Video: ಕತ್ರಾ: ವೈಷ್ಣೋದೇವಿ ಯಾತ್ರೆ ಮಾರ್ಗದಲ್ಲಿ ಭೂಕುಸಿತ, ಹಲವರಿಗೆ ಗಾಯ

Updated on: Jul 21, 2025 | 10:03 AM

ಜಮ್ಮು ಮತ್ತು ಕಾಶ್ಮೀರದ ಕೆಲವು ಭಾಗಗಳಲ್ಲಿ ಸೋಮವಾರ ಬೆಳಿಗ್ಗೆ ಸುರಿದ ಭಾರೀ ಮಳೆಯಿಂದಾಗಿ ಕತ್ರಾದಲ್ಲಿ ಮಾತಾ ವೈಷ್ಣೋ ದೇವಿ ಯಾತ್ರಾ ಮಾರ್ಗದಲ್ಲಿ ಭೂಕುಸಿತ ಸಂಭವಿಸಿದೆ.ಮಾತಾ ವೈಷ್ಣೋ ದೇವಿ ಯಾತ್ರಾ ಮಾರ್ಗದ ಬಂಗಂಗಾ ಬಳಿ ಇಂದು ಬೆಳಗ್ಗೆ 8 ಗಂಟೆ ಸುಮಾರಿಗೆ ಭಾರಿ ಭೂಕುಸಿತ ಸಂಭವಿಸಿದ್ದು, ಇದರಲ್ಲಿ ಅನೇಕ ಪ್ರಯಾಣಿಕರು ಅವಶೇಷಗಳಡಿಯಲ್ಲಿ ಸಿಲುಕಿಕೊಂಡಿದ್ದಾರೆ. ಕತ್ರಾದಿಂದ ಭವನಕ್ಕೆ ಹೋಗುವ ಹಳೆಯ ಯಾತ್ರಾ ಮಾರ್ಗದಲ್ಲಿರುವ ಬಂಗಂಗಾ ಪ್ರದೇಶದಲ್ಲಿ ಬೆಟ್ಟದಿಂದ ಇದ್ದಕ್ಕಿದ್ದಂತೆ ದೊಡ್ಡ ಕಲ್ಲುಗಳು ಧರೆಗುರುಳಿವೆ

ಕತ್ರಾ, ಜುಲೈ 21: ಜಮ್ಮು ಮತ್ತು ಕಾಶ್ಮೀರದ ಕೆಲವು ಭಾಗಗಳಲ್ಲಿ ಸೋಮವಾರ ಬೆಳಿಗ್ಗೆ ಸುರಿದ ಭಾರೀ ಮಳೆಯಿಂದಾಗಿ ಕತ್ರಾದಲ್ಲಿ ಮಾತಾ ವೈಷ್ಣೋ ದೇವಿ ಯಾತ್ರಾ ಮಾರ್ಗದಲ್ಲಿ ಭೂಕುಸಿತ ಸಂಭವಿಸಿದೆ.ಮಾತಾ ವೈಷ್ಣೋ ದೇವಿ ಯಾತ್ರಾ ಮಾರ್ಗದ ಬಂಗಂಗಾ ಬಳಿ ಇಂದು ಬೆಳಗ್ಗೆ 8 ಗಂಟೆ ಸುಮಾರಿಗೆ ಭಾರಿ ಭೂಕುಸಿತ ಸಂಭವಿಸಿದ್ದು, ಇದರಲ್ಲಿ ಅನೇಕ ಪ್ರಯಾಣಿಕರು ಅವಶೇಷಗಳಡಿಯಲ್ಲಿ ಸಿಲುಕಿಕೊಂಡಿದ್ದಾರೆ. ಕತ್ರಾದಿಂದ ಭವನಕ್ಕೆ ಹೋಗುವ ಹಳೆಯ ಯಾತ್ರಾ ಮಾರ್ಗದಲ್ಲಿರುವ ಬಂಗಂಗಾ ಪ್ರದೇಶದಲ್ಲಿ ಬೆಟ್ಟದಿಂದ ಇದ್ದಕ್ಕಿದ್ದಂತೆ ದೊಡ್ಡ ಕಲ್ಲುಗಳು ಧರೆಗುರುಳಿವೆ.ಈ ಮಾರ್ಗವನ್ನು ಮಾತಾ ವೈಷ್ಣೋ ದೇವಿ ಯಾತ್ರೆಯ ಹಳೆಯ ಮತ್ತು ಮುಖ್ಯ ಮಾರ್ಗವೆಂದು ಪರಿಗಣಿಸಲಾಗಿದೆ, ಇಲ್ಲಿ ಪ್ರತಿದಿನ ಸಾವಿರಾರು ಭಕ್ತರು ದರ್ಶನಕ್ಕಾಗಿ ಹಾದು ಹೋಗುತ್ತಾರೆ. ಅಪಘಾತದ ನಂತರ, ಈ ಪ್ರದೇಶದಲ್ಲಿ ಸಂಚಾರವನ್ನು ಸ್ವಲ್ಪ ಸಮಯದವರೆಗೆ ಸ್ಥಗಿತಗೊಳಿಸಲಾಗಿದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More