AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲಂಗಾಣದಲ್ಲೂ ಜನಸೇನಾ ಚುನಾವಣೆಗೆ ಸ್ಪರ್ಧಿಸಲಿದೆ; ಕಾಂಗ್ರೆಸ್​​ಗೆ ಆಂಧ್ರದ ಡಿಸಿಎಂ ಪವನ್ ಕಲ್ಯಾಣ್ ಸವಾಲು

ತೆಲಂಗಾಣದಲ್ಲೂ ಜನಸೇನಾ ಚುನಾವಣೆಗೆ ಸ್ಪರ್ಧಿಸಲಿದೆ; ಕಾಂಗ್ರೆಸ್​​ಗೆ ಆಂಧ್ರದ ಡಿಸಿಎಂ ಪವನ್ ಕಲ್ಯಾಣ್ ಸವಾಲು

ಸುಷ್ಮಾ ಚಕ್ರೆ
|

Updated on: Jun 02, 2026 | 8:35 PM

Share

ತೆಲಂಗಾಣ ರಾಜಕೀಯದಲ್ಲಿ ಜನಸೇನಾ ಬಗ್ಗೆ ಪವನ್ ಕಲ್ಯಾಣ್ ಅವರ ಇತ್ತೀಚಿನ ಹೇಳಿಕೆಗಳು ವೈರಲ್ ಆಗಿವೆ. ಕೆಲವು ನಾಯಕರು ತಮ್ಮನ್ನು ತೆಲಂಗಾಣಕ್ಕೆ ಪ್ರವೇಶಿಸಲು ಬಿಡುವುದಿಲ್ಲ ಎಂಬ ಎಚ್ಚರಿಕೆಯ ವಿರುದ್ಧ ಅವರು ಯುದ್ಧ ಘೋಷಿಸಿದ್ದಾರೆ. ಇಲ್ಲಿಯವರೆಗೆ ತೆಲಂಗಾಣ ರಾಜಕೀಯದ ಬಗ್ಗೆ ಹೆಚ್ಚು ಗಮನ ಹರಿಸದ ಪವನ್ ಕಲ್ಯಾಣ್ ಈಗ ತಮ್ಮ ಮಾರ್ಗವನ್ನು ಬದಲಾಯಿಸಿದ್ದಾರೆ.

ಹೈದರಾಬಾದ್, ಜೂನ್ 2: ಜನ ಸೇನಾ ಪಕ್ಷದ ಮುಖ್ಯಸ್ಥ ಮತ್ತು ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ (Pawan Kalyan) ಅವರ ಹೇಳಿಕೆಗಳು ತೆಲಂಗಾಣ ರಾಜಕೀಯದಲ್ಲಿ ಸಂಚಲನ ಮೂಡಿಸಿವೆ. “ತೆಲಂಗಾಣದಲ್ಲಿ ಕಾಲಿಡಲು ಬಿಡುವುದಿಲ್ಲ ಎಂದು ಕಾಂಗ್ರೆಸ್​​ನವರು ನನಗೆ ಬೆದರಿಕೆ ಹಾಕುತ್ತಿದ್ದಾರೆ. ತೆಲಂಗಾಣ ನಿಮ್ಮ ಕುಟುಂಬದ ಭೂಮಿಯೇ? ತೆಲಂಗಾಣದಲ್ಲೂ ಜನಸೇನಾ ಪಕ್ಷ ತನ್ನ ಸ್ಥಾನವನ್ನು ಗಟ್ಟಿಗೊಳಿಸಿಕೊಳ್ಳಲಿದೆ. ನಾವು ಮುಂದಿನ ಚುನಾವಣೆಯಲ್ಲಿ ತೆಲಂಗಾಣದಲ್ಲೂ ಸ್ಪರ್ಧಿಸುತ್ತೇವೆ. ನಾನೇ ತೆಲಂಗಾಣದಲ್ಲಿ ಸಂಚಾರ ಮಾಡಿ ಜನರನ್ನು ತಲುಪುತ್ತೇನೆ” ಎಂದು ಕಾಂಗ್ರೆಸ್ ನಾಯಕರನ್ನು ತರಾಟೆಗೆ ತೆಗೆದುಕೊಂಡ ಅವರು, ಜನ ಸೈನಿಕರು ಹೊಡೆತ ಮತ್ತು ಬೆದರಿಕೆಗಳಿಗೆ ಹೆದರುವುದಿಲ್ಲ ಎಂದು ಹೇಳಿದ್ದಾರೆ.

ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ದಕ್ಷಿಣ ಭಾರತಕ್ಕೆ ಬಂದು ಸ್ಪರ್ಧಿಸುವಾಗ ನಾವು ತೆಲಂಗಾಣದಲ್ಲಿ ಏಕೆ ಸ್ಪರ್ಧಿಸಬಾರದು? ಎಂದು ಪವನ್ ಕಲ್ಯಾಣ್ ಪ್ರಶ್ನಿಸಿದ್ದಾರೆ. “ನನ್ನ ವಿರುದ್ಧ ಮೊದಲ ಪ್ರಕರಣ ತೆಲಂಗಾಣದಲ್ಲಿ ದಾಖಲಾಗಿತ್ತು. ನಾಲಿಗೆ ಕತ್ತರಿಸುವ ಬಗ್ಗೆ ಮಾತನಾಡುತ್ತಿರುವ ಕಾಂಗ್ರೆಸ್ ನಾಯಕರಿಗೆ ನಾನು ಹೇಳುತ್ತಿದ್ದೇನೆ. ಇಲ್ಲಿಗೆ ಯಾರೇ ಬಂದರೂ ಬನ್ನಿ, ನಾನು ನನ್ನ ನಾಲಿಗೆ ತೋರಿಸುತ್ತೇನೆ” ಎಂದು ಅವರು ಸವಾಲು ಹಾಕಿದ್ದಾರೆ. ಜನಸೇನಾ ತೆಲಂಗಾಣದ ಹೃದಯಭಾಗದಲ್ಲಿ ಹುಟ್ಟಿಕೊಂಡಿದ್ದು, ಇಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಜನಸೇನಾ ಸೈನಿಕರಿದ್ದಾರೆ ಎಂದು ಪವನ್ ಕಲ್ಯಾಣ್ ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More