‘ಪರಭಾಷೆಯ ಯಾವ ಚಿತ್ರಕ್ಕೂ ಕಮ್ಮಿ ಇಲ್ಲ ಜೇಮ್ಸ್​ ಟೀಸರ್​’; ಹಾಡಿ ಹೊಗಳಿದ ಪುನೀತ್​ ಫ್ಯಾನ್ಸ್​

James Movie Teaser: ‘ಪಿಆರ್​ಕೆ ಆಡಿಯೋ’ ಮೂಲಕ ‘ಜೇಮ್ಸ್​’ ಚಿತ್ರದ ಟೀಸರ್​ ಬಿಡುಗಡೆ ಆಗಿದೆ. ಬಿಡುಗಡೆಯಾದ ಕೆಲವೇ ನಿಮಿಷಗಳಲ್ಲಿ ಲಕ್ಷಾಂತರ ಬಾರಿ ವೀಕ್ಷಣೆ ಕಂಡಿದೆ.

‘ಪರಭಾಷೆಯ ಯಾವ ಚಿತ್ರಕ್ಕೂ ಕಮ್ಮಿ ಇಲ್ಲ ಜೇಮ್ಸ್​ ಟೀಸರ್​’; ಹಾಡಿ ಹೊಗಳಿದ ಪುನೀತ್​ ಫ್ಯಾನ್ಸ್​
| Updated By: ಮದನ್​ ಕುಮಾರ್​

Updated on: Feb 11, 2022 | 2:01 PM

ಪುನೀತ್​ ರಾಜ್​ಕುಮಾರ್​ (Puneeth Rajkumar) ನಟನೆಯ ಬಹುನಿರೀಕ್ಷಿತ ‘ಜೇಮ್ಸ್​’ ಸಿನಿಮಾದ ಟೀಸರ್​ ಬಿಡುಗಡೆ ಆಗಿದೆ. ನಿರ್ದೇಶಕ ಚೇತನ್​ಕುಮಾರ್ ಅವರು ಈ ಚಿತ್ರವನ್ನು ಅದ್ದೂರಿಯಾಗಿ ಕಟ್ಟಿಕೊಡುತ್ತಿದ್ದಾರೆ ಎಂಬುದಕ್ಕೆ ಈ ಟೀಸರ್​ನಲ್ಲಿ ಸಾಕ್ಷಿ ಸಿಕ್ಕಿದೆ. ಟೀಸರ್​ ನೋಡಿ ಪುನೀತ್​ ರಾಜ್​ಕುಮಾರ್​ ಅಭಿಮಾನಿಗಳು (Puneeth Rajkumar Fans) ಫಿದಾ ಆಗಿದ್ದಾರೆ. ಎಲ್ಲರಿಂದಲೂ ಪಾಸಿಟಿವ್​ ಪ್ರತಿಕ್ರಿಯೆ ಸಿಗುತ್ತಿದೆ. ಈ ಮೂಲಕ ‘ಜೇಮ್ಸ್​’ (James Kannada Movie) ಸಿನಿಮಾ ಮೇಲಿದ್ದ ನಿರೀಕ್ಷೆ ದುಪ್ಪಟ್ಟಾಗಿದೆ. ‘ಪರಭಾಷೆಯ ಯಾವ ಚಿತ್ರಕ್ಕೂ ಜೇಮ್ಸ್​ ಸಿನಿಮಾ ಟೀಸರ್​ ಕಮ್ಮಿ ಇಲ್ಲ. ಅಪ್ಪು ಅವರು ತುಂಬ ಯಂಗ್​ ಆಗಿ ಕಾಣಿಸುತ್ತಿದ್ದಾರೆ. ಈ ರೀತಿ ಕ್ವಾಲಿಟಿ ಸಿನಿಮಾ ನೀಡಿದರೆ ನಾವು ಹಿಂದೆಂದಿಗಿಂತಲೂ ಭರ್ಜರಿಯಾಗಿ ಸೆಲೆಬ್ರೇಟ್​ ಮಾಡುತ್ತೇವೆ’ ಎಂದು ಅಭಿಮಾನಿಗಳು ಹಾಡಿ ಹೊಗಳಿದ್ದಾರೆ. ‘ಪುನೀತ್​ ರಾಜ್​ಕುಮಾರ್​ ಅವರು ನಮಗೆ ಸ್ಫೂರ್ತಿ. ಜೇಮ್ಸ್​ ಎಷ್ಟು ದಿನ ಪ್ರದರ್ಶನ ಕಾಣಲಿದೆಯೋ ಅಷ್ಟು ದಿನಗಳ ಕಾಲ ಚಿತ್ರಮಂದಿರದ ಎದುರು ಅನ್ನದಾನ, ನೇತ್ರದಾನ ಮುಂತಾದ ಕಾರ್ಯಕ್ರಮ ಹಮ್ಮಿಕೊಳ್ಳುತ್ತೇವೆ’ ಎಂದಿದ್ದಾರೆ ಅಪ್ಪು ಫ್ಯಾನ್ಸ್​. ‘ಪಿಆರ್​ಕೆ ಆಡಿಯೋ’ ಮೂಲಕ ಜೇಮ್ಸ್​ ಚಿತ್ರದ ಟೀಸರ್​ ಬಿಡುಗಡೆ ಆಗಿದೆ. ಬಿಡುಗಡೆಯಾದ ಕೆಲವೇ ನಿಮಿಷಗಳಲ್ಲಿ ಲಕ್ಷಾಂತರ ಬಾರಿ ವೀಕ್ಷಣೆ ಕಂಡಿದೆ. ಮಾ.17ರಂದು ಈ ಸಿನಿಮಾ ಕನ್ನಡದ ಜೊತೆ ಹಿಂದಿ, ಮಲಯಾಳಂ, ತಮಿಳು ಮತ್ತು ತೆಲುಗಿನಲ್ಲಿಯೂ ಬಿಡುಗಡೆ ಆಗಲಿದೆ.

ಇದನ್ನೂ ಓದಿ:

‘ಜೇಮ್ಸ್​’ ಚಿತ್ರಕ್ಕೆ ಹೇಗೆ ಡಬ್ಬಿಂಗ್​ ಮಾಡಿದ್ನೋ ಗೊತ್ತಿಲ್ಲ, ದೇವರೇ ನನಗೆ ಶಕ್ತಿ ಕೊಟ್ಟಿರಬೇಕು: ಶಿವಣ್ಣ

ಈ ಶಾಲೆಯಲ್ಲಿ ಪುನೀತ್​ ಫೋಟೋಗೆ ದಿನವೂ ಪೂಜೆ! ಪ್ರತಿ ವರ್ಷ 15 ಮಕ್ಕಳ ದತ್ತು ಸ್ವೀಕಾರ

Follow us
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​