ರಾಯರಲ್ಲಿ ತಾಯಿ ಹರಕೆ; ರಿಷಬ್ ಶೆಟ್ಟಿ ಜನಿಸಿದ್ದೇ ಗುರುವಾರ: ಅಚ್ಚರಿಯ ವಿಷಯ ತಿಳಿಸಿದ ನಟ

Updated on: Feb 25, 2026 | 5:20 PM

ಮಂತ್ರಾಲಯದಲ್ಲಿ ರಾಯರ ಗುರುವೈಭವೋತ್ಸವ ಕಾರ್ಯಕ್ರಮ ನಡೆದಿದೆ. ರಿಷಬ್ ಶೆಟ್ಟಿ, ಜಗ್ಗೇಶ್ ಮುಂತಾದವರು ಅದರಲ್ಲಿ ಭಾಗಿ ಆಗಿದ್ದಾರೆ. ಈ ವೇದಿಕೆಯಲ್ಲಿ ರಿಷಬ್ ಶೆಟ್ಟಿ ಅವರು ಮಾತನಾಡಿದರು. ರಾಯರಲ್ಲಿ ತಾಯಿ ಹರಕೆ ಕಟ್ಟಿಕೊಂಡಿದ್ದರಿಂದ ತಾವು ಗುರುವಾರವೇ ಜನಿಸಿದ್ದು ಎಂದು ರಿಷಬ್ ಶೆಟ್ಟಿ ಅವರು ಹೇಳಿದರು.

ಮಂತ್ರಾಲಯದಲ್ಲಿ ರಾಯರ ಗುರುವೈಭವೋತ್ಸವ ಕಾರ್ಯಕ್ರಮ ನಡೆದಿದೆ. ಅದರಲ್ಲಿ ಜಗ್ಗೇಶ್ (Jaggesh), ರಿಷಬ್ ಶೆಟ್ಟಿ ಮುಂತಾದವರು ಭಾಗಿ ಆಗಿದ್ದಾರೆ. ಈ ವೇದಿಕೆಯಲ್ಲಿ ರಿಷಬ್ ಶೆಟ್ಟಿ ಅವರು ಮಾತನಾಡಿದರು. ರಾಯರಲ್ಲಿ ತಾಯಿ ಹರಕೆ ಕಟ್ಟಿಕೊಂಡಿದ್ದರಿಂದ ತಾವು ಗುರುವಾರವೇ ಜನಿಸಿದ್ದು ಎಂದು ರಿಷಬ್ ಶೆಟ್ಟಿ ಅವರು ಹೇಳಿದರು. ‘ಇದು ನಾನು ಎಲ್ಲಿಯೂ ಹಂಚಿಕೊಳ್ಳದೇ ಇರುವ ವಿಚಾರ. ಆಗ ನಾನು ಹುಟ್ಟಿರಲಿಲ್ಲ. ನಮ್ಮ ಮನೆ ತುಂಬಾ ಕಷ್ಟದಲ್ಲಿ ಇದ್ದಂತಹ ಕಾಲ ಅದು. ಮಗ ಹುಟ್ಟಲಿ, ಅವನು ಹುಟ್ಟಿದ ಮೇಲೆ ಒಳ್ಳೆಯದಾಗಲಿ ಅಂತ ರಾಯರಲ್ಲಿ ನಮ್ಮ ತಾಯಿ ಹರಕೆ ಹೊತ್ತುಕೊಂಡರು. ಆನಂತರವೇ ನಾನು ಹುಟ್ಟಿದ್ದು. ನಾನು ಗುರುವಾರವೇ ಜನಿಸಿದ್ದು. ಏನೇ ಕಷ್ಟ ಬಂದರೂ ರಾಯರಿಂದ ಒಳ್ಳೆಯದಾಗತ್ತೆ ಅಂತ ನಮ್ಮ ತಾಯಿ ಹೇಳುತ್ತಾರೆ. ಶೂಟಿಂಗ್ ವೇಳೆ ಏನೇ ಸಮಸ್ಯೆ ಬಂದರೂ ರಾಯರನ್ನು ನೆನಪಿಸಿಕೊಂಡರೆ ಪರಿಹಾರ ಆಗುತ್ತದೆ’ ಎಂದು ರಿಷಬ್ ಶೆಟ್ಟಿ (Rishab Shetty) ಹೇಳಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More