ಗುರುಪ್ರಸಾದ್​ಗೆ ಆ ಕಾಯಿಲೆ ಇತ್ತು, ನಾವು ದೂರ ಇರುತ್ತಿದ್ವಿ: ಜಗ್ಗೇಶ್ ಹೇಳಿಕೆ

Updated on: Nov 03, 2024 | 4:44 PM

‘ಎರಡು ಒಳ್ಳೆಯ ಕೃತಿಗಳನ್ನು ಕೊಟ್ಟು ಹೋಗಿದ್ದಾನೆ. ಅವನ ಆತ್ಮಕ್ಕೆ ಶಾಂತಿ ಸಿಗಲಿ. ಫೋಟೋ ನೋಡಿ ತುಂಬ ಸಂಕಟ ಆಯಿತು. ಏನೋ ಬ್ಲೀಡಿಂಗ್ ಆಗಿದೆ. ನನಗೆ ಅರ್ಥವೇ ಆಗಿಲ್ಲ. ಒಂಥರಾ ವಿಚಿತ್ರವಾಗಿದೆ’ ಎಂದು ಜಗ್ಗೇಶ್ ಅವರು ಹೇಳಿದ್ದಾರೆ. ಗುರುಪ್ರಸಾದ್ ಜೊತೆಗೆ ಇಷ್ಟು ವರ್ಷ ಒಡನಾಟ ಇದ್ದಿದ್ದಕ್ಕೆ ಅವರ ಮಗುವಿಗೆ ಸಹಾಯ ಮಾಡುವುದಾಗಿ ಜಗ್ಗೇಶ್ ತಿಳಿದ್ದಾರೆ.

ನಿರ್ದೇಶಕ ಗುರುಪ್ರಸಾದ್ ಸಾವಿನ ಬಗ್ಗೆ ಜಗ್ಗೇಶ್ ಮಾತನಾಡಿದ್ದಾರೆ. ‘ಅವನಿಗೆ ಮೈಯೆಲ್ಲ ಕಡಿತ ಬರುತ್ತಲ್ಲ, ಆ ಕಾಯಿಲೆ ಇತ್ತು. ಕೆರೆದುಕೊಂಡಾಗ ಮುಖ, ಮೈಯಲ್ಲಿ ಕೀವು, ರಕ್ತ ಬರುತ್ತಿತ್ತು. ನಾವು ತಿನ್ನುವ ತಟ್ಟೆಗೆ ಕೈ ಹಾಕುತ್ತಿದ್ದ. ನಮಗೆ ಒಂದೇ ಭಯ. ಹಾಗಾಗಿ ಅವನಿಗೆ ಕಾಣದ ರೀತಿಯಲ್ಲಿ ದೂರ ಕುಳಿತುಕೊಂಡು ಊಟ ಮಾಡುತ್ತಿದ್ದೆ. ಚಿಕಿತ್ಸೆಗೆ ಹೋಗು ಎಂದರೆ ಹೋಗುತ್ತಿರಲಿಲ್ಲ. ಇಡೀ ಮೈಯೆಲ್ಲ ಆಗಬೇಕು, ಅದನ್ನು ನೋಡಬೇಕು ಅಂತ ಹೇಳುತ್ತಿದ್ದ. ಅಂಥವರಿಗೆ ಏನು ಹೇಳೋದು? ತಪ್ಪು ಮಾಡಿ, ಮಾನಸಿಕವಾಗಿ ಕುಗ್ಗಿದ್ದ’ ಎಂದು ಜಗ್ಗೇಶ್ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More