ಕಾಶ್ಮೀರಿ ಪಂಡಿತರಿಗಿರುವ ಬೆದರಿಕೆ ಕುರಿತು ಕಳವಳ ವ್ಯಕ್ತಪಡಿಸಿದ ಸಿಎಂ ಒಮರ್ ಅಬ್ದುಲ್ಲಾ
ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿಕೊಂಡು ಬಂದಿರುವ ಬೆದರಿಕೆಗಳ ಕುರಿತು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ಎಚ್ಚರಿಕೆಗಳ ಮೂಲ ಯಾವುದು ಎಂದು ತನಿಖೆ ಮಾಡುವಂತೆ ಮತ್ತು ಸಮುದಾಯದ ಸುರಕ್ಷತೆಯನ್ನು ಖಚಿತಪಡಿಸುವಂತೆ ಅವರು ಪೊಲೀಸ್ ಹಾಗೂ ಗುಪ್ತಚರ ಸಂಸ್ಥೆಗಳನ್ನು ಆಗ್ರಹಿಸಿದ್ದಾರೆ. ಸುಮಾರು 2 ವರ್ಷಗಳ ಹಿಂದೆ ಕಾಶ್ಮೀರಿ ಪಂಡಿತ್ ಉದ್ಯೋಗಿಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದ್ದ ಘಟನೆಯನ್ನು ಉಲ್ಲೇಖಿಸಿದ ಮುಖ್ಯಮಂತ್ರಿಗಳು, ಆ ಸಮಯದಲ್ಲಿ ಸರ್ಕಾರವು ಸಾಕಷ್ಟು ತೊಂದರೆಗಳನ್ನು ಎದುರಿಸಬೇಕಾಯಿತು ಎಂದು ಸಿಎಂ ಹೇಳಿದ್ದಾರೆ.
ಶ್ರೀನಗರ, ಆಗಸ್ಟ್ 24: ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ (Omar Abdullah) ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿಕೊಂಡು ಬಂದಿರುವ ಬೆದರಿಕೆಗಳ ಕುರಿತು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ಎಚ್ಚರಿಕೆಗಳ ಮೂಲ ಯಾವುದು ಎಂದು ತನಿಖೆ ಮಾಡುವಂತೆ ಮತ್ತು ಸಮುದಾಯದ ಸುರಕ್ಷತೆಯನ್ನು ಖಚಿತಪಡಿಸುವಂತೆ ಅವರು ಪೊಲೀಸ್ ಹಾಗೂ ಗುಪ್ತಚರ ಸಂಸ್ಥೆಗಳನ್ನು ಆಗ್ರಹಿಸಿದ್ದಾರೆ. ಸುಮಾರು 2 ವರ್ಷಗಳ ಹಿಂದೆ ಕಾಶ್ಮೀರಿ ಪಂಡಿತ್ ಉದ್ಯೋಗಿಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದ್ದ ಘಟನೆಯನ್ನು ಉಲ್ಲೇಖಿಸಿದ ಮುಖ್ಯಮಂತ್ರಿಗಳು, ಆ ಸಮಯದಲ್ಲಿ ಸರ್ಕಾರವು ಸಾಕಷ್ಟು ತೊಂದರೆಗಳನ್ನು ಎದುರಿಸಬೇಕಾಯಿತು ಎಂದು ಸಿಎಂ ಹೇಳಿದ್ದಾರೆ.
ಕಾಶ್ಮೀರಿ ಪಂಡಿತರ, ಅದರಲ್ಲೂ ವಿಶೇಷವಾಗಿ ಜಮ್ಮು ಮತ್ತು ಕಾಶ್ಮೀರಕ್ಕೆ ಮರಳಿರುವ ಅಥವಾ ಅಲ್ಲಿ ಕೆಲಸ ಮುಂದುವರಿಸುತ್ತಿರುವವರ ಭದ್ರತೆಯ ಕುರಿತು ಕಳವಳ ವ್ಯಕ್ತವಾಗಿರುವ ಬೆನ್ನಲ್ಲೇ ಅವರ ಈ ಹೇಳಿಕೆ ಬಂದಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Loading...
Unable to load recommendations.
Follow Us