ದ ಚೆಂಡು; ವಿಡಿಯೋ
ಶಿವಕುಮಾರ್ ಪ್ರಕಾರ ಚನ್ನಪಟ್ಟಣ ಕ್ಷೇತ್ರದಲ್ಲಿ ಜೆಡಿಎಸ್ ಸ್ಪರ್ಧೆ ಇಲ್ಲ!
ಶಿವಕುಮಾರ್ ಪ್ರಕಾರ ಚನ್ನಪಟ್ಟಣ ಕ್ಷೇತ್ರದಲ್ಲಿ ಜೆಡಿಎಸ್ ಸ್ಪರ್ಧೆ ಇಲ್ಲ!